Categories: ಲೇಖನ

ಹಬ್ಬಗಳ ಆಚರಣೆ: ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ…

1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು…..

ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು. ಎರಡು ಹೊತ್ತಿನ ಹೊಟ್ಟೆ ತುಂಬಾ ಊಟ ಸಹ ಕಷ್ಟವಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತಿದ್ದರು. ಕೆಲವರಿಗೆ ಅದೂ ಸಿಗುತ್ತಿರಲಿಲ್ಲ.
ಬಡವರು ಅಂದಿನ ಕೂಲಿ ಹಣದಲ್ಲಿ ಅಂದೇ ರಾಗಿ ಜೋಳ ಗೋದಿ ತಂದು ಅದನ್ನು ಪುಡಿ ಮಾಡಿಸಿ ಊಟ ಮಾಡಬೇಕಿತ್ತು……

ಗಮನಿಸಿ ,
ಅಂದಿನ ಕಾಲದಲ್ಲಿ ಒಂದು ಮಾತು ಚಾಲ್ತಿಯಲ್ಲಿತ್ತು.
” ಹಬ್ಬದಲ್ಲಿ ಅನ್ನ ಊಟ ಮಾಡಿದಂತೆ ” ಅಂದರೆ ಹಬ್ಬಗಳಲ್ಲಿ ಮಾತ್ರ ಅನ್ನ ತಿನ್ನುತ್ತಿದ್ದರು. ಉಳಿದಂತೆ ಮುದ್ದೆ ರೊಟ್ಟಿ ಮತ್ತು ಗೊಜ್ಜು.
ತರಕಾರಿಗಳು, ಬೇಳೆಗಳು, ಹಣ್ಣುಗಳು ಕೇವಲ ಕೆಲವೇ ಶ್ರೀಮಂತರು ಮಾತ್ರ ಉಪಯೋಗಿಸುತ್ತಿದ್ದರು. ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ, ಕರ್ಜೂರ ಬಹಳ ಜನ ನೋಡೇ ಇರಲಿಲ್ಲ. ಬನ್ನು, ಬ್ರೆಡ್ಡು ಕೇವಲ ಜ್ವರ ಬಂದಾಗ ಮಾತ್ರ ಕೊಡುತ್ತಿದ್ದರು. ಬನ್ನು ತಿನ್ನುವ ಸಲುವಾಗಿ ಜ್ವರ ಬರಲಿ ಎಂದು ಎಷ್ಟೋ ಜನ ಬಯಸುತ್ತಿದ್ದುದು ಉಂಟು…..

ಒಂದು ಕೆಜಿ ಕಡಲೆಕಾಯಿ ಎಣ್ಣೆ, ಒಂದು ಕೆಜಿ ಸಕ್ಕರೆ ಇಡೀ ತಿಂಗಳಲ್ಲಿ ಖರ್ಚು ಮಾಡಿದರೆ ಅದೇ ಹೆಚ್ಚು. ಇನ್ನು ಶುಗರ್, ಬಿಪಿ, ಕೊಲೆಸ್ಟರಾಲ್‌ ಇರುವುದಾದರೂ ಎಲ್ಲಿಂದ.
ಬೊಂಡ, ಬಜ್ಜಿ, ವಡೆ, ಚಕ್ಕುಲಿಗಳೇ ಭಕ್ಷ್ಯ ಭೋಜನ. ಹೋಳಿಗೆ, ಪಾಯಸ, ಕಜ್ಜಾಯ, ಕಡುಬು ಮುಂತಾದ ಸಿಹಿ ತಿನಿಸುಗಳು ಕೆಲವೇ ವಿಶೇಷ ಹಬ್ಬಗಳಿಗೆ ಮಾತ್ರ ಸೀಮಿತವಾಗಿತ್ತು. ಹಾಲು, ತುಪ್ಪ ಹಳ್ಳಿಯಲ್ಲೇ ತಯಾರಾದರೂ ಸ್ವಂತಕ್ಕೆ ಉಪಯೋಗಿಸುತ್ತಿದ್ದುದು ತುಂಬಾ ಕಡಿಮೆ. ಅದನ್ನು ಮಾರಿ ಜೀವನ ಸಾಗಿಸುತ್ತಿದ್ದರು. ಇದು ಸಾಮಾನ್ಯ ಜನರ ಜೀವನ ಶೈಲಿ.
ಇನ್ನು ಬಡವರ ಸ್ಥಿತಿ ವರ್ಣಿಸಲು ಹೋದರೆ ಅಳು ತಡೆಯಲಾಗುವುದಿಲ್ಲ. ಅದನ್ನು ಮತ್ತೊಮ್ಮೆ ಹೇಳುತ್ತೇನೆ….

