ನಗರದ ಕೋರ್ಟ್ ಮುಂಭಾಗದಿಂದ ಕಾರ್ಮಲ್ ಜ್ಯೋತಿ ಶಾಲೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯನ್ನು ಸಂಪರ್ಕಿಸುವ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸ್ಥಳೀಯರು ರಸ್ತೆ ದುರಸ್ತಿಗಾಗಿ ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಕ್ಯಾರೆ ಎನ್ನದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ವಾಹನ ಸವಾರರು ಹಾಗೂ ವಿನಾಯಕ ನಗರದ ನಿವಾಸಿಗಳು ದೂರಿದ್ದಾರೆ.
ಯುಜಿಡಿ ಛೇಂಬರ್ ತುಂಬಿ ಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ರಸ್ತೆ ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ ನರಕಯಾತನೆ ಅನುಭವಿಸುವ ದುಸ್ಥಿತಿ ಎದುರಾಗಿದೆ.
ನೂರಾರು ವಾಹನಗಳು ಸಂಚರಿಸುವ, ಸಾವಿರಾರು ಜನರು ಓಡಾಡುವ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ಈ ರಸ್ತೆ ದುರಸ್ತಿಗೊಳಿಸಿ ಹಲವು ವರ್ಷಗಳೇ ಕಳೆದಿದೆ. ಮಳೆ ಬಂದರೆ ಮಳೆ ನೀರು ಸರಾಗವಾಗಿ ಹರಿಯುವುದಿಲ್ಲ. ಒಂದು ಸಣ್ಣ ಮಳೆ ಸುರಿದರೂ ಕೆಸರುಗದ್ದೆಯಂತಾಗುತ್ತದೆ. ವಾಹನ ಸವಾರರು ಕೆಳಗೆ ಜಾರಿ ಬೀಳುವ ಭಯದಲ್ಲೇ ಮುಂದೆ ಸಾಗುತ್ತಾರೆ. ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಹಲವು ಬಾರಿ ಈ ರಸ್ತೆಯಲ್ಲಿ ಎದ್ದು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಮಳೆ ಬರುವ ಮುನ್ನ ಧೂಳಿನ ಆಗರವಾಗಿದ್ದ ಈ ರಸ್ತೆ ಈಗ ಮಳೆಗಾಲ ಹಿನ್ನೆಲೆ ಸಂಚರಿಸುವವರಿಗೆ ಕೆಸರಿನ ಮಜ್ಜನ ಮಾಡಿಸುತ್ತಿದೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ದುರಸ್ತಿ ಮಾಡದಿದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.
ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…
ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…