Categories: ವಿಜಯಪುರ

ಹದಗೆಟ್ಟ ರಸ್ತೆಗೆ ದಶಕ, ಇನ್ನು ಯಾವಾಗ ರಸ್ತೆ ಭಾಗ್ಯ..?* *ನಿತ್ಯವೂ ಟಾಕಳಿ ಗ್ರಾಮಸ್ಥರ ನರಕ ಸದೃಶ್ಯ, ಕೇಳೋರ್ಯಾರು..!

ಚಡಚಣ(ವಿಜಯಪುರ ಜಿಲ್ಲೆ): ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಗುಂಡಿಗಳು ಹೊಂಡಮಯಗಳಾಗಿ ಪರಿವರ್ತನೆಗೊಂಡು ನಿತ್ಯವೂ ನರಕಯಾತನೆ ಅನುಭವಿಸುವುದು ಸಾಮಾನ್ಯ. ಈ ರಸ್ತೆ ಮೇಲೆ ಒಂದು ಸಲ ಸಂಚರಿಸಿದವರು ಮತ್ತೊಮ್ಮೆ ಇತ್ತ ತಿರುಗಿಯೂ ನೋಡುವುದಿಲ್ಲ. ಆದರೆ ಇಂತಹ ತೀವ್ರ ಹದಗೆಟ್ಟ ರಸ್ತೆ ಮೇಲೆಯೇ ನಿತ್ಯವೂ ಸಂಚರಿಸುವ ಅನಿವಾರ್ಯ ಮಾತ್ರ ಈ ಗ್ರಾಮದ ಜನರಿಗೆ ತಪ್ಪಿಲ್ಲ..!

ಹೌದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಟಾಕಳಿ ಗ್ರಾಮದಿಂದ ಕೆರೂರು ಮತ್ತು ಟಾಕಳಿ ಗ್ರಾಮದಿಂದ ಉಮರಾಣಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸುಮಾರು ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಹಾಳಾಗಿದ್ದು, ಜನ ಸಾಮಾನ್ಯರ ಸಂಚಾರ ದುಸ್ತರವಾಗಿದೆ. ಚುನಾವಣೆ ಸಮಯದಲ್ಲಿ ಮಾತ್ರ ಬಂದು ಆಶ್ವಾಸನೆ ಕೊಟ್ಟು ಮಾಯವಾಗುವ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಹ ಗ್ರಾಮೀಣ ರಸ್ತೆಗಳ ದುರಸ್ತಿ ಕಡೆ ಕ್ಯಾರೇ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

ಪಟ್ಟಣಗಳಾದ ಚಡಚಣ, ಇಂಡಿ, ವಿಜಯಪುರಕ್ಕೆ ತೆರಳಲು ಜನರು ಮತ್ತು ರೈತರು ಹೊಲ-ಗದ್ದೆಗಳಿಗೆ, ವಿದ್ಯಾರ್ಥಿಗಳು ಶಾಲೆಗಳಿಗೆ, ರೋಗಿಗಳು ಆಸ್ಪತ್ರೆಗೆ ತೆರಳಲು ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಆದರೆ ರಸ್ತೆಯ ಎರಡು ಇಕ್ಕೆಲಗಳಲ್ಲಿ ಬೆಳೆದು ನಿಂತ ಮುಳ್ಳಿನ ಗಿಡಗಳಿಂದ ಸವಾರರಿಗೆ ಎದುರಿಗೆ ಬರುವ ವಾಹನಗಳು ಕಾಣುವುದಿಲ್ಲ. ಇನ್ನು ದ್ವಿಚಕ್ರ ವಾಹನ ಸವಾರರ ಪ್ರಯಾಣವಂತೂ ಹೇಳತೀರದು, ಬೈಕ್ ಸವಾರರು ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ಆಯಾತಪ್ಪಿ ಗಾಯಗಳು ಮಾಡಿಕೊಳ್ಳುತ್ತಿರುವ ದೃಶ್ಯ ಕಾಣಬಹುದು.

ಈ ರಸ್ತೆಯಲ್ಲಿ ನಿತ್ಯವೂ ಹರಸಾಹಸಪಟ್ಟು ಪ್ರಯಾಣಿಸುವ ಗ್ರಾಮಸ್ಥರು ಹಾಗೂ ರೈತರ ಗೋಳು ಕೇಳೊರಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಇದಕ್ಕೂ ತಮಗೂ ಏನು ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಗ್ರಾಮಸ್ಥರ ಕಂಗೆಣ್ಣಿಗೆ ಗುರಿಯಾಗಿದೆ.

ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ರಸ್ತೆ ಕಾಮಗಾರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ “ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡಲ್ಲ” ಎಂಬುವಂತೆ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ ಜತೆಗೆ ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ ಸರ್ಕಾರದ ಅನೇಕ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಗ್ರಾಮೀಣ ಭಾಗದಲ್ಲಿ ಒಳ್ಳೆಯ ಶಾಲೆ, ಶಿಕ್ಷಕರ ಕೊರತೆ, ಸರಿಯಾದ ರಸೆ, ಬಸ್ ಸಂಪರ್ಕವಿಲ್ಲದೆ ಜನರು ಅಭಿವೃದ್ಧಿಯಿಂದ ಬಹಳಷ್ಟು ದೂರ ಉಳಿದು, ವಂಚಿತರಾಗಿರುವುದು ಇಂದಿಗೂ ಕಾಣುತ್ತಿದ್ದೇವೆ.
ಆದಷ್ಟು ಬೇಗ ಈ ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೊಸ ರಸ್ತೆ ಮಾಡಿಸುವ ಮೂಲಕ ರೈತಾಪಿ ಜನರ ಸಂಚಾರ ಹಾಗೂ ಪಟ್ಟಣದ ಮಾರುಕಟ್ಟೆಗಳಿಗೆ ರೈತರ ಬೆಳೆಗಳನ್ನು ಸಾಗಿಸಲು ಒಳ್ಳೆಯ ರಸ್ತೆ ಸಂಪರ್ಕದ ಅನುಕೂಲ ಕಲ್ಪಿಸಬೇಕಿದೆ.

“ಅಧಿಕ ಮಳೆ ಬಂದರೆ ಪಕ್ಕದಲ್ಲಿರುವ ಭೀಮಾ ನದಿ ನೀರು ಹರಿದು ಟಾಕಳಿ-ಕೆರೂರ ರಸ್ತೆ ನಡುವಿನ ಹಳ್ಳಕ್ಕೆ ಸೇತುವೆ ಇಲ್ಲದ ಕಾರಣ ಸಂಚಾರ ಸ್ಥಗಿತವಾಗುತ್ತದೆ. ರಸ್ತೆ ಹದಗೆಟ್ಟ ಕಾರಣ ಗ್ರಾಮಕ್ಕೆ ಬರುವ ಬಸ್ ಕೂಡ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು, ಗರ್ಭೀಣಿಯರು ಈ ರಸ್ತೆಯಲ್ಲಿ ಸಾಗಲು ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಟಾಕಳಿಯಿಂದ ಕೆರೂರಕ್ಕೆ ಮತ್ತು ಟಾಕಳಿಯಿಂದ ಉಮರಾಣಿಗೆ ಸಂಪರ್ಕಿಸುವ ರಸ್ತೆ ಡಾಂಬರಿಕರಣ ಮಾಡಲು ಮುಂದಾಗಬೇಕುʼ ಎಂದು ಅಮಸಿದ್ದ ಮಲ್ಲಪ್ಪ ಒಡೆಯರ (ಗ್ರಾಮಸ್ಥರು, ಟಾಕಳಿ ಗ್ರಾಮ) ಒತ್ತಾಯಿಸಿದರು.

ವರದಿ: ರೇವಣಸಿದ್ಧ ಬಗಲಿ*

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

9 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago