ಕೋಲಾರ: ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು ರೈತ ಮುಖಂಡ ಶ್ರೀನಿವಾಸನ್ ತಿಳಿಸಿದರು
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆಯ ಹತ್ತಿರವಿರುವ ದಾಖಲೆ ಪತ್ರಗಳ ಬಗ್ಗೆಯೇ ಅನುಮಾನವಿದೆ ಕಂದಾಯ ಇಲಾಖೆಯಲ್ಲಿ ಪುರಾವೆಗಳೇ ಇಲ್ಲ ಆದರೆ ರೈತರ ಬಳಿ ಸೂಕ್ತವಾದ ದಾಖಲೆಗಳು ಇದ್ದರು ವಿನಾಕಾರಣ ಅರಣ್ಯ ಇಲಾಖೆ ಕಂದಾಯ ಇಲಾಖೆ ಮತ್ತು ಪೋಲಿಸ್ ಇಲಾಖೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು
ಹೋಬಳಿಯ ಶಿಲ್ಲಂಗೆರೆಯಿಂದ ಅಬ್ಬಣಿಯವರೆಗೆ ಮೂಲ ಅರಣ್ಯ ಎನ್ನುತ್ತಿದ್ದಾರೆ, ಕಂದಾಯ, ಸರ್ವೆ, ಪೊಲೀಸ್ ಇಲಾಖೆ ಯಾಮಾರಿಸುತ್ತಿದ್ದಾರೆ. ಆರ್ ಟಿಸಿಯಲ್ಲಿ ಗೋಮಾಳ ಎಂದಿದೆ ಅದರಿಂದ ರೈತರಿಗೆ ತೊಂದರೆ ಕೊಟ್ಟಿದ್ದರಿಂದಾಗಿ ಅರಣ್ಯ ಇಲಾಖೆಯ ಸರಿನಾ ಸಿಕ್ಕಲಿಗರ್,, ಮಹೇಶ್, ಪುಷ್ಪಲತಾ ಅವರ ಮೇಲೆ ದೌರ್ಜನ್ಯ ಕೇಸ್ ಹಾಕಿದ್ದೇವೆ ಈ ಭಾಗದಲ್ಲಿ ಹಿಡುವಳಿ ಜಮೀನು ಇದ್ದು ಅರಣ್ಯ ಇಲಾಖೆ ನಕಲಿ ನಕ್ಷೆ ಮಾಡಿಕೊಂಡಿದ್ದಾರೆ ಮಾತು ಎತ್ತಿದರೆ ರಿಯಲ್ ಎಸ್ಟೇಟ್ ಎನ್ನುತ್ತಾರೆ ರೈತರನ್ನು ಅವಮಾನ ಮಾಡತ್ತಾರೆ ಎಂದರು
ಅರಣ್ಯ ಇಲಾಖೆಯ 1931 ನೋಟಿಫಿಕೇಷನ್ ದಾಖಲೆ ಸರಿ ಇಲ್ಲ.ಸಹಿ ಇಲ್ಲ. ನಕಲಿ ಎಂಬ ಅನುಮಾನ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ರೈತರ ಮೇಲೆ ದಬ್ಬಾಳಿಕೆ ಮಾಡಬಾರದು ಅರಣ್ಯ ಇಲಾಖೆ ಜಾಗಕ್ಕೆ ನಂಬರ್ ಕೊಟ್ಟು ದುರಸ್ತಿ ಮಾಡಬೇಕು ಜಂಟಿ ಸರ್ವೆಯಲ್ಲಿ ಮೊದಲು ಅರಣ್ಯ ಜಮೀನು ಎಷ್ಟಿದೆ ಎಂಬುದನ್ನು ಸ್ಕೆಚ್ ಮಾಡಿ, ನಂಬರ್ ಕೊಟ್ಟು ದುರಸ್ತಿ ಮಾಡಬೇಕು.
ಈ ಪತ್ರಿಕಾಗೋಷ್ಠಿಯಲ್ಲಿ ರೈತರಾದ ಹರಟಿ ಪ್ರಕಾಶ್, ಶಿಲ್ಲಂಗೆರೆ ಮಂಜುನಾಥ್, ಅರವಿಂದ್, ವೆಂಕಟರಣಪ್ಪ ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…