Categories: ಲೇಖನ

ಹಬ್ಬಗಳ ಆಚರಣೆ: ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ…

1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು…..

ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು. ಎರಡು ಹೊತ್ತಿನ ಹೊಟ್ಟೆ ತುಂಬಾ ಊಟ ಸಹ ಕಷ್ಟವಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತಿದ್ದರು. ಕೆಲವರಿಗೆ ಅದೂ ಸಿಗುತ್ತಿರಲಿಲ್ಲ.
ಬಡವರು ಅಂದಿನ ಕೂಲಿ ಹಣದಲ್ಲಿ ಅಂದೇ ರಾಗಿ ಜೋಳ ಗೋದಿ ತಂದು ಅದನ್ನು ಪುಡಿ ಮಾಡಿಸಿ ಊಟ ಮಾಡಬೇಕಿತ್ತು……

ಗಮನಿಸಿ ,
ಅಂದಿನ ಕಾಲದಲ್ಲಿ ಒಂದು ಮಾತು ಚಾಲ್ತಿಯಲ್ಲಿತ್ತು.
” ಹಬ್ಬದಲ್ಲಿ ಅನ್ನ ಊಟ ಮಾಡಿದಂತೆ ” ಅಂದರೆ ಹಬ್ಬಗಳಲ್ಲಿ ಮಾತ್ರ ಅನ್ನ ತಿನ್ನುತ್ತಿದ್ದರು. ಉಳಿದಂತೆ ಮುದ್ದೆ ರೊಟ್ಟಿ ಮತ್ತು ಗೊಜ್ಜು.
ತರಕಾರಿಗಳು, ಬೇಳೆಗಳು, ಹಣ್ಣುಗಳು ಕೇವಲ ಕೆಲವೇ ಶ್ರೀಮಂತರು ಮಾತ್ರ ಉಪಯೋಗಿಸುತ್ತಿದ್ದರು. ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ, ಕರ್ಜೂರ ಬಹಳ ಜನ ನೋಡೇ ಇರಲಿಲ್ಲ. ಬನ್ನು, ಬ್ರೆಡ್ಡು ಕೇವಲ ಜ್ವರ ಬಂದಾಗ ಮಾತ್ರ ಕೊಡುತ್ತಿದ್ದರು. ಬನ್ನು ತಿನ್ನುವ ಸಲುವಾಗಿ ಜ್ವರ ಬರಲಿ ಎಂದು ಎಷ್ಟೋ ಜನ ಬಯಸುತ್ತಿದ್ದುದು ಉಂಟು…..

ಒಂದು ಕೆಜಿ ಕಡಲೆಕಾಯಿ ಎಣ್ಣೆ, ಒಂದು ಕೆಜಿ ಸಕ್ಕರೆ ಇಡೀ ತಿಂಗಳಲ್ಲಿ ಖರ್ಚು ಮಾಡಿದರೆ ಅದೇ ಹೆಚ್ಚು. ಇನ್ನು ಶುಗರ್, ಬಿಪಿ, ಕೊಲೆಸ್ಟರಾಲ್‌ ಇರುವುದಾದರೂ ಎಲ್ಲಿಂದ.
ಬೊಂಡ, ಬಜ್ಜಿ, ವಡೆ, ಚಕ್ಕುಲಿಗಳೇ ಭಕ್ಷ್ಯ ಭೋಜನ. ಹೋಳಿಗೆ, ಪಾಯಸ, ಕಜ್ಜಾಯ, ಕಡುಬು ಮುಂತಾದ ಸಿಹಿ ತಿನಿಸುಗಳು ಕೆಲವೇ ವಿಶೇಷ ಹಬ್ಬಗಳಿಗೆ ಮಾತ್ರ ಸೀಮಿತವಾಗಿತ್ತು. ಹಾಲು, ತುಪ್ಪ ಹಳ್ಳಿಯಲ್ಲೇ ತಯಾರಾದರೂ ಸ್ವಂತಕ್ಕೆ ಉಪಯೋಗಿಸುತ್ತಿದ್ದುದು ತುಂಬಾ ಕಡಿಮೆ. ಅದನ್ನು ಮಾರಿ ಜೀವನ ಸಾಗಿಸುತ್ತಿದ್ದರು. ಇದು ಸಾಮಾನ್ಯ ಜನರ ಜೀವನ ಶೈಲಿ.
ಇನ್ನು ಬಡವರ ಸ್ಥಿತಿ ವರ್ಣಿಸಲು ಹೋದರೆ ಅಳು ತಡೆಯಲಾಗುವುದಿಲ್ಲ. ಅದನ್ನು ಮತ್ತೊಮ್ಮೆ ಹೇಳುತ್ತೇನೆ….

ಈಗಿನ ಜೀವನ ಶೈಲಿ ಅಂದರೆ 1990 ರ ನಂತರ ಹುಟ್ಟಿದವರದು ಹೇಗಿದೆ ನೋಡೋಣ…

ಬೆಳಗ್ಗೆ ಬೆಡ್ ಕಾಫಿಯಿಂದ ಶುರುವಾಗಿ breakfast – lunch – evening snack – dinner ಮತ್ತು ಆಗಾಗ ಕುರುಕಲು ತಿಂಡಿ ಅವರ ದಿನನಿತ್ಯದ ಆಹಾರ.
ಇಂದು ಸಿಹಿ ತಿನಿಸುಗಳು – ಮಾಂಸಾಹಾರ – ವಿವಿಧ ರೀತಿಯ ಪಾನೀಯಗಳು ಮುಂತಾದವು ಬಯಸಿದಾಗ ತಿನ್ನಬಹುದು. ದ್ರಾಕ್ಷಿ – ಗೋಡಂಬಿ – ಬಾದಾಮಿ ಮುಂತಾದ ಪದಾರ್ಥಗಳನ್ನು ಉಪ್ಪಿಟ್ಟು, ಕೇಸರಿಬಾತ್, ವಾಂಗಿಬಾತ್, ಚಿತ್ರಾನ್ನ, ಪಾಯಸ ಎಲ್ಲದರಲ್ಲೂ ಉಪಯೋಗಿಸುತ್ತಾರೆ.
ಅಂದಿನ ಬಹುದೊಡ್ಡ ಸಮಾರಂಭಗಳೆಂದರೆ ಕೇವಲ ಮದುವೆ ಮಾತ್ರ ಆಗಿತ್ತು…..

ಆದರೆ ಈಗ,
Engagement,
Marriage,
Reception,
Naming ceremony,
Birthday party,
Kitty party,
Bachelor party,
Marriage anniversary,
Get together..
ಅಬ್ಬಾ,
party ಗೊಂದು ನೆಪ ಸಿಕ್ಕರೆ ಸಾಕು ಮತ್ತು ಅದರಲ್ಲಿ ಎಲ್ಲಾ ರೀತಿಯ ಭಕ್ಷ್ಯ ಭೋಜನ ಮತ್ತು ಪಾನೀಯ ಕಡ್ಡಾಯ.
ಆ ಕಾರಣಕ್ಕಾಗಿ ದೈಹಿಕ ಶ್ರಮ ಕಡಿಮೆಯಾಗಿ ಸಹಜವಾಗಿ ಖಾಯಿಲೆಗಳು ಹೆಚ್ಚಾಗುತ್ತಿದೆ…..

ಎಷ್ಟೊಂದು ವ್ಯತ್ಯಾಸ. ಅಂದಿಗೂ ಇಂದಿಗೂ. ಇದನ್ನು ಹೊರತುಪಡಿಸಿ ಇನ್ನೂ ಹಲವಾರು ಬದಲಾವಣೆಗಳು ನಿಮ್ಮ ಮನದಲ್ಲಿ ಮೂಡುತ್ತದೆ…..

ಬದಲಾವಣೆಗಳನ್ನು ಒಪ್ಪಿಕೊಳ್ಳುತ್ತಾ ಅದರ ದಿಕ್ಕನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಾ ಜೀವನಮಟ್ಟ ಸುಧಾರಿಸಿಕೊಳ್ಳೋಣ ಎಂದು ಆಶಿಸುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

3 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

5 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

9 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

15 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago