ಕೋಲಾರ: ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು ರೈತ ಮುಖಂಡ ಶ್ರೀನಿವಾಸನ್ ತಿಳಿಸಿದರು
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆಯ ಹತ್ತಿರವಿರುವ ದಾಖಲೆ ಪತ್ರಗಳ ಬಗ್ಗೆಯೇ ಅನುಮಾನವಿದೆ ಕಂದಾಯ ಇಲಾಖೆಯಲ್ಲಿ ಪುರಾವೆಗಳೇ ಇಲ್ಲ ಆದರೆ ರೈತರ ಬಳಿ ಸೂಕ್ತವಾದ ದಾಖಲೆಗಳು ಇದ್ದರು ವಿನಾಕಾರಣ ಅರಣ್ಯ ಇಲಾಖೆ ಕಂದಾಯ ಇಲಾಖೆ ಮತ್ತು ಪೋಲಿಸ್ ಇಲಾಖೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು
ಹೋಬಳಿಯ ಶಿಲ್ಲಂಗೆರೆಯಿಂದ ಅಬ್ಬಣಿಯವರೆಗೆ ಮೂಲ ಅರಣ್ಯ ಎನ್ನುತ್ತಿದ್ದಾರೆ, ಕಂದಾಯ, ಸರ್ವೆ, ಪೊಲೀಸ್ ಇಲಾಖೆ ಯಾಮಾರಿಸುತ್ತಿದ್ದಾರೆ. ಆರ್ ಟಿಸಿಯಲ್ಲಿ ಗೋಮಾಳ ಎಂದಿದೆ ಅದರಿಂದ ರೈತರಿಗೆ ತೊಂದರೆ ಕೊಟ್ಟಿದ್ದರಿಂದಾಗಿ ಅರಣ್ಯ ಇಲಾಖೆಯ ಸರಿನಾ ಸಿಕ್ಕಲಿಗರ್,, ಮಹೇಶ್, ಪುಷ್ಪಲತಾ ಅವರ ಮೇಲೆ ದೌರ್ಜನ್ಯ ಕೇಸ್ ಹಾಕಿದ್ದೇವೆ ಈ ಭಾಗದಲ್ಲಿ ಹಿಡುವಳಿ ಜಮೀನು ಇದ್ದು ಅರಣ್ಯ ಇಲಾಖೆ ನಕಲಿ ನಕ್ಷೆ ಮಾಡಿಕೊಂಡಿದ್ದಾರೆ ಮಾತು ಎತ್ತಿದರೆ ರಿಯಲ್ ಎಸ್ಟೇಟ್ ಎನ್ನುತ್ತಾರೆ ರೈತರನ್ನು ಅವಮಾನ ಮಾಡತ್ತಾರೆ ಎಂದರು
ಅರಣ್ಯ ಇಲಾಖೆಯ 1931 ನೋಟಿಫಿಕೇಷನ್ ದಾಖಲೆ ಸರಿ ಇಲ್ಲ.ಸಹಿ ಇಲ್ಲ. ನಕಲಿ ಎಂಬ ಅನುಮಾನ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ರೈತರ ಮೇಲೆ ದಬ್ಬಾಳಿಕೆ ಮಾಡಬಾರದು ಅರಣ್ಯ ಇಲಾಖೆ ಜಾಗಕ್ಕೆ ನಂಬರ್ ಕೊಟ್ಟು ದುರಸ್ತಿ ಮಾಡಬೇಕು ಜಂಟಿ ಸರ್ವೆಯಲ್ಲಿ ಮೊದಲು ಅರಣ್ಯ ಜಮೀನು ಎಷ್ಟಿದೆ ಎಂಬುದನ್ನು ಸ್ಕೆಚ್ ಮಾಡಿ, ನಂಬರ್ ಕೊಟ್ಟು ದುರಸ್ತಿ ಮಾಡಬೇಕು.
ಈ ಪತ್ರಿಕಾಗೋಷ್ಠಿಯಲ್ಲಿ ರೈತರಾದ ಹರಟಿ ಪ್ರಕಾಶ್, ಶಿಲ್ಲಂಗೆರೆ ಮಂಜುನಾಥ್, ಅರವಿಂದ್, ವೆಂಕಟರಣಪ್ಪ ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…