ಹದಗೆಟ್ಟ ಕಾರ್ಮಲ್ ಜ್ಯೋತಿ ಶಾಲೆ ರಸ್ತೆ: ಕ್ಯಾರೆ ಎನ್ನದ ಅಧಿಕಾರಿಗಳು, ಜನಪ್ರತಿನಿಧಿಗಳು

ನಗರದ ಕೋರ್ಟ್ ಮುಂಭಾಗದಿಂದ ಕಾರ್ಮಲ್ ಜ್ಯೋತಿ ಶಾಲೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯನ್ನು ಸಂಪರ್ಕಿಸುವ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸ್ಥಳೀಯರು ರಸ್ತೆ ದುರಸ್ತಿಗಾಗಿ ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಕ್ಯಾರೆ ಎನ್ನದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ವಾಹನ ಸವಾರರು ಹಾಗೂ ವಿನಾಯಕ ನಗರದ ನಿವಾಸಿಗಳು ದೂರಿದ್ದಾರೆ.

ಯುಜಿಡಿ ಛೇಂಬರ್ ತುಂಬಿ ಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ರಸ್ತೆ ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ ನರಕಯಾತನೆ ಅನುಭವಿಸುವ ದುಸ್ಥಿತಿ ಎದುರಾಗಿದೆ.

ನೂರಾರು ವಾಹನಗಳು ಸಂಚರಿಸುವ, ಸಾವಿರಾರು ಜನರು ಓಡಾಡುವ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ಈ ರಸ್ತೆ ದುರಸ್ತಿಗೊಳಿಸಿ ಹಲವು ವರ್ಷಗಳೇ ಕಳೆದಿದೆ. ಮಳೆ ಬಂದರೆ ಮಳೆ ನೀರು ಸರಾಗವಾಗಿ ಹರಿಯುವುದಿಲ್ಲ. ಒಂದು ಸಣ್ಣ ಮಳೆ ಸುರಿದರೂ ಕೆಸರುಗದ್ದೆಯಂತಾಗುತ್ತದೆ.‌ ವಾಹನ ಸವಾರರು ಕೆಳಗೆ ಜಾರಿ ಬೀಳುವ ಭಯದಲ್ಲೇ ಮುಂದೆ ಸಾಗುತ್ತಾರೆ. ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಹಲವು ಬಾರಿ ಈ ರಸ್ತೆಯಲ್ಲಿ ಎದ್ದು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಮಳೆ ಬರುವ ಮುನ್ನ ಧೂಳಿನ ಆಗರವಾಗಿದ್ದ ಈ ರಸ್ತೆ ಈಗ ಮಳೆಗಾಲ ಹಿನ್ನೆಲೆ ಸಂಚರಿಸುವವರಿಗೆ ಕೆಸರಿನ ಮಜ್ಜನ ಮಾಡಿಸುತ್ತಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು‌ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ದುರಸ್ತಿ ಮಾಡದಿದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

2 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

7 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago