Categories: ಲೇಖನ

ಹಬ್ಬಗಳ ಆಚರಣೆ: ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ…

1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು…..

ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು. ಎರಡು ಹೊತ್ತಿನ ಹೊಟ್ಟೆ ತುಂಬಾ ಊಟ ಸಹ ಕಷ್ಟವಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತಿದ್ದರು. ಕೆಲವರಿಗೆ ಅದೂ ಸಿಗುತ್ತಿರಲಿಲ್ಲ.
ಬಡವರು ಅಂದಿನ ಕೂಲಿ ಹಣದಲ್ಲಿ ಅಂದೇ ರಾಗಿ ಜೋಳ ಗೋದಿ ತಂದು ಅದನ್ನು ಪುಡಿ ಮಾಡಿಸಿ ಊಟ ಮಾಡಬೇಕಿತ್ತು……

ಗಮನಿಸಿ ,
ಅಂದಿನ ಕಾಲದಲ್ಲಿ ಒಂದು ಮಾತು ಚಾಲ್ತಿಯಲ್ಲಿತ್ತು.
” ಹಬ್ಬದಲ್ಲಿ ಅನ್ನ ಊಟ ಮಾಡಿದಂತೆ ” ಅಂದರೆ ಹಬ್ಬಗಳಲ್ಲಿ ಮಾತ್ರ ಅನ್ನ ತಿನ್ನುತ್ತಿದ್ದರು. ಉಳಿದಂತೆ ಮುದ್ದೆ ರೊಟ್ಟಿ ಮತ್ತು ಗೊಜ್ಜು.
ತರಕಾರಿಗಳು, ಬೇಳೆಗಳು, ಹಣ್ಣುಗಳು ಕೇವಲ ಕೆಲವೇ ಶ್ರೀಮಂತರು ಮಾತ್ರ ಉಪಯೋಗಿಸುತ್ತಿದ್ದರು. ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ, ಕರ್ಜೂರ ಬಹಳ ಜನ ನೋಡೇ ಇರಲಿಲ್ಲ. ಬನ್ನು, ಬ್ರೆಡ್ಡು ಕೇವಲ ಜ್ವರ ಬಂದಾಗ ಮಾತ್ರ ಕೊಡುತ್ತಿದ್ದರು. ಬನ್ನು ತಿನ್ನುವ ಸಲುವಾಗಿ ಜ್ವರ ಬರಲಿ ಎಂದು ಎಷ್ಟೋ ಜನ ಬಯಸುತ್ತಿದ್ದುದು ಉಂಟು…..

ಒಂದು ಕೆಜಿ ಕಡಲೆಕಾಯಿ ಎಣ್ಣೆ, ಒಂದು ಕೆಜಿ ಸಕ್ಕರೆ ಇಡೀ ತಿಂಗಳಲ್ಲಿ ಖರ್ಚು ಮಾಡಿದರೆ ಅದೇ ಹೆಚ್ಚು. ಇನ್ನು ಶುಗರ್, ಬಿಪಿ, ಕೊಲೆಸ್ಟರಾಲ್‌ ಇರುವುದಾದರೂ ಎಲ್ಲಿಂದ.
ಬೊಂಡ, ಬಜ್ಜಿ, ವಡೆ, ಚಕ್ಕುಲಿಗಳೇ ಭಕ್ಷ್ಯ ಭೋಜನ. ಹೋಳಿಗೆ, ಪಾಯಸ, ಕಜ್ಜಾಯ, ಕಡುಬು ಮುಂತಾದ ಸಿಹಿ ತಿನಿಸುಗಳು ಕೆಲವೇ ವಿಶೇಷ ಹಬ್ಬಗಳಿಗೆ ಮಾತ್ರ ಸೀಮಿತವಾಗಿತ್ತು. ಹಾಲು, ತುಪ್ಪ ಹಳ್ಳಿಯಲ್ಲೇ ತಯಾರಾದರೂ ಸ್ವಂತಕ್ಕೆ ಉಪಯೋಗಿಸುತ್ತಿದ್ದುದು ತುಂಬಾ ಕಡಿಮೆ. ಅದನ್ನು ಮಾರಿ ಜೀವನ ಸಾಗಿಸುತ್ತಿದ್ದರು. ಇದು ಸಾಮಾನ್ಯ ಜನರ ಜೀವನ ಶೈಲಿ.
ಇನ್ನು ಬಡವರ ಸ್ಥಿತಿ ವರ್ಣಿಸಲು ಹೋದರೆ ಅಳು ತಡೆಯಲಾಗುವುದಿಲ್ಲ. ಅದನ್ನು ಮತ್ತೊಮ್ಮೆ ಹೇಳುತ್ತೇನೆ….

ಈಗಿನ ಜೀವನ ಶೈಲಿ ಅಂದರೆ 1990 ರ ನಂತರ ಹುಟ್ಟಿದವರದು ಹೇಗಿದೆ ನೋಡೋಣ…

ಬೆಳಗ್ಗೆ ಬೆಡ್ ಕಾಫಿಯಿಂದ ಶುರುವಾಗಿ breakfast – lunch – evening snack – dinner ಮತ್ತು ಆಗಾಗ ಕುರುಕಲು ತಿಂಡಿ ಅವರ ದಿನನಿತ್ಯದ ಆಹಾರ.
ಇಂದು ಸಿಹಿ ತಿನಿಸುಗಳು – ಮಾಂಸಾಹಾರ – ವಿವಿಧ ರೀತಿಯ ಪಾನೀಯಗಳು ಮುಂತಾದವು ಬಯಸಿದಾಗ ತಿನ್ನಬಹುದು. ದ್ರಾಕ್ಷಿ – ಗೋಡಂಬಿ – ಬಾದಾಮಿ ಮುಂತಾದ ಪದಾರ್ಥಗಳನ್ನು ಉಪ್ಪಿಟ್ಟು, ಕೇಸರಿಬಾತ್, ವಾಂಗಿಬಾತ್, ಚಿತ್ರಾನ್ನ, ಪಾಯಸ ಎಲ್ಲದರಲ್ಲೂ ಉಪಯೋಗಿಸುತ್ತಾರೆ.
ಅಂದಿನ ಬಹುದೊಡ್ಡ ಸಮಾರಂಭಗಳೆಂದರೆ ಕೇವಲ ಮದುವೆ ಮಾತ್ರ ಆಗಿತ್ತು…..

ಆದರೆ ಈಗ,
Engagement,
Marriage,
Reception,
Naming ceremony,
Birthday party,
Kitty party,
Bachelor party,
Marriage anniversary,
Get together..
ಅಬ್ಬಾ,
party ಗೊಂದು ನೆಪ ಸಿಕ್ಕರೆ ಸಾಕು ಮತ್ತು ಅದರಲ್ಲಿ ಎಲ್ಲಾ ರೀತಿಯ ಭಕ್ಷ್ಯ ಭೋಜನ ಮತ್ತು ಪಾನೀಯ ಕಡ್ಡಾಯ.
ಆ ಕಾರಣಕ್ಕಾಗಿ ದೈಹಿಕ ಶ್ರಮ ಕಡಿಮೆಯಾಗಿ ಸಹಜವಾಗಿ ಖಾಯಿಲೆಗಳು ಹೆಚ್ಚಾಗುತ್ತಿದೆ…..

ಎಷ್ಟೊಂದು ವ್ಯತ್ಯಾಸ. ಅಂದಿಗೂ ಇಂದಿಗೂ. ಇದನ್ನು ಹೊರತುಪಡಿಸಿ ಇನ್ನೂ ಹಲವಾರು ಬದಲಾವಣೆಗಳು ನಿಮ್ಮ ಮನದಲ್ಲಿ ಮೂಡುತ್ತದೆ…..

ಬದಲಾವಣೆಗಳನ್ನು ಒಪ್ಪಿಕೊಳ್ಳುತ್ತಾ ಅದರ ದಿಕ್ಕನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಾ ಜೀವನಮಟ್ಟ ಸುಧಾರಿಸಿಕೊಳ್ಳೋಣ ಎಂದು ಆಶಿಸುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

8 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

18 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago