ಹನುಮದ್ವ್ರತ ಪ್ರಯುಕ್ತ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ವಿಶೇಷ ಪೂಜೆ ಪುನಸ್ಕಾರ

ಇಂದು ಹನುಮ ಜಯಂತಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಪೆರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.

ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.

ಹನುಮದ್ವ್ರತ ಪ್ರಯುಕ್ತ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಪಂಚಮುಖಿ ಆಂಜನೇಯಸ್ವಾಮಿಗೆ ಹೋಮ ಹವನ ನಡೆಸಲಾಯಿತು. ಭಕ್ತಾಧಿಗಳ ಸಂಕಷ್ಟ ಪರಿಹಾರಕ್ಕಾಗಿ ಪ್ರತ್ಯಂಗಿರ ಮಹಾಕಾಳಿ ಯಾಗವನ್ನು ಮಾಡಲಾಯಿತು. ಸುಮಾರು 25 ರಿಂದ 30 ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು.

ದೇವಾಲಯದ ಪ್ರಧಾನ ಅರ್ಚಕರಾದ ವಾಸುದೇವಾಚಾರ್ ಮಾತನಾಡಿ, ಉದ್ಭವ ದಿನ್ನೆ ಆಂಜಿನೇಯ ಸ್ವಾಮಿಗೆ 800 ವರ್ಷದ ಇತಿಹಾಸವಿದೆ. ದೇವಾಲಯಕ್ಕೆ ಬಂದು ಭಕ್ತಾಧಿಗಳು ಅರಕೆ ಹೊತ್ತರೆ ಆಂಜನೇಯ ಸ್ವಾಮಿ ಈಡೇರಿಸುತ್ತಾನೆ. ಸಂತಾನ ಇಲ್ಲದವರು ದೇವರಲ್ಲಿ ಪ್ರಾರ್ಥನೆ ಮಾಡಿದರೆ ಸಂತಾನ ಫಲಗಳು ಪ್ರಾಪ್ತಿಯಾಗುತ್ತೆ. ಮೋಕ್ಷ ಫಲಗಳು ಸಿಗುತ್ತೆ ಎಂದರು.

ಪ್ರತಿ ವರ್ಷ ಹನುಮ ಜಯಂತಿ ಪ್ರಯುಕ್ತ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಆಂಧ್ರ, ತಮಿಳುನಾಡು, ಕೇರಳ, ಹಾಸನ, ಚನ್ನರಾಯಪಟ್ಟಣ, ಕಾಳಹಸ್ತಿ ಇಂದ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಾರೆ ಎಂದರು…

Ramesh Babu

Journalist

Recent Posts

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

53 minutes ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

2 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

12 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

12 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

15 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

17 hours ago