ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರು ದುಡಿಮೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮೇ 04 ರಂದು ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ 11 ಮಕ್ಕಳ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ.

ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ, ಹೊಸಕೋಟೆ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ರವರು ಜಂಟಿ ತಪಾಸಣೆ ಕೈಗೊಂಡು ರಕ್ಷಿಸಲಾಗಿದೆ.

ರಕ್ಷಿಸಿದ ಬಾಲ ಮತ್ತು ಕಿಶೋರ ಕಾರ್ಮಿಕನನ್ನು ಮಕ್ಕಳ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಮೌಖಿಕ ಆದೇಶದ ಮೇರೆಗೆ ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ದಾಖಲಿಸಲಾಗಿದೆ, ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕ್ರಮ ವಹಿಸಲಾಗಿದೆ.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ 50,000/- ಸಾವಿರದವರೆಗು ದಂಡ ವಿಧಿಸಲಾಗುತ್ತದೆ. 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಕೆಲಸಕ್ಕೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡಿ ಮಾಹಿತಿ ನೀಡಿ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಬಾಲಕಾರ್ಮಿಕ ಯೋಜನೆ ಸೊಸೈಟಿಯ ಯೋಜನಾ ನಿರ್ದೇಶಕರಾದ ಗಣೇಶಮೂರ್ತಿ ಎ. ಎಸ್, ಹೊಸಕೋಟೆ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್, ಇತರೆ ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago