Categories: ವಿಜಯಪುರ

ಹದಗೆಟ್ಟ ರಸ್ತೆಗೆ ದಶಕ, ಇನ್ನು ಯಾವಾಗ ರಸ್ತೆ ಭಾಗ್ಯ..?* *ನಿತ್ಯವೂ ಟಾಕಳಿ ಗ್ರಾಮಸ್ಥರ ನರಕ ಸದೃಶ್ಯ, ಕೇಳೋರ್ಯಾರು..!

ಚಡಚಣ(ವಿಜಯಪುರ ಜಿಲ್ಲೆ): ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಗುಂಡಿಗಳು ಹೊಂಡಮಯಗಳಾಗಿ ಪರಿವರ್ತನೆಗೊಂಡು ನಿತ್ಯವೂ ನರಕಯಾತನೆ ಅನುಭವಿಸುವುದು ಸಾಮಾನ್ಯ. ಈ ರಸ್ತೆ ಮೇಲೆ ಒಂದು ಸಲ ಸಂಚರಿಸಿದವರು ಮತ್ತೊಮ್ಮೆ ಇತ್ತ ತಿರುಗಿಯೂ ನೋಡುವುದಿಲ್ಲ. ಆದರೆ ಇಂತಹ ತೀವ್ರ ಹದಗೆಟ್ಟ ರಸ್ತೆ ಮೇಲೆಯೇ ನಿತ್ಯವೂ ಸಂಚರಿಸುವ ಅನಿವಾರ್ಯ ಮಾತ್ರ ಈ ಗ್ರಾಮದ ಜನರಿಗೆ ತಪ್ಪಿಲ್ಲ..!

ಹೌದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಟಾಕಳಿ ಗ್ರಾಮದಿಂದ ಕೆರೂರು ಮತ್ತು ಟಾಕಳಿ ಗ್ರಾಮದಿಂದ ಉಮರಾಣಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸುಮಾರು ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಹಾಳಾಗಿದ್ದು, ಜನ ಸಾಮಾನ್ಯರ ಸಂಚಾರ ದುಸ್ತರವಾಗಿದೆ. ಚುನಾವಣೆ ಸಮಯದಲ್ಲಿ ಮಾತ್ರ ಬಂದು ಆಶ್ವಾಸನೆ ಕೊಟ್ಟು ಮಾಯವಾಗುವ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಹ ಗ್ರಾಮೀಣ ರಸ್ತೆಗಳ ದುರಸ್ತಿ ಕಡೆ ಕ್ಯಾರೇ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

ಪಟ್ಟಣಗಳಾದ ಚಡಚಣ, ಇಂಡಿ, ವಿಜಯಪುರಕ್ಕೆ ತೆರಳಲು ಜನರು ಮತ್ತು ರೈತರು ಹೊಲ-ಗದ್ದೆಗಳಿಗೆ, ವಿದ್ಯಾರ್ಥಿಗಳು ಶಾಲೆಗಳಿಗೆ, ರೋಗಿಗಳು ಆಸ್ಪತ್ರೆಗೆ ತೆರಳಲು ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಆದರೆ ರಸ್ತೆಯ ಎರಡು ಇಕ್ಕೆಲಗಳಲ್ಲಿ ಬೆಳೆದು ನಿಂತ ಮುಳ್ಳಿನ ಗಿಡಗಳಿಂದ ಸವಾರರಿಗೆ ಎದುರಿಗೆ ಬರುವ ವಾಹನಗಳು ಕಾಣುವುದಿಲ್ಲ. ಇನ್ನು ದ್ವಿಚಕ್ರ ವಾಹನ ಸವಾರರ ಪ್ರಯಾಣವಂತೂ ಹೇಳತೀರದು, ಬೈಕ್ ಸವಾರರು ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ಆಯಾತಪ್ಪಿ ಗಾಯಗಳು ಮಾಡಿಕೊಳ್ಳುತ್ತಿರುವ ದೃಶ್ಯ ಕಾಣಬಹುದು.

ಈ ರಸ್ತೆಯಲ್ಲಿ ನಿತ್ಯವೂ ಹರಸಾಹಸಪಟ್ಟು ಪ್ರಯಾಣಿಸುವ ಗ್ರಾಮಸ್ಥರು ಹಾಗೂ ರೈತರ ಗೋಳು ಕೇಳೊರಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಇದಕ್ಕೂ ತಮಗೂ ಏನು ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಗ್ರಾಮಸ್ಥರ ಕಂಗೆಣ್ಣಿಗೆ ಗುರಿಯಾಗಿದೆ.

ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ರಸ್ತೆ ಕಾಮಗಾರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ “ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡಲ್ಲ” ಎಂಬುವಂತೆ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ ಜತೆಗೆ ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ ಸರ್ಕಾರದ ಅನೇಕ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಗ್ರಾಮೀಣ ಭಾಗದಲ್ಲಿ ಒಳ್ಳೆಯ ಶಾಲೆ, ಶಿಕ್ಷಕರ ಕೊರತೆ, ಸರಿಯಾದ ರಸೆ, ಬಸ್ ಸಂಪರ್ಕವಿಲ್ಲದೆ ಜನರು ಅಭಿವೃದ್ಧಿಯಿಂದ ಬಹಳಷ್ಟು ದೂರ ಉಳಿದು, ವಂಚಿತರಾಗಿರುವುದು ಇಂದಿಗೂ ಕಾಣುತ್ತಿದ್ದೇವೆ.
ಆದಷ್ಟು ಬೇಗ ಈ ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೊಸ ರಸ್ತೆ ಮಾಡಿಸುವ ಮೂಲಕ ರೈತಾಪಿ ಜನರ ಸಂಚಾರ ಹಾಗೂ ಪಟ್ಟಣದ ಮಾರುಕಟ್ಟೆಗಳಿಗೆ ರೈತರ ಬೆಳೆಗಳನ್ನು ಸಾಗಿಸಲು ಒಳ್ಳೆಯ ರಸ್ತೆ ಸಂಪರ್ಕದ ಅನುಕೂಲ ಕಲ್ಪಿಸಬೇಕಿದೆ.

“ಅಧಿಕ ಮಳೆ ಬಂದರೆ ಪಕ್ಕದಲ್ಲಿರುವ ಭೀಮಾ ನದಿ ನೀರು ಹರಿದು ಟಾಕಳಿ-ಕೆರೂರ ರಸ್ತೆ ನಡುವಿನ ಹಳ್ಳಕ್ಕೆ ಸೇತುವೆ ಇಲ್ಲದ ಕಾರಣ ಸಂಚಾರ ಸ್ಥಗಿತವಾಗುತ್ತದೆ. ರಸ್ತೆ ಹದಗೆಟ್ಟ ಕಾರಣ ಗ್ರಾಮಕ್ಕೆ ಬರುವ ಬಸ್ ಕೂಡ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು, ಗರ್ಭೀಣಿಯರು ಈ ರಸ್ತೆಯಲ್ಲಿ ಸಾಗಲು ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಟಾಕಳಿಯಿಂದ ಕೆರೂರಕ್ಕೆ ಮತ್ತು ಟಾಕಳಿಯಿಂದ ಉಮರಾಣಿಗೆ ಸಂಪರ್ಕಿಸುವ ರಸ್ತೆ ಡಾಂಬರಿಕರಣ ಮಾಡಲು ಮುಂದಾಗಬೇಕುʼ ಎಂದು ಅಮಸಿದ್ದ ಮಲ್ಲಪ್ಪ ಒಡೆಯರ (ಗ್ರಾಮಸ್ಥರು, ಟಾಕಳಿ ಗ್ರಾಮ) ಒತ್ತಾಯಿಸಿದರು.

ವರದಿ: ರೇವಣಸಿದ್ಧ ಬಗಲಿ*

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

21 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago