ಹನುಮದ್ವ್ರತ ಪ್ರಯುಕ್ತ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ವಿಶೇಷ ಪೂಜೆ ಪುನಸ್ಕಾರ

ಇಂದು ಹನುಮ ಜಯಂತಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಪೆರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.

ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.

ಹನುಮದ್ವ್ರತ ಪ್ರಯುಕ್ತ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಪಂಚಮುಖಿ ಆಂಜನೇಯಸ್ವಾಮಿಗೆ ಹೋಮ ಹವನ ನಡೆಸಲಾಯಿತು. ಭಕ್ತಾಧಿಗಳ ಸಂಕಷ್ಟ ಪರಿಹಾರಕ್ಕಾಗಿ ಪ್ರತ್ಯಂಗಿರ ಮಹಾಕಾಳಿ ಯಾಗವನ್ನು ಮಾಡಲಾಯಿತು. ಸುಮಾರು 25 ರಿಂದ 30 ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು.

ದೇವಾಲಯದ ಪ್ರಧಾನ ಅರ್ಚಕರಾದ ವಾಸುದೇವಾಚಾರ್ ಮಾತನಾಡಿ, ಉದ್ಭವ ದಿನ್ನೆ ಆಂಜಿನೇಯ ಸ್ವಾಮಿಗೆ 800 ವರ್ಷದ ಇತಿಹಾಸವಿದೆ. ದೇವಾಲಯಕ್ಕೆ ಬಂದು ಭಕ್ತಾಧಿಗಳು ಅರಕೆ ಹೊತ್ತರೆ ಆಂಜನೇಯ ಸ್ವಾಮಿ ಈಡೇರಿಸುತ್ತಾನೆ. ಸಂತಾನ ಇಲ್ಲದವರು ದೇವರಲ್ಲಿ ಪ್ರಾರ್ಥನೆ ಮಾಡಿದರೆ ಸಂತಾನ ಫಲಗಳು ಪ್ರಾಪ್ತಿಯಾಗುತ್ತೆ. ಮೋಕ್ಷ ಫಲಗಳು ಸಿಗುತ್ತೆ ಎಂದರು.

ಪ್ರತಿ ವರ್ಷ ಹನುಮ ಜಯಂತಿ ಪ್ರಯುಕ್ತ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಆಂಧ್ರ, ತಮಿಳುನಾಡು, ಕೇರಳ, ಹಾಸನ, ಚನ್ನರಾಯಪಟ್ಟಣ, ಕಾಳಹಸ್ತಿ ಇಂದ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಾರೆ ಎಂದರು…

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

3 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

14 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

15 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago