ಕೋಲಾರ: ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು ರೈತ ಮುಖಂಡ ಶ್ರೀನಿವಾಸನ್ ತಿಳಿಸಿದರು
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆಯ ಹತ್ತಿರವಿರುವ ದಾಖಲೆ ಪತ್ರಗಳ ಬಗ್ಗೆಯೇ ಅನುಮಾನವಿದೆ ಕಂದಾಯ ಇಲಾಖೆಯಲ್ಲಿ ಪುರಾವೆಗಳೇ ಇಲ್ಲ ಆದರೆ ರೈತರ ಬಳಿ ಸೂಕ್ತವಾದ ದಾಖಲೆಗಳು ಇದ್ದರು ವಿನಾಕಾರಣ ಅರಣ್ಯ ಇಲಾಖೆ ಕಂದಾಯ ಇಲಾಖೆ ಮತ್ತು ಪೋಲಿಸ್ ಇಲಾಖೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು
ಹೋಬಳಿಯ ಶಿಲ್ಲಂಗೆರೆಯಿಂದ ಅಬ್ಬಣಿಯವರೆಗೆ ಮೂಲ ಅರಣ್ಯ ಎನ್ನುತ್ತಿದ್ದಾರೆ, ಕಂದಾಯ, ಸರ್ವೆ, ಪೊಲೀಸ್ ಇಲಾಖೆ ಯಾಮಾರಿಸುತ್ತಿದ್ದಾರೆ. ಆರ್ ಟಿಸಿಯಲ್ಲಿ ಗೋಮಾಳ ಎಂದಿದೆ ಅದರಿಂದ ರೈತರಿಗೆ ತೊಂದರೆ ಕೊಟ್ಟಿದ್ದರಿಂದಾಗಿ ಅರಣ್ಯ ಇಲಾಖೆಯ ಸರಿನಾ ಸಿಕ್ಕಲಿಗರ್,, ಮಹೇಶ್, ಪುಷ್ಪಲತಾ ಅವರ ಮೇಲೆ ದೌರ್ಜನ್ಯ ಕೇಸ್ ಹಾಕಿದ್ದೇವೆ ಈ ಭಾಗದಲ್ಲಿ ಹಿಡುವಳಿ ಜಮೀನು ಇದ್ದು ಅರಣ್ಯ ಇಲಾಖೆ ನಕಲಿ ನಕ್ಷೆ ಮಾಡಿಕೊಂಡಿದ್ದಾರೆ ಮಾತು ಎತ್ತಿದರೆ ರಿಯಲ್ ಎಸ್ಟೇಟ್ ಎನ್ನುತ್ತಾರೆ ರೈತರನ್ನು ಅವಮಾನ ಮಾಡತ್ತಾರೆ ಎಂದರು
ಅರಣ್ಯ ಇಲಾಖೆಯ 1931 ನೋಟಿಫಿಕೇಷನ್ ದಾಖಲೆ ಸರಿ ಇಲ್ಲ.ಸಹಿ ಇಲ್ಲ. ನಕಲಿ ಎಂಬ ಅನುಮಾನ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ರೈತರ ಮೇಲೆ ದಬ್ಬಾಳಿಕೆ ಮಾಡಬಾರದು ಅರಣ್ಯ ಇಲಾಖೆ ಜಾಗಕ್ಕೆ ನಂಬರ್ ಕೊಟ್ಟು ದುರಸ್ತಿ ಮಾಡಬೇಕು ಜಂಟಿ ಸರ್ವೆಯಲ್ಲಿ ಮೊದಲು ಅರಣ್ಯ ಜಮೀನು ಎಷ್ಟಿದೆ ಎಂಬುದನ್ನು ಸ್ಕೆಚ್ ಮಾಡಿ, ನಂಬರ್ ಕೊಟ್ಟು ದುರಸ್ತಿ ಮಾಡಬೇಕು.
ಈ ಪತ್ರಿಕಾಗೋಷ್ಠಿಯಲ್ಲಿ ರೈತರಾದ ಹರಟಿ ಪ್ರಕಾಶ್, ಶಿಲ್ಲಂಗೆರೆ ಮಂಜುನಾಥ್, ಅರವಿಂದ್, ವೆಂಕಟರಣಪ್ಪ ಇದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…