ಈಗಿನ ಜೀವನ ಶೈಲಿ ಅಂದರೆ 1990 ರ ನಂತರ ಹುಟ್ಟಿದವರದು ಹೇಗಿದೆ ನೋಡೋಣ…

ಬೆಳಗ್ಗೆ ಬೆಡ್ ಕಾಫಿಯಿಂದ ಶುರುವಾಗಿ breakfast – lunch – evening snack – dinner ಮತ್ತು ಆಗಾಗ ಕುರುಕಲು ತಿಂಡಿ ಅವರ ದಿನನಿತ್ಯದ ಆಹಾರ.
ಇಂದು ಸಿಹಿ ತಿನಿಸುಗಳು – ಮಾಂಸಾಹಾರ – ವಿವಿಧ ರೀತಿಯ ಪಾನೀಯಗಳು ಮುಂತಾದವು ಬಯಸಿದಾಗ ತಿನ್ನಬಹುದು. ದ್ರಾಕ್ಷಿ – ಗೋಡಂಬಿ – ಬಾದಾಮಿ ಮುಂತಾದ ಪದಾರ್ಥಗಳನ್ನು ಉಪ್ಪಿಟ್ಟು, ಕೇಸರಿಬಾತ್, ವಾಂಗಿಬಾತ್, ಚಿತ್ರಾನ್ನ, ಪಾಯಸ ಎಲ್ಲದರಲ್ಲೂ ಉಪಯೋಗಿಸುತ್ತಾರೆ.
ಅಂದಿನ ಬಹುದೊಡ್ಡ ಸಮಾರಂಭಗಳೆಂದರೆ ಕೇವಲ ಮದುವೆ ಮಾತ್ರ ಆಗಿತ್ತು…..

ಆದರೆ ಈಗ,
Engagement,
Marriage,
Reception,
Naming ceremony,
Birthday party,
Kitty party,
Bachelor party,
Marriage anniversary,
Get together..
ಅಬ್ಬಾ,
party ಗೊಂದು ನೆಪ ಸಿಕ್ಕರೆ ಸಾಕು ಮತ್ತು ಅದರಲ್ಲಿ ಎಲ್ಲಾ ರೀತಿಯ ಭಕ್ಷ್ಯ ಭೋಜನ ಮತ್ತು ಪಾನೀಯ ಕಡ್ಡಾಯ.
ಆ ಕಾರಣಕ್ಕಾಗಿ ದೈಹಿಕ ಶ್ರಮ ಕಡಿಮೆಯಾಗಿ ಸಹಜವಾಗಿ ಖಾಯಿಲೆಗಳು ಹೆಚ್ಚಾಗುತ್ತಿದೆ…..

ಎಷ್ಟೊಂದು ವ್ಯತ್ಯಾಸ. ಅಂದಿಗೂ ಇಂದಿಗೂ. ಇದನ್ನು ಹೊರತುಪಡಿಸಿ ಇನ್ನೂ ಹಲವಾರು ಬದಲಾವಣೆಗಳು ನಿಮ್ಮ ಮನದಲ್ಲಿ ಮೂಡುತ್ತದೆ…..

ಬದಲಾವಣೆಗಳನ್ನು ಒಪ್ಪಿಕೊಳ್ಳುತ್ತಾ ಅದರ ದಿಕ್ಕನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಾ ಜೀವನಮಟ್ಟ ಸುಧಾರಿಸಿಕೊಳ್ಳೋಣ ಎಂದು ಆಶಿಸುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

9 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

11 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago