Categories: ಲೇಖನ

ಹಬ್ಬಗಳ ಆಚರಣೆ: ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ…

1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು…..

ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು. ಎರಡು ಹೊತ್ತಿನ ಹೊಟ್ಟೆ ತುಂಬಾ ಊಟ ಸಹ ಕಷ್ಟವಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತಿದ್ದರು. ಕೆಲವರಿಗೆ ಅದೂ ಸಿಗುತ್ತಿರಲಿಲ್ಲ.
ಬಡವರು ಅಂದಿನ ಕೂಲಿ ಹಣದಲ್ಲಿ ಅಂದೇ ರಾಗಿ ಜೋಳ ಗೋದಿ ತಂದು ಅದನ್ನು ಪುಡಿ ಮಾಡಿಸಿ ಊಟ ಮಾಡಬೇಕಿತ್ತು……

ಗಮನಿಸಿ ,
ಅಂದಿನ ಕಾಲದಲ್ಲಿ ಒಂದು ಮಾತು ಚಾಲ್ತಿಯಲ್ಲಿತ್ತು.
” ಹಬ್ಬದಲ್ಲಿ ಅನ್ನ ಊಟ ಮಾಡಿದಂತೆ ” ಅಂದರೆ ಹಬ್ಬಗಳಲ್ಲಿ ಮಾತ್ರ ಅನ್ನ ತಿನ್ನುತ್ತಿದ್ದರು. ಉಳಿದಂತೆ ಮುದ್ದೆ ರೊಟ್ಟಿ ಮತ್ತು ಗೊಜ್ಜು.
ತರಕಾರಿಗಳು, ಬೇಳೆಗಳು, ಹಣ್ಣುಗಳು ಕೇವಲ ಕೆಲವೇ ಶ್ರೀಮಂತರು ಮಾತ್ರ ಉಪಯೋಗಿಸುತ್ತಿದ್ದರು. ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ, ಕರ್ಜೂರ ಬಹಳ ಜನ ನೋಡೇ ಇರಲಿಲ್ಲ. ಬನ್ನು, ಬ್ರೆಡ್ಡು ಕೇವಲ ಜ್ವರ ಬಂದಾಗ ಮಾತ್ರ ಕೊಡುತ್ತಿದ್ದರು. ಬನ್ನು ತಿನ್ನುವ ಸಲುವಾಗಿ ಜ್ವರ ಬರಲಿ ಎಂದು ಎಷ್ಟೋ ಜನ ಬಯಸುತ್ತಿದ್ದುದು ಉಂಟು…..

ಒಂದು ಕೆಜಿ ಕಡಲೆಕಾಯಿ ಎಣ್ಣೆ, ಒಂದು ಕೆಜಿ ಸಕ್ಕರೆ ಇಡೀ ತಿಂಗಳಲ್ಲಿ ಖರ್ಚು ಮಾಡಿದರೆ ಅದೇ ಹೆಚ್ಚು. ಇನ್ನು ಶುಗರ್, ಬಿಪಿ, ಕೊಲೆಸ್ಟರಾಲ್‌ ಇರುವುದಾದರೂ ಎಲ್ಲಿಂದ.
ಬೊಂಡ, ಬಜ್ಜಿ, ವಡೆ, ಚಕ್ಕುಲಿಗಳೇ ಭಕ್ಷ್ಯ ಭೋಜನ. ಹೋಳಿಗೆ, ಪಾಯಸ, ಕಜ್ಜಾಯ, ಕಡುಬು ಮುಂತಾದ ಸಿಹಿ ತಿನಿಸುಗಳು ಕೆಲವೇ ವಿಶೇಷ ಹಬ್ಬಗಳಿಗೆ ಮಾತ್ರ ಸೀಮಿತವಾಗಿತ್ತು. ಹಾಲು, ತುಪ್ಪ ಹಳ್ಳಿಯಲ್ಲೇ ತಯಾರಾದರೂ ಸ್ವಂತಕ್ಕೆ ಉಪಯೋಗಿಸುತ್ತಿದ್ದುದು ತುಂಬಾ ಕಡಿಮೆ. ಅದನ್ನು ಮಾರಿ ಜೀವನ ಸಾಗಿಸುತ್ತಿದ್ದರು. ಇದು ಸಾಮಾನ್ಯ ಜನರ ಜೀವನ ಶೈಲಿ.
ಇನ್ನು ಬಡವರ ಸ್ಥಿತಿ ವರ್ಣಿಸಲು ಹೋದರೆ ಅಳು ತಡೆಯಲಾಗುವುದಿಲ್ಲ. ಅದನ್ನು ಮತ್ತೊಮ್ಮೆ ಹೇಳುತ್ತೇನೆ….

