ಕೋಲಾರ: ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು ರೈತ ಮುಖಂಡ ಶ್ರೀನಿವಾಸನ್ ತಿಳಿಸಿದರು
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆಯ ಹತ್ತಿರವಿರುವ ದಾಖಲೆ ಪತ್ರಗಳ ಬಗ್ಗೆಯೇ ಅನುಮಾನವಿದೆ ಕಂದಾಯ ಇಲಾಖೆಯಲ್ಲಿ ಪುರಾವೆಗಳೇ ಇಲ್ಲ ಆದರೆ ರೈತರ ಬಳಿ ಸೂಕ್ತವಾದ ದಾಖಲೆಗಳು ಇದ್ದರು ವಿನಾಕಾರಣ ಅರಣ್ಯ ಇಲಾಖೆ ಕಂದಾಯ ಇಲಾಖೆ ಮತ್ತು ಪೋಲಿಸ್ ಇಲಾಖೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು
ಹೋಬಳಿಯ ಶಿಲ್ಲಂಗೆರೆಯಿಂದ ಅಬ್ಬಣಿಯವರೆಗೆ ಮೂಲ ಅರಣ್ಯ ಎನ್ನುತ್ತಿದ್ದಾರೆ, ಕಂದಾಯ, ಸರ್ವೆ, ಪೊಲೀಸ್ ಇಲಾಖೆ ಯಾಮಾರಿಸುತ್ತಿದ್ದಾರೆ. ಆರ್ ಟಿಸಿಯಲ್ಲಿ ಗೋಮಾಳ ಎಂದಿದೆ ಅದರಿಂದ ರೈತರಿಗೆ ತೊಂದರೆ ಕೊಟ್ಟಿದ್ದರಿಂದಾಗಿ ಅರಣ್ಯ ಇಲಾಖೆಯ ಸರಿನಾ ಸಿಕ್ಕಲಿಗರ್,, ಮಹೇಶ್, ಪುಷ್ಪಲತಾ ಅವರ ಮೇಲೆ ದೌರ್ಜನ್ಯ ಕೇಸ್ ಹಾಕಿದ್ದೇವೆ ಈ ಭಾಗದಲ್ಲಿ ಹಿಡುವಳಿ ಜಮೀನು ಇದ್ದು ಅರಣ್ಯ ಇಲಾಖೆ ನಕಲಿ ನಕ್ಷೆ ಮಾಡಿಕೊಂಡಿದ್ದಾರೆ ಮಾತು ಎತ್ತಿದರೆ ರಿಯಲ್ ಎಸ್ಟೇಟ್ ಎನ್ನುತ್ತಾರೆ ರೈತರನ್ನು ಅವಮಾನ ಮಾಡತ್ತಾರೆ ಎಂದರು
ಅರಣ್ಯ ಇಲಾಖೆಯ 1931 ನೋಟಿಫಿಕೇಷನ್ ದಾಖಲೆ ಸರಿ ಇಲ್ಲ.ಸಹಿ ಇಲ್ಲ. ನಕಲಿ ಎಂಬ ಅನುಮಾನ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ರೈತರ ಮೇಲೆ ದಬ್ಬಾಳಿಕೆ ಮಾಡಬಾರದು ಅರಣ್ಯ ಇಲಾಖೆ ಜಾಗಕ್ಕೆ ನಂಬರ್ ಕೊಟ್ಟು ದುರಸ್ತಿ ಮಾಡಬೇಕು ಜಂಟಿ ಸರ್ವೆಯಲ್ಲಿ ಮೊದಲು ಅರಣ್ಯ ಜಮೀನು ಎಷ್ಟಿದೆ ಎಂಬುದನ್ನು ಸ್ಕೆಚ್ ಮಾಡಿ, ನಂಬರ್ ಕೊಟ್ಟು ದುರಸ್ತಿ ಮಾಡಬೇಕು.
ಈ ಪತ್ರಿಕಾಗೋಷ್ಠಿಯಲ್ಲಿ ರೈತರಾದ ಹರಟಿ ಪ್ರಕಾಶ್, ಶಿಲ್ಲಂಗೆರೆ ಮಂಜುನಾಥ್, ಅರವಿಂದ್, ವೆಂಕಟರಣಪ್ಪ ಇದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…