ಹದಗೆಟ್ಟ ಕಾರ್ಮಲ್ ಜ್ಯೋತಿ ಶಾಲೆ ರಸ್ತೆ: ಕ್ಯಾರೆ ಎನ್ನದ ಅಧಿಕಾರಿಗಳು, ಜನಪ್ರತಿನಿಧಿಗಳು

ನಗರದ ಕೋರ್ಟ್ ಮುಂಭಾಗದಿಂದ ಕಾರ್ಮಲ್ ಜ್ಯೋತಿ ಶಾಲೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯನ್ನು ಸಂಪರ್ಕಿಸುವ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸ್ಥಳೀಯರು ರಸ್ತೆ ದುರಸ್ತಿಗಾಗಿ ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಕ್ಯಾರೆ ಎನ್ನದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ವಾಹನ ಸವಾರರು ಹಾಗೂ ವಿನಾಯಕ ನಗರದ ನಿವಾಸಿಗಳು ದೂರಿದ್ದಾರೆ.

ಯುಜಿಡಿ ಛೇಂಬರ್ ತುಂಬಿ ಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ರಸ್ತೆ ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ ನರಕಯಾತನೆ ಅನುಭವಿಸುವ ದುಸ್ಥಿತಿ ಎದುರಾಗಿದೆ.

ನೂರಾರು ವಾಹನಗಳು ಸಂಚರಿಸುವ, ಸಾವಿರಾರು ಜನರು ಓಡಾಡುವ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ಈ ರಸ್ತೆ ದುರಸ್ತಿಗೊಳಿಸಿ ಹಲವು ವರ್ಷಗಳೇ ಕಳೆದಿದೆ. ಮಳೆ ಬಂದರೆ ಮಳೆ ನೀರು ಸರಾಗವಾಗಿ ಹರಿಯುವುದಿಲ್ಲ. ಒಂದು ಸಣ್ಣ ಮಳೆ ಸುರಿದರೂ ಕೆಸರುಗದ್ದೆಯಂತಾಗುತ್ತದೆ.‌ ವಾಹನ ಸವಾರರು ಕೆಳಗೆ ಜಾರಿ ಬೀಳುವ ಭಯದಲ್ಲೇ ಮುಂದೆ ಸಾಗುತ್ತಾರೆ. ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಹಲವು ಬಾರಿ ಈ ರಸ್ತೆಯಲ್ಲಿ ಎದ್ದು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಮಳೆ ಬರುವ ಮುನ್ನ ಧೂಳಿನ ಆಗರವಾಗಿದ್ದ ಈ ರಸ್ತೆ ಈಗ ಮಳೆಗಾಲ ಹಿನ್ನೆಲೆ ಸಂಚರಿಸುವವರಿಗೆ ಕೆಸರಿನ ಮಜ್ಜನ ಮಾಡಿಸುತ್ತಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು‌ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ದುರಸ್ತಿ ಮಾಡದಿದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

6 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

16 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

17 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

22 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago