ನಗರದ ಕೋರ್ಟ್ ಮುಂಭಾಗದಿಂದ ಕಾರ್ಮಲ್ ಜ್ಯೋತಿ ಶಾಲೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯನ್ನು ಸಂಪರ್ಕಿಸುವ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸ್ಥಳೀಯರು ರಸ್ತೆ ದುರಸ್ತಿಗಾಗಿ ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಕ್ಯಾರೆ ಎನ್ನದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ವಾಹನ ಸವಾರರು ಹಾಗೂ ವಿನಾಯಕ ನಗರದ ನಿವಾಸಿಗಳು ದೂರಿದ್ದಾರೆ.
ಯುಜಿಡಿ ಛೇಂಬರ್ ತುಂಬಿ ಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ರಸ್ತೆ ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ ನರಕಯಾತನೆ ಅನುಭವಿಸುವ ದುಸ್ಥಿತಿ ಎದುರಾಗಿದೆ.
ನೂರಾರು ವಾಹನಗಳು ಸಂಚರಿಸುವ, ಸಾವಿರಾರು ಜನರು ಓಡಾಡುವ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ಈ ರಸ್ತೆ ದುರಸ್ತಿಗೊಳಿಸಿ ಹಲವು ವರ್ಷಗಳೇ ಕಳೆದಿದೆ. ಮಳೆ ಬಂದರೆ ಮಳೆ ನೀರು ಸರಾಗವಾಗಿ ಹರಿಯುವುದಿಲ್ಲ. ಒಂದು ಸಣ್ಣ ಮಳೆ ಸುರಿದರೂ ಕೆಸರುಗದ್ದೆಯಂತಾಗುತ್ತದೆ. ವಾಹನ ಸವಾರರು ಕೆಳಗೆ ಜಾರಿ ಬೀಳುವ ಭಯದಲ್ಲೇ ಮುಂದೆ ಸಾಗುತ್ತಾರೆ. ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಹಲವು ಬಾರಿ ಈ ರಸ್ತೆಯಲ್ಲಿ ಎದ್ದು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಮಳೆ ಬರುವ ಮುನ್ನ ಧೂಳಿನ ಆಗರವಾಗಿದ್ದ ಈ ರಸ್ತೆ ಈಗ ಮಳೆಗಾಲ ಹಿನ್ನೆಲೆ ಸಂಚರಿಸುವವರಿಗೆ ಕೆಸರಿನ ಮಜ್ಜನ ಮಾಡಿಸುತ್ತಿದೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ದುರಸ್ತಿ ಮಾಡದಿದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…