Categories: ಕೋಲಾರ

ಹರಟಿ ಅರಣ್ಯ ಜಂಟಿ ಸರ್ವೆ ಅನುಮಾನ ಮೂಡಿದೆ, ರೈತ ಶ್ರೀನಿವಾಸನ್ ಆರೋಪ

ಕೋಲಾರ: ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು ರೈತ ಮುಖಂಡ ಶ್ರೀನಿವಾಸನ್ ತಿಳಿಸಿದರು

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆಯ ಹತ್ತಿರವಿರುವ ದಾಖಲೆ ‌ಪತ್ರಗಳ ಬಗ್ಗೆಯೇ ಅನುಮಾನವಿದೆ ಕಂದಾಯ ಇಲಾಖೆಯಲ್ಲಿ ಪುರಾವೆಗಳೇ ಇಲ್ಲ ಆದರೆ ರೈತರ ಬಳಿ ಸೂಕ್ತವಾದ ದಾಖಲೆಗಳು ಇದ್ದರು ವಿನಾಕಾರಣ ಅರಣ್ಯ ಇಲಾಖೆ ಕಂದಾಯ ಇಲಾಖೆ ಮತ್ತು ಪೋಲಿಸ್ ಇಲಾಖೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು

ಹೋಬಳಿಯ ಶಿಲ್ಲಂಗೆರೆಯಿಂದ ಅಬ್ಬಣಿಯವರೆಗೆ ಮೂಲ ಅರಣ್ಯ ಎನ್ನುತ್ತಿದ್ದಾರೆ, ಕಂದಾಯ, ಸರ್ವೆ, ಪೊಲೀಸ್ ಇಲಾಖೆ ಯಾಮಾರಿಸುತ್ತಿದ್ದಾರೆ‌. ಆರ್ ಟಿಸಿಯಲ್ಲಿ ಗೋಮಾಳ‌ ಎಂದಿದೆ ಅದರಿಂದ ರೈತರಿಗೆ ತೊಂದರೆ ಕೊಟ್ಟಿದ್ದರಿಂದಾಗಿ ಅರಣ್ಯ ಇಲಾಖೆಯ ಸರಿನಾ ಸಿಕ್ಕಲಿಗರ್,, ಮಹೇಶ್, ಪುಷ್ಪಲತಾ ಅವರ ಮೇಲೆ ದೌರ್ಜನ್ಯ ಕೇಸ್ ಹಾಕಿದ್ದೇವೆ ಈ ಭಾಗದಲ್ಲಿ ಹಿಡುವಳಿ ಜಮೀನು ಇದ್ದು ಅರಣ್ಯ ಇಲಾಖೆ ನಕಲಿ ನಕ್ಷೆ ಮಾಡಿಕೊಂಡಿದ್ದಾರೆ ಮಾತು ಎತ್ತಿದರೆ ರಿಯಲ್ ಎಸ್ಟೇಟ್ ಎನ್ನುತ್ತಾರೆ ರೈತರನ್ನು ಅವಮಾನ ಮಾಡತ್ತಾರೆ ಎಂದರು

ಅರಣ್ಯ ಇಲಾಖೆಯ 1931 ನೋಟಿಫಿಕೇಷನ್ ದಾಖಲೆ ಸರಿ ಇಲ್ಲ.ಸಹಿ ಇಲ್ಲ. ನಕಲಿ ಎಂಬ ಅನುಮಾನ ಇದೆ. ಈ ಬಗ್ಗೆ ತನಿಖೆ ‌ನಡೆಸಬೇಕು ರೈತರ ಮೇಲೆ ದಬ್ಬಾಳಿಕೆ ‌ಮಾಡಬಾರದು ಅರಣ್ಯ ಇಲಾಖೆ‌ ಜಾಗಕ್ಕೆ ನಂಬರ್ ಕೊಟ್ಟು ದುರಸ್ತಿ ಮಾಡಬೇಕು ಜಂಟಿ ಸರ್ವೆಯಲ್ಲಿ ಮೊದಲು ಅರಣ್ಯ ಜಮೀನು ಎಷ್ಟಿದೆ ಎಂಬುದನ್ನು ಸ್ಕೆಚ್‌ ಮಾಡಿ, ನಂಬರ್ ಕೊಟ್ಟು ದುರಸ್ತಿ ಮಾಡಬೇಕು.

ಈ ಪತ್ರಿಕಾಗೋಷ್ಠಿಯಲ್ಲಿ ರೈತರಾದ ಹರಟಿ ಪ್ರಕಾಶ್, ಶಿಲ್ಲಂಗೆರೆ ಮಂಜುನಾಥ್, ಅರವಿಂದ್, ವೆಂಕಟರಣಪ್ಪ ಇದ್ದರು.

Ramesh Babu

Journalist

Recent Posts

ಭಾರೀ ಸಿಡಿಲಿಗೆ ಎರಡು ಸೀಮೆ ಹಸುಗಳ ಸಾವು

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾವಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು…

3 hours ago

56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…

5 hours ago

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ

ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…

5 hours ago

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

15 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 day ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

2 days ago