ಈಗಿನ ಜೀವನ ಶೈಲಿ ಅಂದರೆ 1990 ರ ನಂತರ ಹುಟ್ಟಿದವರದು ಹೇಗಿದೆ ನೋಡೋಣ…

ಬೆಳಗ್ಗೆ ಬೆಡ್ ಕಾಫಿಯಿಂದ ಶುರುವಾಗಿ breakfast – lunch – evening snack – dinner ಮತ್ತು ಆಗಾಗ ಕುರುಕಲು ತಿಂಡಿ ಅವರ ದಿನನಿತ್ಯದ ಆಹಾರ.
ಇಂದು ಸಿಹಿ ತಿನಿಸುಗಳು – ಮಾಂಸಾಹಾರ – ವಿವಿಧ ರೀತಿಯ ಪಾನೀಯಗಳು ಮುಂತಾದವು ಬಯಸಿದಾಗ ತಿನ್ನಬಹುದು. ದ್ರಾಕ್ಷಿ – ಗೋಡಂಬಿ – ಬಾದಾಮಿ ಮುಂತಾದ ಪದಾರ್ಥಗಳನ್ನು ಉಪ್ಪಿಟ್ಟು, ಕೇಸರಿಬಾತ್, ವಾಂಗಿಬಾತ್, ಚಿತ್ರಾನ್ನ, ಪಾಯಸ ಎಲ್ಲದರಲ್ಲೂ ಉಪಯೋಗಿಸುತ್ತಾರೆ.
ಅಂದಿನ ಬಹುದೊಡ್ಡ ಸಮಾರಂಭಗಳೆಂದರೆ ಕೇವಲ ಮದುವೆ ಮಾತ್ರ ಆಗಿತ್ತು…..

ಆದರೆ ಈಗ,
Engagement,
Marriage,
Reception,
Naming ceremony,
Birthday party,
Kitty party,
Bachelor party,
Marriage anniversary,
Get together..
ಅಬ್ಬಾ,
party ಗೊಂದು ನೆಪ ಸಿಕ್ಕರೆ ಸಾಕು ಮತ್ತು ಅದರಲ್ಲಿ ಎಲ್ಲಾ ರೀತಿಯ ಭಕ್ಷ್ಯ ಭೋಜನ ಮತ್ತು ಪಾನೀಯ ಕಡ್ಡಾಯ.
ಆ ಕಾರಣಕ್ಕಾಗಿ ದೈಹಿಕ ಶ್ರಮ ಕಡಿಮೆಯಾಗಿ ಸಹಜವಾಗಿ ಖಾಯಿಲೆಗಳು ಹೆಚ್ಚಾಗುತ್ತಿದೆ…..

ಎಷ್ಟೊಂದು ವ್ಯತ್ಯಾಸ. ಅಂದಿಗೂ ಇಂದಿಗೂ. ಇದನ್ನು ಹೊರತುಪಡಿಸಿ ಇನ್ನೂ ಹಲವಾರು ಬದಲಾವಣೆಗಳು ನಿಮ್ಮ ಮನದಲ್ಲಿ ಮೂಡುತ್ತದೆ…..

ಬದಲಾವಣೆಗಳನ್ನು ಒಪ್ಪಿಕೊಳ್ಳುತ್ತಾ ಅದರ ದಿಕ್ಕನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಾ ಜೀವನಮಟ್ಟ ಸುಧಾರಿಸಿಕೊಳ್ಳೋಣ ಎಂದು ಆಶಿಸುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…

2 hours ago

ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ಮೀನುಗಾರರ ಮಾರುಕಟ್ಟೆ ಶೀಘ್ರ ಆರಂಭ- ಮಂಜುನಾಥ್ ಸುಣಗಾರ್

ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…

3 hours ago

ಸರ್ಕಾರದಿಂದ ಮಾವು ಖರೀದಿಗೆ ನೋಂದಣಿ ಆರಂಭ:‌ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…

4 hours ago

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

1 day ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

1 day ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

2 days ago