ಹದಗೆಟ್ಟ ಕಾರ್ಮಲ್ ಜ್ಯೋತಿ ಶಾಲೆ ರಸ್ತೆ: ಕ್ಯಾರೆ ಎನ್ನದ ಅಧಿಕಾರಿಗಳು, ಜನಪ್ರತಿನಿಧಿಗಳು

ನಗರದ ಕೋರ್ಟ್ ಮುಂಭಾಗದಿಂದ ಕಾರ್ಮಲ್ ಜ್ಯೋತಿ ಶಾಲೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯನ್ನು ಸಂಪರ್ಕಿಸುವ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸ್ಥಳೀಯರು ರಸ್ತೆ ದುರಸ್ತಿಗಾಗಿ ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಕ್ಯಾರೆ ಎನ್ನದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ವಾಹನ ಸವಾರರು ಹಾಗೂ ವಿನಾಯಕ ನಗರದ ನಿವಾಸಿಗಳು ದೂರಿದ್ದಾರೆ.

ಯುಜಿಡಿ ಛೇಂಬರ್ ತುಂಬಿ ಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ರಸ್ತೆ ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ ನರಕಯಾತನೆ ಅನುಭವಿಸುವ ದುಸ್ಥಿತಿ ಎದುರಾಗಿದೆ.

ನೂರಾರು ವಾಹನಗಳು ಸಂಚರಿಸುವ, ಸಾವಿರಾರು ಜನರು ಓಡಾಡುವ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ಈ ರಸ್ತೆ ದುರಸ್ತಿಗೊಳಿಸಿ ಹಲವು ವರ್ಷಗಳೇ ಕಳೆದಿದೆ. ಮಳೆ ಬಂದರೆ ಮಳೆ ನೀರು ಸರಾಗವಾಗಿ ಹರಿಯುವುದಿಲ್ಲ. ಒಂದು ಸಣ್ಣ ಮಳೆ ಸುರಿದರೂ ಕೆಸರುಗದ್ದೆಯಂತಾಗುತ್ತದೆ.‌ ವಾಹನ ಸವಾರರು ಕೆಳಗೆ ಜಾರಿ ಬೀಳುವ ಭಯದಲ್ಲೇ ಮುಂದೆ ಸಾಗುತ್ತಾರೆ. ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಹಲವು ಬಾರಿ ಈ ರಸ್ತೆಯಲ್ಲಿ ಎದ್ದು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಮಳೆ ಬರುವ ಮುನ್ನ ಧೂಳಿನ ಆಗರವಾಗಿದ್ದ ಈ ರಸ್ತೆ ಈಗ ಮಳೆಗಾಲ ಹಿನ್ನೆಲೆ ಸಂಚರಿಸುವವರಿಗೆ ಕೆಸರಿನ ಮಜ್ಜನ ಮಾಡಿಸುತ್ತಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು‌ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ದುರಸ್ತಿ ಮಾಡದಿದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ…

27 minutes ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 hour ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

5 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

6 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago