2024-25ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿನೀರಾವರಿ ಯೋಜನೆಯನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡ ಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಯನ್ವಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಪ್ರಥಮ 2 ಹೆಕ್ಟೇರ್ ಗೆ ನಿಗಧಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ನಂತರ ಮೂರು ಹೆಕ್ಟೇರ್ ಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು). ಸೂಕ್ಷ್ಮ ಹನಿನೀರಾವರಿ ಹಾಗೂ ತುಂತುರು ನೀರಾವರಿ ಅಳವಡಿಕೆಗೆ ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನವನ್ನು ನೀಡಲಾಗುವುದು.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ/ತಾಲೂಕು ಕಛೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿನೀರಾವರಿ ಅಳವಡಿಸಲು ನಿಗಧಿತ ಅರ್ಜಿಯನ್ನು ಪಡೆಯುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ-9482129648, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ದೇವನಹಳ್ಳಿ-9480461234, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಹೊಸಕೋಟೆ-9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ನೆಲಮಂಗಲ-9880461607 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…