ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ದೇವನಹಳ್ಳಿ ಡಾಬಾ ಗೇಟ್ ಬಳಿಯ ಐವಿಸಿ ರಸ್ತೆ ಬಳಿ ಸಂಭವಿಸಿದೆ.

ಮೂಲತಃ ಗುಡಿಬಂಡೆ ತಾಲುಕಿನ ಚಿಕ್ಕತಮ್ಮನಹಳ್ಳಿ ಗ್ರಾಮದ ಮಂಜುನಾಥ ಎಂಬುವರ ಪುತ್ರಿ ದೀಪಿಕಾ (16) ಎಂಬ ಪ್ರಥಮ ಪಿಯು ವಿದ್ಯಾರ್ಥಿನಿ ರೈಲು ಡಿಕ್ಕಿಯಾಗಿ ಮೃತಪಟ್ಟಿರುವಾಕೆ.

ಮೃತ ದೀಪಿಕಾ ತನ್ನ ತಂದೆಯ ಮರಣದ ಬಳಿಕ ತಾಯಿಯ ತವರು ಮನೆಯಾದ ತಾಲೂಕಿನ ಉಗನವಾಡಿ ಗ್ರಾಮದಲ್ಲಿ ತಾಯಿ ಮತ್ತು ತಾತನ ಜೊತೆ ವಾಸವಿದ್ದು, ಪ್ರತಿ ದಿನ ಆಕಾಶ್ ಪಿಯು ಕಾಲೇಜಿಗೆ ಗ್ರಾಮದಿಂದ ಡಾಬ ಗೇಟ್ ಬಳಿಗೆ ತಾತನ ಜೊತೆ ದ್ವಿಚಕ್ರವಾಹನದಲ್ಲಿ ಡ್ರಾಪ್ ಮಾಡಿಸಿಕೊಂಡು ನಂತರ ಬಸ್‌ನಲ್ಲಿ ಹೋಗಿಬರುತ್ತಿದ್ದಳು.

 ಎಂದಿನಂತೆ ತಾತ ರಮೇಶ್ ಮೊಮ್ಮಗಳನ್ನು ಮಂಗಳವಾರ ಬೆಳಿಗ್ಗೆ ಗೇಟ್ ಬಳಿ ಬಿಟ್ಟು ಬಸ್ಸಿಗೆ ಹತ್ತಿಸಿ ಹೋಗಿದ್ದರು. ಆಕೆ ಮತ್ತೆ ಮಧ್ಯಾಹ್ನ ಕಾಲೇಜಿನಿಂದ ಬರುವಾಗ ಹಳಿ ದಾಟಲು ಯೋಗ್ಯವಲ್ಲದ ಕಡೆ ರೈಲು ಹಳಿ ದಾಟಲು ಯತ್ನಿಸಿದಾಗ ಚಿಕ್ಕಬಳ್ಳಾಪುರ ಬೆಂಗಳೂರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ.

ಸ್ಥಳಕ್ಕೆ ದೇವನಹಳ್ಳಿ ಪೊಲೀಸರ ಜೊತೆ ಬಯಪನಹಳ್ಳಿ ರೈಲ್ವೇ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಕುಟುಂಬಸ್ಥರು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಫ್ಲೈಓವರ್ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

ಘಟನೆ ನಡೆದ ಐವಿಸಿ ರಸ್ತೆ ಮೂಲಕ ಹತ್ತಾರು ಗ್ರಾಮಗಳ ಜನರು ಸಂಚಾರ ನಡೆಸುತ್ತಾರೆ. ರಾಷ್ಟ್ರೀಯ ಹೆದ್ದಾರಿ ಸಂಪರ್ಕದ ಬಳಿ ನಿರ್ಮಿಸಿರುವ ರೈಲ್ವೆ ಅಂಡರ್‌ಪಾಸ್ ಅವೈಜ್ಞಾನಿಕವಾಗಿದ್ದು, ಹಿಂದಿನ ರೈಲ್ವೆ ದಾಟುವ ಮಾರ್ಗವನ್ನು ಮುಚ್ಚಿರುವುದರಿಂದ ಜನರು ಅನಿವಾರ್ಯವಾಗಿ ಹಳಿ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಟಿ. ಹೊಸಹಳ್ಳಿ ಗ್ರಾಮದ ಸಂತೋಷ್, ಇದೇ ಸ್ಥಳದಲ್ಲಿ ಮೂರು ವರ್ಷಗಳ ಹಿಂದೆ ನನ್ನ 11 ವರ್ಷದ ಮಗ ಸಂಜಯ್ ಕೂಡ ರೈಲು ಅಪಘಾತದಲ್ಲಿ ಮೃತಪಟ್ಟಿದ್ದ. ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ, ಕೇಂದ್ರ ಸರ್ಕಾರ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದೇಶವಾಗಿದೆ ಎನ್ನಲಾಗುತ್ತಿದೆ. ಆದರೆ ಕಾಮಗಾರಿ ಆರಂಭವಾಗದೆ ಇನ್ನೂ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ರೈಲ್ವೆ ಮೇಲ್ಸೇತುವೆ ನಿರ್ಮಿಸಿ ಇಂತಹ ದುರಂತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರ ಮತ್ತು ರೈಲ್ವೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

23 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago