ಹರಿದಾಸ ಸಾಹಿತ್ಯದ ಭಕ್ತಿ ಆಧಾರಿತ ಮತ್ತು ಜನಸಾಮಾನ್ಯರ ಭಾಷೆಯಲ್ಲಿ ರಚನೆಯಾದ ಸಾಹಿತ್ಯ ಆಗಿದೆ. ಕರ್ನಾಟಕ ಸಂಗೀತಕ್ಕೆ ಹರಿದಾಸ ಸಾಹಿತ್ಯದ ಕೊಡುಗೆ ಅನನ್ಯವಾಗಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಪಂಚಾಯತಿ ಸಮೀಪವಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಕನ್ನಡ ಹರಿದಾಸ ಸಾಹಿತ್ಯ ಎಂಬ ವಿಷಯ ಕುರಿತು ಮಾತನಾಡಿದರು. ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಹರಿದಾಸ ಸಾಹಿತ್ಯ ಪ್ರಭಾವ ಅಪಾರವಾಗಿದೆ. ಸಂಗೀತವನ್ನು ಭಗವಂತನನ್ನು ತಲುಪುವ ಮಾರ್ಗವೆಂದು ಪರಿಗಣಿಸಿದವರು ಹರಿದಾಸರು. ಭಕ್ತಿಪಂಥ ಉತ್ತರ ಭಾರತದಲ್ಲಿ ಪ್ರಾರಂಭವಾದರೂ, ಅದು ಹೆಚ್ಚು ಜನಪ್ರಿಯವಾಗಿದ್ದು ದಕ್ಷಿಣ ಭಾರತದಲ್ಲಿ. ಪುರಂದರದಾಸರನ್ನು ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹವಾಗಿದ್ದಾರೆ. ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ಪ್ರಜ್ಞೆ ಮೂಡಿಸುವ ಚಿಂತನೆಯನ್ನು ಹರಿದಾಸರು ಹೊಂದಿದ್ದರು ಎಂದರು.
ಆರೋಗ್ಯ ವಿಜ್ಞಾನ ಎಂಬ ವಿಷಯ ಕುರಿತು ಮಾತನಾಡಿದ ವೈದ್ಯರು ಮತ್ತು ಕಲಾವಿದರಾದ ಡಾ.ವಿ.ಸುಚಿತ್ರ, ಆರೋಗ್ಯವಂತ ಪ್ರಜೆಗಳು ದೇಶದ ಸಂಪತ್ತು. ಆರೋಗ್ಯವಂತ ವ್ಯಕ್ತಿಗಳು ತಮ್ಮ ಗುರಿಗಳನ್ನು ಸಾಧಿಸಲು ಮತ್ತು ಜೀವನವನ್ನು ಪರಿಪೂರ್ಣವಾಗಿ ಆನಂದಿಸಲು ಸಮರ್ಥರಾಗಿರುತ್ತಾರೆ. ಉತ್ತಮ ಆಹಾರ, ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ ಇವುಗಳಿಂದ ಆರೋಗ್ಯವಂತರಾಗಲು ಸಾಧ್ಯ. ಅತಿಯಾದ ಮೊಬೈಲ್ ಬಳಕೆ ಆರೋಗ್ಯಕ್ಕೆ ಹಾನಿಕರವಾಗಿದೆ. ಆಧುನಿಕ ಜೀವನಶೈಲಿಯು ಮಾನಸಿಕ ಒತ್ತಡ ಮತ್ತು ದೈಹಿಕ ನಿಷ್ಕ್ರಿಯತೆ ಉಂಟು ಮಾಡುತ್ತಿದೆ. ಅನಾರೋಗ್ಯಕರ ಆಹಾರ ಪದ್ದತಿಯು ಅನೇಕ ರೋಗಿಗಳಿಗೆ ಕಾರಣವಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಆರೋಗ್ಯದ ಕಡೆಗೆ ಗಮನ ಕೊಡಬೇಕು. ಆರೋಗ್ಯ ಸಂಪಾದನೆಯೂ ಕೂಡ ಅಮೂಲ್ಯವಾದ ಸಂಪತ್ತು ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಪದಾಧಿಕಾರಿಗಳಾದ ಎ.ಜಯರಾಮ್, ಡಿ.ಪಿ.ಆಂಜನೇಯ, ವೆಂಕಟರಾಜು, ವಿ.ಎಸ್.ಹೆಗಡೆ, ಜಿ.ಸುರೇಶ್, ಆರ್.ಗೋವಿಂದರಾಜು, ನಾಗರತ್ನಮ್ಮ ಸಫೀರ್, ದರ್ಗಾಜೋಗಿಹಳ್ಳಿ ಮಲ್ಲೇಶ್, ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರುಗಳಾದ. ಸಿ.ಅಣ್ಣಯ್ಯ, ರೂಬಿಯಾ ಮುಂತಾದವರು ಭಾಗವಹಿಸಿದ್ದರು. ವಿದ್ಯಾರ್ಥಿನಿಯರಾದ ಕಾವೇರಿ, ನಿಖಿತಾ, ನಂದಿನಿ, ವಿದ್ಯಾ ಮೊದಲಾದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…