ಕೋಲಾರ: ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು ರೈತ ಮುಖಂಡ ಶ್ರೀನಿವಾಸನ್ ತಿಳಿಸಿದರು
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆಯ ಹತ್ತಿರವಿರುವ ದಾಖಲೆ ಪತ್ರಗಳ ಬಗ್ಗೆಯೇ ಅನುಮಾನವಿದೆ ಕಂದಾಯ ಇಲಾಖೆಯಲ್ಲಿ ಪುರಾವೆಗಳೇ ಇಲ್ಲ ಆದರೆ ರೈತರ ಬಳಿ ಸೂಕ್ತವಾದ ದಾಖಲೆಗಳು ಇದ್ದರು ವಿನಾಕಾರಣ ಅರಣ್ಯ ಇಲಾಖೆ ಕಂದಾಯ ಇಲಾಖೆ ಮತ್ತು ಪೋಲಿಸ್ ಇಲಾಖೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು
ಹೋಬಳಿಯ ಶಿಲ್ಲಂಗೆರೆಯಿಂದ ಅಬ್ಬಣಿಯವರೆಗೆ ಮೂಲ ಅರಣ್ಯ ಎನ್ನುತ್ತಿದ್ದಾರೆ, ಕಂದಾಯ, ಸರ್ವೆ, ಪೊಲೀಸ್ ಇಲಾಖೆ ಯಾಮಾರಿಸುತ್ತಿದ್ದಾರೆ. ಆರ್ ಟಿಸಿಯಲ್ಲಿ ಗೋಮಾಳ ಎಂದಿದೆ ಅದರಿಂದ ರೈತರಿಗೆ ತೊಂದರೆ ಕೊಟ್ಟಿದ್ದರಿಂದಾಗಿ ಅರಣ್ಯ ಇಲಾಖೆಯ ಸರಿನಾ ಸಿಕ್ಕಲಿಗರ್,, ಮಹೇಶ್, ಪುಷ್ಪಲತಾ ಅವರ ಮೇಲೆ ದೌರ್ಜನ್ಯ ಕೇಸ್ ಹಾಕಿದ್ದೇವೆ ಈ ಭಾಗದಲ್ಲಿ ಹಿಡುವಳಿ ಜಮೀನು ಇದ್ದು ಅರಣ್ಯ ಇಲಾಖೆ ನಕಲಿ ನಕ್ಷೆ ಮಾಡಿಕೊಂಡಿದ್ದಾರೆ ಮಾತು ಎತ್ತಿದರೆ ರಿಯಲ್ ಎಸ್ಟೇಟ್ ಎನ್ನುತ್ತಾರೆ ರೈತರನ್ನು ಅವಮಾನ ಮಾಡತ್ತಾರೆ ಎಂದರು
ಅರಣ್ಯ ಇಲಾಖೆಯ 1931 ನೋಟಿಫಿಕೇಷನ್ ದಾಖಲೆ ಸರಿ ಇಲ್ಲ.ಸಹಿ ಇಲ್ಲ. ನಕಲಿ ಎಂಬ ಅನುಮಾನ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ರೈತರ ಮೇಲೆ ದಬ್ಬಾಳಿಕೆ ಮಾಡಬಾರದು ಅರಣ್ಯ ಇಲಾಖೆ ಜಾಗಕ್ಕೆ ನಂಬರ್ ಕೊಟ್ಟು ದುರಸ್ತಿ ಮಾಡಬೇಕು ಜಂಟಿ ಸರ್ವೆಯಲ್ಲಿ ಮೊದಲು ಅರಣ್ಯ ಜಮೀನು ಎಷ್ಟಿದೆ ಎಂಬುದನ್ನು ಸ್ಕೆಚ್ ಮಾಡಿ, ನಂಬರ್ ಕೊಟ್ಟು ದುರಸ್ತಿ ಮಾಡಬೇಕು.
ಈ ಪತ್ರಿಕಾಗೋಷ್ಠಿಯಲ್ಲಿ ರೈತರಾದ ಹರಟಿ ಪ್ರಕಾಶ್, ಶಿಲ್ಲಂಗೆರೆ ಮಂಜುನಾಥ್, ಅರವಿಂದ್, ವೆಂಕಟರಣಪ್ಪ ಇದ್ದರು.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…