ನಗರದ ಕೋರ್ಟ್ ಮುಂಭಾಗದಿಂದ ಕಾರ್ಮಲ್ ಜ್ಯೋತಿ ಶಾಲೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯನ್ನು ಸಂಪರ್ಕಿಸುವ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸ್ಥಳೀಯರು ರಸ್ತೆ ದುರಸ್ತಿಗಾಗಿ ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಕ್ಯಾರೆ ಎನ್ನದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ವಾಹನ ಸವಾರರು ಹಾಗೂ ವಿನಾಯಕ ನಗರದ ನಿವಾಸಿಗಳು ದೂರಿದ್ದಾರೆ.
ಯುಜಿಡಿ ಛೇಂಬರ್ ತುಂಬಿ ಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ರಸ್ತೆ ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ ನರಕಯಾತನೆ ಅನುಭವಿಸುವ ದುಸ್ಥಿತಿ ಎದುರಾಗಿದೆ.
ನೂರಾರು ವಾಹನಗಳು ಸಂಚರಿಸುವ, ಸಾವಿರಾರು ಜನರು ಓಡಾಡುವ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ಈ ರಸ್ತೆ ದುರಸ್ತಿಗೊಳಿಸಿ ಹಲವು ವರ್ಷಗಳೇ ಕಳೆದಿದೆ. ಮಳೆ ಬಂದರೆ ಮಳೆ ನೀರು ಸರಾಗವಾಗಿ ಹರಿಯುವುದಿಲ್ಲ. ಒಂದು ಸಣ್ಣ ಮಳೆ ಸುರಿದರೂ ಕೆಸರುಗದ್ದೆಯಂತಾಗುತ್ತದೆ. ವಾಹನ ಸವಾರರು ಕೆಳಗೆ ಜಾರಿ ಬೀಳುವ ಭಯದಲ್ಲೇ ಮುಂದೆ ಸಾಗುತ್ತಾರೆ. ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಹಲವು ಬಾರಿ ಈ ರಸ್ತೆಯಲ್ಲಿ ಎದ್ದು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಮಳೆ ಬರುವ ಮುನ್ನ ಧೂಳಿನ ಆಗರವಾಗಿದ್ದ ಈ ರಸ್ತೆ ಈಗ ಮಳೆಗಾಲ ಹಿನ್ನೆಲೆ ಸಂಚರಿಸುವವರಿಗೆ ಕೆಸರಿನ ಮಜ್ಜನ ಮಾಡಿಸುತ್ತಿದೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ದುರಸ್ತಿ ಮಾಡದಿದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…