ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ದೇವನಹಳ್ಳಿ ಡಾಬಾ ಗೇಟ್ ಬಳಿಯ ಐವಿಸಿ ರಸ್ತೆ ಬಳಿ ಸಂಭವಿಸಿದೆ.

ಮೂಲತಃ ಗುಡಿಬಂಡೆ ತಾಲುಕಿನ ಚಿಕ್ಕತಮ್ಮನಹಳ್ಳಿ ಗ್ರಾಮದ ಮಂಜುನಾಥ ಎಂಬುವರ ಪುತ್ರಿ ದೀಪಿಕಾ (16) ಎಂಬ ಪ್ರಥಮ ಪಿಯು ವಿದ್ಯಾರ್ಥಿನಿ ರೈಲು ಡಿಕ್ಕಿಯಾಗಿ ಮೃತಪಟ್ಟಿರುವಾಕೆ.

ಮೃತ ದೀಪಿಕಾ ತನ್ನ ತಂದೆಯ ಮರಣದ ಬಳಿಕ ತಾಯಿಯ ತವರು ಮನೆಯಾದ ತಾಲೂಕಿನ ಉಗನವಾಡಿ ಗ್ರಾಮದಲ್ಲಿ ತಾಯಿ ಮತ್ತು ತಾತನ ಜೊತೆ ವಾಸವಿದ್ದು, ಪ್ರತಿ ದಿನ ಆಕಾಶ್ ಪಿಯು ಕಾಲೇಜಿಗೆ ಗ್ರಾಮದಿಂದ ಡಾಬ ಗೇಟ್ ಬಳಿಗೆ ತಾತನ ಜೊತೆ ದ್ವಿಚಕ್ರವಾಹನದಲ್ಲಿ ಡ್ರಾಪ್ ಮಾಡಿಸಿಕೊಂಡು ನಂತರ ಬಸ್‌ನಲ್ಲಿ ಹೋಗಿಬರುತ್ತಿದ್ದಳು.

 ಎಂದಿನಂತೆ ತಾತ ರಮೇಶ್ ಮೊಮ್ಮಗಳನ್ನು ಮಂಗಳವಾರ ಬೆಳಿಗ್ಗೆ ಗೇಟ್ ಬಳಿ ಬಿಟ್ಟು ಬಸ್ಸಿಗೆ ಹತ್ತಿಸಿ ಹೋಗಿದ್ದರು. ಆಕೆ ಮತ್ತೆ ಮಧ್ಯಾಹ್ನ ಕಾಲೇಜಿನಿಂದ ಬರುವಾಗ ಹಳಿ ದಾಟಲು ಯೋಗ್ಯವಲ್ಲದ ಕಡೆ ರೈಲು ಹಳಿ ದಾಟಲು ಯತ್ನಿಸಿದಾಗ ಚಿಕ್ಕಬಳ್ಳಾಪುರ ಬೆಂಗಳೂರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ.

ಸ್ಥಳಕ್ಕೆ ದೇವನಹಳ್ಳಿ ಪೊಲೀಸರ ಜೊತೆ ಬಯಪನಹಳ್ಳಿ ರೈಲ್ವೇ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಕುಟುಂಬಸ್ಥರು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಫ್ಲೈಓವರ್ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

ಘಟನೆ ನಡೆದ ಐವಿಸಿ ರಸ್ತೆ ಮೂಲಕ ಹತ್ತಾರು ಗ್ರಾಮಗಳ ಜನರು ಸಂಚಾರ ನಡೆಸುತ್ತಾರೆ. ರಾಷ್ಟ್ರೀಯ ಹೆದ್ದಾರಿ ಸಂಪರ್ಕದ ಬಳಿ ನಿರ್ಮಿಸಿರುವ ರೈಲ್ವೆ ಅಂಡರ್‌ಪಾಸ್ ಅವೈಜ್ಞಾನಿಕವಾಗಿದ್ದು, ಹಿಂದಿನ ರೈಲ್ವೆ ದಾಟುವ ಮಾರ್ಗವನ್ನು ಮುಚ್ಚಿರುವುದರಿಂದ ಜನರು ಅನಿವಾರ್ಯವಾಗಿ ಹಳಿ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಟಿ. ಹೊಸಹಳ್ಳಿ ಗ್ರಾಮದ ಸಂತೋಷ್, ಇದೇ ಸ್ಥಳದಲ್ಲಿ ಮೂರು ವರ್ಷಗಳ ಹಿಂದೆ ನನ್ನ 11 ವರ್ಷದ ಮಗ ಸಂಜಯ್ ಕೂಡ ರೈಲು ಅಪಘಾತದಲ್ಲಿ ಮೃತಪಟ್ಟಿದ್ದ. ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ, ಕೇಂದ್ರ ಸರ್ಕಾರ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದೇಶವಾಗಿದೆ ಎನ್ನಲಾಗುತ್ತಿದೆ. ಆದರೆ ಕಾಮಗಾರಿ ಆರಂಭವಾಗದೆ ಇನ್ನೂ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ರೈಲ್ವೆ ಮೇಲ್ಸೇತುವೆ ನಿರ್ಮಿಸಿ ಇಂತಹ ದುರಂತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರ ಮತ್ತು ರೈಲ್ವೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

44 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

2 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

21 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago