ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ದೇವನಹಳ್ಳಿ ಡಾಬಾ ಗೇಟ್ ಬಳಿಯ ಐವಿಸಿ ರಸ್ತೆ ಬಳಿ ಸಂಭವಿಸಿದೆ.
ಮೂಲತಃ ಗುಡಿಬಂಡೆ ತಾಲುಕಿನ ಚಿಕ್ಕತಮ್ಮನಹಳ್ಳಿ ಗ್ರಾಮದ ಮಂಜುನಾಥ ಎಂಬುವರ ಪುತ್ರಿ ದೀಪಿಕಾ (16) ಎಂಬ ಪ್ರಥಮ ಪಿಯು ವಿದ್ಯಾರ್ಥಿನಿ ರೈಲು ಡಿಕ್ಕಿಯಾಗಿ ಮೃತಪಟ್ಟಿರುವಾಕೆ.
ಮೃತ ದೀಪಿಕಾ ತನ್ನ ತಂದೆಯ ಮರಣದ ಬಳಿಕ ತಾಯಿಯ ತವರು ಮನೆಯಾದ ತಾಲೂಕಿನ ಉಗನವಾಡಿ ಗ್ರಾಮದಲ್ಲಿ ತಾಯಿ ಮತ್ತು ತಾತನ ಜೊತೆ ವಾಸವಿದ್ದು, ಪ್ರತಿ ದಿನ ಆಕಾಶ್ ಪಿಯು ಕಾಲೇಜಿಗೆ ಗ್ರಾಮದಿಂದ ಡಾಬ ಗೇಟ್ ಬಳಿಗೆ ತಾತನ ಜೊತೆ ದ್ವಿಚಕ್ರವಾಹನದಲ್ಲಿ ಡ್ರಾಪ್ ಮಾಡಿಸಿಕೊಂಡು ನಂತರ ಬಸ್ನಲ್ಲಿ ಹೋಗಿಬರುತ್ತಿದ್ದಳು.
ಎಂದಿನಂತೆ ತಾತ ರಮೇಶ್ ಮೊಮ್ಮಗಳನ್ನು ಮಂಗಳವಾರ ಬೆಳಿಗ್ಗೆ ಗೇಟ್ ಬಳಿ ಬಿಟ್ಟು ಬಸ್ಸಿಗೆ ಹತ್ತಿಸಿ ಹೋಗಿದ್ದರು. ಆಕೆ ಮತ್ತೆ ಮಧ್ಯಾಹ್ನ ಕಾಲೇಜಿನಿಂದ ಬರುವಾಗ ಹಳಿ ದಾಟಲು ಯೋಗ್ಯವಲ್ಲದ ಕಡೆ ರೈಲು ಹಳಿ ದಾಟಲು ಯತ್ನಿಸಿದಾಗ ಚಿಕ್ಕಬಳ್ಳಾಪುರ ಬೆಂಗಳೂರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ.
ಸ್ಥಳಕ್ಕೆ ದೇವನಹಳ್ಳಿ ಪೊಲೀಸರ ಜೊತೆ ಬಯಪನಹಳ್ಳಿ ರೈಲ್ವೇ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಕುಟುಂಬಸ್ಥರು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಫ್ಲೈಓವರ್ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ
ಘಟನೆ ನಡೆದ ಐವಿಸಿ ರಸ್ತೆ ಮೂಲಕ ಹತ್ತಾರು ಗ್ರಾಮಗಳ ಜನರು ಸಂಚಾರ ನಡೆಸುತ್ತಾರೆ. ರಾಷ್ಟ್ರೀಯ ಹೆದ್ದಾರಿ ಸಂಪರ್ಕದ ಬಳಿ ನಿರ್ಮಿಸಿರುವ ರೈಲ್ವೆ ಅಂಡರ್ಪಾಸ್ ಅವೈಜ್ಞಾನಿಕವಾಗಿದ್ದು, ಹಿಂದಿನ ರೈಲ್ವೆ ದಾಟುವ ಮಾರ್ಗವನ್ನು ಮುಚ್ಚಿರುವುದರಿಂದ ಜನರು ಅನಿವಾರ್ಯವಾಗಿ ಹಳಿ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಟಿ. ಹೊಸಹಳ್ಳಿ ಗ್ರಾಮದ ಸಂತೋಷ್, ಇದೇ ಸ್ಥಳದಲ್ಲಿ ಮೂರು ವರ್ಷಗಳ ಹಿಂದೆ ನನ್ನ 11 ವರ್ಷದ ಮಗ ಸಂಜಯ್ ಕೂಡ ರೈಲು ಅಪಘಾತದಲ್ಲಿ ಮೃತಪಟ್ಟಿದ್ದ. ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ, ಕೇಂದ್ರ ಸರ್ಕಾರ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದೇಶವಾಗಿದೆ ಎನ್ನಲಾಗುತ್ತಿದೆ. ಆದರೆ ಕಾಮಗಾರಿ ಆರಂಭವಾಗದೆ ಇನ್ನೂ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ರೈಲ್ವೆ ಮೇಲ್ಸೇತುವೆ ನಿರ್ಮಿಸಿ ಇಂತಹ ದುರಂತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರ ಮತ್ತು ರೈಲ್ವೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…
ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…
ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…