Categories: ಲೇಖನ

ಹಬ್ಬಗಳ ಆಚರಣೆ: ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ…

1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು…..

ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು. ಎರಡು ಹೊತ್ತಿನ ಹೊಟ್ಟೆ ತುಂಬಾ ಊಟ ಸಹ ಕಷ್ಟವಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತಿದ್ದರು. ಕೆಲವರಿಗೆ ಅದೂ ಸಿಗುತ್ತಿರಲಿಲ್ಲ.
ಬಡವರು ಅಂದಿನ ಕೂಲಿ ಹಣದಲ್ಲಿ ಅಂದೇ ರಾಗಿ ಜೋಳ ಗೋದಿ ತಂದು ಅದನ್ನು ಪುಡಿ ಮಾಡಿಸಿ ಊಟ ಮಾಡಬೇಕಿತ್ತು……

ಗಮನಿಸಿ ,
ಅಂದಿನ ಕಾಲದಲ್ಲಿ ಒಂದು ಮಾತು ಚಾಲ್ತಿಯಲ್ಲಿತ್ತು.
” ಹಬ್ಬದಲ್ಲಿ ಅನ್ನ ಊಟ ಮಾಡಿದಂತೆ ” ಅಂದರೆ ಹಬ್ಬಗಳಲ್ಲಿ ಮಾತ್ರ ಅನ್ನ ತಿನ್ನುತ್ತಿದ್ದರು. ಉಳಿದಂತೆ ಮುದ್ದೆ ರೊಟ್ಟಿ ಮತ್ತು ಗೊಜ್ಜು.
ತರಕಾರಿಗಳು, ಬೇಳೆಗಳು, ಹಣ್ಣುಗಳು ಕೇವಲ ಕೆಲವೇ ಶ್ರೀಮಂತರು ಮಾತ್ರ ಉಪಯೋಗಿಸುತ್ತಿದ್ದರು. ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ, ಕರ್ಜೂರ ಬಹಳ ಜನ ನೋಡೇ ಇರಲಿಲ್ಲ. ಬನ್ನು, ಬ್ರೆಡ್ಡು ಕೇವಲ ಜ್ವರ ಬಂದಾಗ ಮಾತ್ರ ಕೊಡುತ್ತಿದ್ದರು. ಬನ್ನು ತಿನ್ನುವ ಸಲುವಾಗಿ ಜ್ವರ ಬರಲಿ ಎಂದು ಎಷ್ಟೋ ಜನ ಬಯಸುತ್ತಿದ್ದುದು ಉಂಟು…..

ಒಂದು ಕೆಜಿ ಕಡಲೆಕಾಯಿ ಎಣ್ಣೆ, ಒಂದು ಕೆಜಿ ಸಕ್ಕರೆ ಇಡೀ ತಿಂಗಳಲ್ಲಿ ಖರ್ಚು ಮಾಡಿದರೆ ಅದೇ ಹೆಚ್ಚು. ಇನ್ನು ಶುಗರ್, ಬಿಪಿ, ಕೊಲೆಸ್ಟರಾಲ್‌ ಇರುವುದಾದರೂ ಎಲ್ಲಿಂದ.
ಬೊಂಡ, ಬಜ್ಜಿ, ವಡೆ, ಚಕ್ಕುಲಿಗಳೇ ಭಕ್ಷ್ಯ ಭೋಜನ. ಹೋಳಿಗೆ, ಪಾಯಸ, ಕಜ್ಜಾಯ, ಕಡುಬು ಮುಂತಾದ ಸಿಹಿ ತಿನಿಸುಗಳು ಕೆಲವೇ ವಿಶೇಷ ಹಬ್ಬಗಳಿಗೆ ಮಾತ್ರ ಸೀಮಿತವಾಗಿತ್ತು. ಹಾಲು, ತುಪ್ಪ ಹಳ್ಳಿಯಲ್ಲೇ ತಯಾರಾದರೂ ಸ್ವಂತಕ್ಕೆ ಉಪಯೋಗಿಸುತ್ತಿದ್ದುದು ತುಂಬಾ ಕಡಿಮೆ. ಅದನ್ನು ಮಾರಿ ಜೀವನ ಸಾಗಿಸುತ್ತಿದ್ದರು. ಇದು ಸಾಮಾನ್ಯ ಜನರ ಜೀವನ ಶೈಲಿ.
ಇನ್ನು ಬಡವರ ಸ್ಥಿತಿ ವರ್ಣಿಸಲು ಹೋದರೆ ಅಳು ತಡೆಯಲಾಗುವುದಿಲ್ಲ. ಅದನ್ನು ಮತ್ತೊಮ್ಮೆ ಹೇಳುತ್ತೇನೆ….

ಈಗಿನ ಜೀವನ ಶೈಲಿ ಅಂದರೆ 1990 ರ ನಂತರ ಹುಟ್ಟಿದವರದು ಹೇಗಿದೆ ನೋಡೋಣ…

ಬೆಳಗ್ಗೆ ಬೆಡ್ ಕಾಫಿಯಿಂದ ಶುರುವಾಗಿ breakfast – lunch – evening snack – dinner ಮತ್ತು ಆಗಾಗ ಕುರುಕಲು ತಿಂಡಿ ಅವರ ದಿನನಿತ್ಯದ ಆಹಾರ.
ಇಂದು ಸಿಹಿ ತಿನಿಸುಗಳು – ಮಾಂಸಾಹಾರ – ವಿವಿಧ ರೀತಿಯ ಪಾನೀಯಗಳು ಮುಂತಾದವು ಬಯಸಿದಾಗ ತಿನ್ನಬಹುದು. ದ್ರಾಕ್ಷಿ – ಗೋಡಂಬಿ – ಬಾದಾಮಿ ಮುಂತಾದ ಪದಾರ್ಥಗಳನ್ನು ಉಪ್ಪಿಟ್ಟು, ಕೇಸರಿಬಾತ್, ವಾಂಗಿಬಾತ್, ಚಿತ್ರಾನ್ನ, ಪಾಯಸ ಎಲ್ಲದರಲ್ಲೂ ಉಪಯೋಗಿಸುತ್ತಾರೆ.
ಅಂದಿನ ಬಹುದೊಡ್ಡ ಸಮಾರಂಭಗಳೆಂದರೆ ಕೇವಲ ಮದುವೆ ಮಾತ್ರ ಆಗಿತ್ತು…..

ಆದರೆ ಈಗ,
Engagement,
Marriage,
Reception,
Naming ceremony,
Birthday party,
Kitty party,
Bachelor party,
Marriage anniversary,
Get together..
ಅಬ್ಬಾ,
party ಗೊಂದು ನೆಪ ಸಿಕ್ಕರೆ ಸಾಕು ಮತ್ತು ಅದರಲ್ಲಿ ಎಲ್ಲಾ ರೀತಿಯ ಭಕ್ಷ್ಯ ಭೋಜನ ಮತ್ತು ಪಾನೀಯ ಕಡ್ಡಾಯ.
ಆ ಕಾರಣಕ್ಕಾಗಿ ದೈಹಿಕ ಶ್ರಮ ಕಡಿಮೆಯಾಗಿ ಸಹಜವಾಗಿ ಖಾಯಿಲೆಗಳು ಹೆಚ್ಚಾಗುತ್ತಿದೆ…..

ಎಷ್ಟೊಂದು ವ್ಯತ್ಯಾಸ. ಅಂದಿಗೂ ಇಂದಿಗೂ. ಇದನ್ನು ಹೊರತುಪಡಿಸಿ ಇನ್ನೂ ಹಲವಾರು ಬದಲಾವಣೆಗಳು ನಿಮ್ಮ ಮನದಲ್ಲಿ ಮೂಡುತ್ತದೆ…..

ಬದಲಾವಣೆಗಳನ್ನು ಒಪ್ಪಿಕೊಳ್ಳುತ್ತಾ ಅದರ ದಿಕ್ಕನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಾ ಜೀವನಮಟ್ಟ ಸುಧಾರಿಸಿಕೊಳ್ಳೋಣ ಎಂದು ಆಶಿಸುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

2 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

12 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

23 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

23 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago