Categories: ಕೋಲಾರ

ಹರಟಿ ಅರಣ್ಯ ಜಂಟಿ ಸರ್ವೆ ಅನುಮಾನ ಮೂಡಿದೆ, ರೈತ ಶ್ರೀನಿವಾಸನ್ ಆರೋಪ

ಕೋಲಾರ: ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು ರೈತ ಮುಖಂಡ ಶ್ರೀನಿವಾಸನ್ ತಿಳಿಸಿದರು

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆಯ ಹತ್ತಿರವಿರುವ ದಾಖಲೆ ‌ಪತ್ರಗಳ ಬಗ್ಗೆಯೇ ಅನುಮಾನವಿದೆ ಕಂದಾಯ ಇಲಾಖೆಯಲ್ಲಿ ಪುರಾವೆಗಳೇ ಇಲ್ಲ ಆದರೆ ರೈತರ ಬಳಿ ಸೂಕ್ತವಾದ ದಾಖಲೆಗಳು ಇದ್ದರು ವಿನಾಕಾರಣ ಅರಣ್ಯ ಇಲಾಖೆ ಕಂದಾಯ ಇಲಾಖೆ ಮತ್ತು ಪೋಲಿಸ್ ಇಲಾಖೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು

ಹೋಬಳಿಯ ಶಿಲ್ಲಂಗೆರೆಯಿಂದ ಅಬ್ಬಣಿಯವರೆಗೆ ಮೂಲ ಅರಣ್ಯ ಎನ್ನುತ್ತಿದ್ದಾರೆ, ಕಂದಾಯ, ಸರ್ವೆ, ಪೊಲೀಸ್ ಇಲಾಖೆ ಯಾಮಾರಿಸುತ್ತಿದ್ದಾರೆ‌. ಆರ್ ಟಿಸಿಯಲ್ಲಿ ಗೋಮಾಳ‌ ಎಂದಿದೆ ಅದರಿಂದ ರೈತರಿಗೆ ತೊಂದರೆ ಕೊಟ್ಟಿದ್ದರಿಂದಾಗಿ ಅರಣ್ಯ ಇಲಾಖೆಯ ಸರಿನಾ ಸಿಕ್ಕಲಿಗರ್,, ಮಹೇಶ್, ಪುಷ್ಪಲತಾ ಅವರ ಮೇಲೆ ದೌರ್ಜನ್ಯ ಕೇಸ್ ಹಾಕಿದ್ದೇವೆ ಈ ಭಾಗದಲ್ಲಿ ಹಿಡುವಳಿ ಜಮೀನು ಇದ್ದು ಅರಣ್ಯ ಇಲಾಖೆ ನಕಲಿ ನಕ್ಷೆ ಮಾಡಿಕೊಂಡಿದ್ದಾರೆ ಮಾತು ಎತ್ತಿದರೆ ರಿಯಲ್ ಎಸ್ಟೇಟ್ ಎನ್ನುತ್ತಾರೆ ರೈತರನ್ನು ಅವಮಾನ ಮಾಡತ್ತಾರೆ ಎಂದರು

ಅರಣ್ಯ ಇಲಾಖೆಯ 1931 ನೋಟಿಫಿಕೇಷನ್ ದಾಖಲೆ ಸರಿ ಇಲ್ಲ.ಸಹಿ ಇಲ್ಲ. ನಕಲಿ ಎಂಬ ಅನುಮಾನ ಇದೆ. ಈ ಬಗ್ಗೆ ತನಿಖೆ ‌ನಡೆಸಬೇಕು ರೈತರ ಮೇಲೆ ದಬ್ಬಾಳಿಕೆ ‌ಮಾಡಬಾರದು ಅರಣ್ಯ ಇಲಾಖೆ‌ ಜಾಗಕ್ಕೆ ನಂಬರ್ ಕೊಟ್ಟು ದುರಸ್ತಿ ಮಾಡಬೇಕು ಜಂಟಿ ಸರ್ವೆಯಲ್ಲಿ ಮೊದಲು ಅರಣ್ಯ ಜಮೀನು ಎಷ್ಟಿದೆ ಎಂಬುದನ್ನು ಸ್ಕೆಚ್‌ ಮಾಡಿ, ನಂಬರ್ ಕೊಟ್ಟು ದುರಸ್ತಿ ಮಾಡಬೇಕು.

ಈ ಪತ್ರಿಕಾಗೋಷ್ಠಿಯಲ್ಲಿ ರೈತರಾದ ಹರಟಿ ಪ್ರಕಾಶ್, ಶಿಲ್ಲಂಗೆರೆ ಮಂಜುನಾಥ್, ಅರವಿಂದ್, ವೆಂಕಟರಣಪ್ಪ ಇದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

6 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago