Categories: ವಿಜಯಪುರ

ಹದಗೆಟ್ಟ ರಸ್ತೆಗೆ ದಶಕ, ಇನ್ನು ಯಾವಾಗ ರಸ್ತೆ ಭಾಗ್ಯ..?* *ನಿತ್ಯವೂ ಟಾಕಳಿ ಗ್ರಾಮಸ್ಥರ ನರಕ ಸದೃಶ್ಯ, ಕೇಳೋರ್ಯಾರು..!

ಚಡಚಣ(ವಿಜಯಪುರ ಜಿಲ್ಲೆ): ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಗುಂಡಿಗಳು ಹೊಂಡಮಯಗಳಾಗಿ ಪರಿವರ್ತನೆಗೊಂಡು ನಿತ್ಯವೂ ನರಕಯಾತನೆ ಅನುಭವಿಸುವುದು ಸಾಮಾನ್ಯ. ಈ ರಸ್ತೆ ಮೇಲೆ ಒಂದು ಸಲ ಸಂಚರಿಸಿದವರು ಮತ್ತೊಮ್ಮೆ ಇತ್ತ ತಿರುಗಿಯೂ ನೋಡುವುದಿಲ್ಲ. ಆದರೆ ಇಂತಹ ತೀವ್ರ ಹದಗೆಟ್ಟ ರಸ್ತೆ ಮೇಲೆಯೇ ನಿತ್ಯವೂ ಸಂಚರಿಸುವ ಅನಿವಾರ್ಯ ಮಾತ್ರ ಈ ಗ್ರಾಮದ ಜನರಿಗೆ ತಪ್ಪಿಲ್ಲ..!

ಹೌದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಟಾಕಳಿ ಗ್ರಾಮದಿಂದ ಕೆರೂರು ಮತ್ತು ಟಾಕಳಿ ಗ್ರಾಮದಿಂದ ಉಮರಾಣಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸುಮಾರು ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಹಾಳಾಗಿದ್ದು, ಜನ ಸಾಮಾನ್ಯರ ಸಂಚಾರ ದುಸ್ತರವಾಗಿದೆ. ಚುನಾವಣೆ ಸಮಯದಲ್ಲಿ ಮಾತ್ರ ಬಂದು ಆಶ್ವಾಸನೆ ಕೊಟ್ಟು ಮಾಯವಾಗುವ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಹ ಗ್ರಾಮೀಣ ರಸ್ತೆಗಳ ದುರಸ್ತಿ ಕಡೆ ಕ್ಯಾರೇ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

ಪಟ್ಟಣಗಳಾದ ಚಡಚಣ, ಇಂಡಿ, ವಿಜಯಪುರಕ್ಕೆ ತೆರಳಲು ಜನರು ಮತ್ತು ರೈತರು ಹೊಲ-ಗದ್ದೆಗಳಿಗೆ, ವಿದ್ಯಾರ್ಥಿಗಳು ಶಾಲೆಗಳಿಗೆ, ರೋಗಿಗಳು ಆಸ್ಪತ್ರೆಗೆ ತೆರಳಲು ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಆದರೆ ರಸ್ತೆಯ ಎರಡು ಇಕ್ಕೆಲಗಳಲ್ಲಿ ಬೆಳೆದು ನಿಂತ ಮುಳ್ಳಿನ ಗಿಡಗಳಿಂದ ಸವಾರರಿಗೆ ಎದುರಿಗೆ ಬರುವ ವಾಹನಗಳು ಕಾಣುವುದಿಲ್ಲ. ಇನ್ನು ದ್ವಿಚಕ್ರ ವಾಹನ ಸವಾರರ ಪ್ರಯಾಣವಂತೂ ಹೇಳತೀರದು, ಬೈಕ್ ಸವಾರರು ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ಆಯಾತಪ್ಪಿ ಗಾಯಗಳು ಮಾಡಿಕೊಳ್ಳುತ್ತಿರುವ ದೃಶ್ಯ ಕಾಣಬಹುದು.

ಈ ರಸ್ತೆಯಲ್ಲಿ ನಿತ್ಯವೂ ಹರಸಾಹಸಪಟ್ಟು ಪ್ರಯಾಣಿಸುವ ಗ್ರಾಮಸ್ಥರು ಹಾಗೂ ರೈತರ ಗೋಳು ಕೇಳೊರಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಇದಕ್ಕೂ ತಮಗೂ ಏನು ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಗ್ರಾಮಸ್ಥರ ಕಂಗೆಣ್ಣಿಗೆ ಗುರಿಯಾಗಿದೆ.

ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ರಸ್ತೆ ಕಾಮಗಾರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ “ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡಲ್ಲ” ಎಂಬುವಂತೆ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ ಜತೆಗೆ ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ ಸರ್ಕಾರದ ಅನೇಕ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಗ್ರಾಮೀಣ ಭಾಗದಲ್ಲಿ ಒಳ್ಳೆಯ ಶಾಲೆ, ಶಿಕ್ಷಕರ ಕೊರತೆ, ಸರಿಯಾದ ರಸೆ, ಬಸ್ ಸಂಪರ್ಕವಿಲ್ಲದೆ ಜನರು ಅಭಿವೃದ್ಧಿಯಿಂದ ಬಹಳಷ್ಟು ದೂರ ಉಳಿದು, ವಂಚಿತರಾಗಿರುವುದು ಇಂದಿಗೂ ಕಾಣುತ್ತಿದ್ದೇವೆ.
ಆದಷ್ಟು ಬೇಗ ಈ ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೊಸ ರಸ್ತೆ ಮಾಡಿಸುವ ಮೂಲಕ ರೈತಾಪಿ ಜನರ ಸಂಚಾರ ಹಾಗೂ ಪಟ್ಟಣದ ಮಾರುಕಟ್ಟೆಗಳಿಗೆ ರೈತರ ಬೆಳೆಗಳನ್ನು ಸಾಗಿಸಲು ಒಳ್ಳೆಯ ರಸ್ತೆ ಸಂಪರ್ಕದ ಅನುಕೂಲ ಕಲ್ಪಿಸಬೇಕಿದೆ.

“ಅಧಿಕ ಮಳೆ ಬಂದರೆ ಪಕ್ಕದಲ್ಲಿರುವ ಭೀಮಾ ನದಿ ನೀರು ಹರಿದು ಟಾಕಳಿ-ಕೆರೂರ ರಸ್ತೆ ನಡುವಿನ ಹಳ್ಳಕ್ಕೆ ಸೇತುವೆ ಇಲ್ಲದ ಕಾರಣ ಸಂಚಾರ ಸ್ಥಗಿತವಾಗುತ್ತದೆ. ರಸ್ತೆ ಹದಗೆಟ್ಟ ಕಾರಣ ಗ್ರಾಮಕ್ಕೆ ಬರುವ ಬಸ್ ಕೂಡ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು, ಗರ್ಭೀಣಿಯರು ಈ ರಸ್ತೆಯಲ್ಲಿ ಸಾಗಲು ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಟಾಕಳಿಯಿಂದ ಕೆರೂರಕ್ಕೆ ಮತ್ತು ಟಾಕಳಿಯಿಂದ ಉಮರಾಣಿಗೆ ಸಂಪರ್ಕಿಸುವ ರಸ್ತೆ ಡಾಂಬರಿಕರಣ ಮಾಡಲು ಮುಂದಾಗಬೇಕುʼ ಎಂದು ಅಮಸಿದ್ದ ಮಲ್ಲಪ್ಪ ಒಡೆಯರ (ಗ್ರಾಮಸ್ಥರು, ಟಾಕಳಿ ಗ್ರಾಮ) ಒತ್ತಾಯಿಸಿದರು.

ವರದಿ: ರೇವಣಸಿದ್ಧ ಬಗಲಿ*

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

3 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

22 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago