ಕೋಲಾರ: ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು ರೈತ ಮುಖಂಡ ಶ್ರೀನಿವಾಸನ್ ತಿಳಿಸಿದರು
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆಯ ಹತ್ತಿರವಿರುವ ದಾಖಲೆ ಪತ್ರಗಳ ಬಗ್ಗೆಯೇ ಅನುಮಾನವಿದೆ ಕಂದಾಯ ಇಲಾಖೆಯಲ್ಲಿ ಪುರಾವೆಗಳೇ ಇಲ್ಲ ಆದರೆ ರೈತರ ಬಳಿ ಸೂಕ್ತವಾದ ದಾಖಲೆಗಳು ಇದ್ದರು ವಿನಾಕಾರಣ ಅರಣ್ಯ ಇಲಾಖೆ ಕಂದಾಯ ಇಲಾಖೆ ಮತ್ತು ಪೋಲಿಸ್ ಇಲಾಖೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು
ಹೋಬಳಿಯ ಶಿಲ್ಲಂಗೆರೆಯಿಂದ ಅಬ್ಬಣಿಯವರೆಗೆ ಮೂಲ ಅರಣ್ಯ ಎನ್ನುತ್ತಿದ್ದಾರೆ, ಕಂದಾಯ, ಸರ್ವೆ, ಪೊಲೀಸ್ ಇಲಾಖೆ ಯಾಮಾರಿಸುತ್ತಿದ್ದಾರೆ. ಆರ್ ಟಿಸಿಯಲ್ಲಿ ಗೋಮಾಳ ಎಂದಿದೆ ಅದರಿಂದ ರೈತರಿಗೆ ತೊಂದರೆ ಕೊಟ್ಟಿದ್ದರಿಂದಾಗಿ ಅರಣ್ಯ ಇಲಾಖೆಯ ಸರಿನಾ ಸಿಕ್ಕಲಿಗರ್,, ಮಹೇಶ್, ಪುಷ್ಪಲತಾ ಅವರ ಮೇಲೆ ದೌರ್ಜನ್ಯ ಕೇಸ್ ಹಾಕಿದ್ದೇವೆ ಈ ಭಾಗದಲ್ಲಿ ಹಿಡುವಳಿ ಜಮೀನು ಇದ್ದು ಅರಣ್ಯ ಇಲಾಖೆ ನಕಲಿ ನಕ್ಷೆ ಮಾಡಿಕೊಂಡಿದ್ದಾರೆ ಮಾತು ಎತ್ತಿದರೆ ರಿಯಲ್ ಎಸ್ಟೇಟ್ ಎನ್ನುತ್ತಾರೆ ರೈತರನ್ನು ಅವಮಾನ ಮಾಡತ್ತಾರೆ ಎಂದರು
ಅರಣ್ಯ ಇಲಾಖೆಯ 1931 ನೋಟಿಫಿಕೇಷನ್ ದಾಖಲೆ ಸರಿ ಇಲ್ಲ.ಸಹಿ ಇಲ್ಲ. ನಕಲಿ ಎಂಬ ಅನುಮಾನ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ರೈತರ ಮೇಲೆ ದಬ್ಬಾಳಿಕೆ ಮಾಡಬಾರದು ಅರಣ್ಯ ಇಲಾಖೆ ಜಾಗಕ್ಕೆ ನಂಬರ್ ಕೊಟ್ಟು ದುರಸ್ತಿ ಮಾಡಬೇಕು ಜಂಟಿ ಸರ್ವೆಯಲ್ಲಿ ಮೊದಲು ಅರಣ್ಯ ಜಮೀನು ಎಷ್ಟಿದೆ ಎಂಬುದನ್ನು ಸ್ಕೆಚ್ ಮಾಡಿ, ನಂಬರ್ ಕೊಟ್ಟು ದುರಸ್ತಿ ಮಾಡಬೇಕು.
ಈ ಪತ್ರಿಕಾಗೋಷ್ಠಿಯಲ್ಲಿ ರೈತರಾದ ಹರಟಿ ಪ್ರಕಾಶ್, ಶಿಲ್ಲಂಗೆರೆ ಮಂಜುನಾಥ್, ಅರವಿಂದ್, ವೆಂಕಟರಣಪ್ಪ ಇದ್ದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…