ಹರಿದಾಸ ಸಾಹಿತ್ಯದ ಭಕ್ತಿ ಆಧಾರಿತ ಮತ್ತು ಜನಸಾಮಾನ್ಯರ ಭಾಷೆಯಲ್ಲಿ ರಚನೆಯಾದ ಸಾಹಿತ್ಯ ಆಗಿದೆ. ಕರ್ನಾಟಕ ಸಂಗೀತಕ್ಕೆ ಹರಿದಾಸ ಸಾಹಿತ್ಯದ ಕೊಡುಗೆ ಅನನ್ಯವಾಗಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಪಂಚಾಯತಿ ಸಮೀಪವಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಕನ್ನಡ ಹರಿದಾಸ ಸಾಹಿತ್ಯ ಎಂಬ ವಿಷಯ ಕುರಿತು ಮಾತನಾಡಿದರು. ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಹರಿದಾಸ ಸಾಹಿತ್ಯ ಪ್ರಭಾವ ಅಪಾರವಾಗಿದೆ. ಸಂಗೀತವನ್ನು ಭಗವಂತನನ್ನು ತಲುಪುವ ಮಾರ್ಗವೆಂದು ಪರಿಗಣಿಸಿದವರು ಹರಿದಾಸರು. ಭಕ್ತಿಪಂಥ ಉತ್ತರ ಭಾರತದಲ್ಲಿ ಪ್ರಾರಂಭವಾದರೂ, ಅದು ಹೆಚ್ಚು ಜನಪ್ರಿಯವಾಗಿದ್ದು ದಕ್ಷಿಣ ಭಾರತದಲ್ಲಿ. ಪುರಂದರದಾಸರನ್ನು ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹವಾಗಿದ್ದಾರೆ. ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ಪ್ರಜ್ಞೆ ಮೂಡಿಸುವ ಚಿಂತನೆಯನ್ನು ಹರಿದಾಸರು ಹೊಂದಿದ್ದರು ಎಂದರು.
ಆರೋಗ್ಯ ವಿಜ್ಞಾನ ಎಂಬ ವಿಷಯ ಕುರಿತು ಮಾತನಾಡಿದ ವೈದ್ಯರು ಮತ್ತು ಕಲಾವಿದರಾದ ಡಾ.ವಿ.ಸುಚಿತ್ರ, ಆರೋಗ್ಯವಂತ ಪ್ರಜೆಗಳು ದೇಶದ ಸಂಪತ್ತು. ಆರೋಗ್ಯವಂತ ವ್ಯಕ್ತಿಗಳು ತಮ್ಮ ಗುರಿಗಳನ್ನು ಸಾಧಿಸಲು ಮತ್ತು ಜೀವನವನ್ನು ಪರಿಪೂರ್ಣವಾಗಿ ಆನಂದಿಸಲು ಸಮರ್ಥರಾಗಿರುತ್ತಾರೆ. ಉತ್ತಮ ಆಹಾರ, ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ ಇವುಗಳಿಂದ ಆರೋಗ್ಯವಂತರಾಗಲು ಸಾಧ್ಯ. ಅತಿಯಾದ ಮೊಬೈಲ್ ಬಳಕೆ ಆರೋಗ್ಯಕ್ಕೆ ಹಾನಿಕರವಾಗಿದೆ. ಆಧುನಿಕ ಜೀವನಶೈಲಿಯು ಮಾನಸಿಕ ಒತ್ತಡ ಮತ್ತು ದೈಹಿಕ ನಿಷ್ಕ್ರಿಯತೆ ಉಂಟು ಮಾಡುತ್ತಿದೆ. ಅನಾರೋಗ್ಯಕರ ಆಹಾರ ಪದ್ದತಿಯು ಅನೇಕ ರೋಗಿಗಳಿಗೆ ಕಾರಣವಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಆರೋಗ್ಯದ ಕಡೆಗೆ ಗಮನ ಕೊಡಬೇಕು. ಆರೋಗ್ಯ ಸಂಪಾದನೆಯೂ ಕೂಡ ಅಮೂಲ್ಯವಾದ ಸಂಪತ್ತು ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಪದಾಧಿಕಾರಿಗಳಾದ ಎ.ಜಯರಾಮ್, ಡಿ.ಪಿ.ಆಂಜನೇಯ, ವೆಂಕಟರಾಜು, ವಿ.ಎಸ್.ಹೆಗಡೆ, ಜಿ.ಸುರೇಶ್, ಆರ್.ಗೋವಿಂದರಾಜು, ನಾಗರತ್ನಮ್ಮ ಸಫೀರ್, ದರ್ಗಾಜೋಗಿಹಳ್ಳಿ ಮಲ್ಲೇಶ್, ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರುಗಳಾದ. ಸಿ.ಅಣ್ಣಯ್ಯ, ರೂಬಿಯಾ ಮುಂತಾದವರು ಭಾಗವಹಿಸಿದ್ದರು. ವಿದ್ಯಾರ್ಥಿನಿಯರಾದ ಕಾವೇರಿ, ನಿಖಿತಾ, ನಂದಿನಿ, ವಿದ್ಯಾ ಮೊದಲಾದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…