2024-25ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿನೀರಾವರಿ ಯೋಜನೆಯನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡ ಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಯನ್ವಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಪ್ರಥಮ 2 ಹೆಕ್ಟೇರ್ ಗೆ ನಿಗಧಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ನಂತರ ಮೂರು ಹೆಕ್ಟೇರ್ ಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು). ಸೂಕ್ಷ್ಮ ಹನಿನೀರಾವರಿ ಹಾಗೂ ತುಂತುರು ನೀರಾವರಿ ಅಳವಡಿಕೆಗೆ ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನವನ್ನು ನೀಡಲಾಗುವುದು.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ/ತಾಲೂಕು ಕಛೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿನೀರಾವರಿ ಅಳವಡಿಸಲು ನಿಗಧಿತ ಅರ್ಜಿಯನ್ನು ಪಡೆಯುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ-9482129648, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ದೇವನಹಳ್ಳಿ-9480461234, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಹೊಸಕೋಟೆ-9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ನೆಲಮಂಗಲ-9880461607 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…