ಗೌರಿಬಿದನೂರು:- ಚಿಕ್ಕ ಕುರುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಸತ್ಯನಾರಾಯಣ (45) ಲೇಟ್ ವೆಂಕಟರಮಣಪ್ಪ ಇವರು ನಗರದ ಕಲ್ಲುಡಿ ಗ್ರಾಮದಲ್ಲಿರುವ ಸಿ.ಬಿ ಮೋಟಾರ್ ಸರ್ವಿಸ್ ಸ್ಟೇಷನ್ ನಲ್ಲಿ ತಮ್ಮ ಬೈಕ್ ಅನ್ನು ರಿಪೇರಿಗೆ ಬಿಟ್ಟಿದ್ದು ಬೈಕ್ ರಿಪೇರಿ ಆದ ಬಳಿಕ ಮೆಕಾನಿಕ್ ಚೇತನ್ ಎಲ್ (21) ಬಿನ್ ಲಕ್ಷ್ಮೀನಾರಾಯಣಪ್ಪ ಎಂಬ ಹುಡುಗ ರಿಪೇರಿಯ ಹಣವನ್ನು ಕೇಳುವ ಸಮಯದಲ್ಲಿ ಚೇತನ್ ಮತ್ತು ಸತ್ಯನಾರಾಯಣ್ ನಡುವೆ ಮಾತಿನ ಚಕಮಕಿ ಮತ್ತು ಗಲಾಟೆ ನಡೆದಿದೆ.
ಕಳೆದ ಅ.25ರ ಬುಧವಾರದಂದು ಚೇತನ್ ಆತನ ಸ್ನೇಹಿತರಾದ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಜ್ವಾಲೆಂದ್ರ ಬಿನ್ ಅಶ್ವತಪ್ಪ (22) ಮತ್ತು ಚೇತನ್ ಕೆ.ಹೆಚ್ ಬಿನ್ ಹನುಮಂತರಾಯಪ್ಪ (23) ಎಂಬ ಇಬ್ಬರು ಸ್ನೇಹಿತರಿಗೆ ಹಣದ ವಿಷಯ ತಿಳಿಸಿರುತ್ತಾನೆ.
ರಕ್ತಸ್ರಾವದಿಂದ ನರಳಾಡುತ್ತಿದ್ದ ಸತ್ಯನಾರಾಯಣನನ್ನ ಕಂಡ ಸ್ಥಳೀಯರು ಪ್ರಥಮ ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿರುತ್ತಾರೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಬೆಂಗಳೂರಿನ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಸತ್ಯನಾರಾಯಣ ಸಾವನಪ್ಪಿದ್ದಾರೆ.
ಅದೇ ಗ್ರಾಮದ ನಿವಾಸಿ ಬೈಕ್ ಮೆಕಾನಿಕ್ ಚೇತನ್ ಸ್ನೇಹಿತನಾದ ಜ್ವಾಲೆಂದ್ರ, ಮತ್ತು ಮೃತ ಸತ್ಯನಾರಾಯಣ ಎಂಬುವರಿಗೆ ಖಾಲಿ ನಿವೇಶನದ ವಿಚಾರವಾಗಿ ಈ ಹಿಂದೆ ಗಲಾಟೆಯು ಸಹ ನಡೆದಿತ್ತು. ಹಳೆ ದ್ವೇಷ ಮತ್ತು ಹಣದ ವಿಚಾರಕ್ಕೆ ಮನೆಯ ಬಳಿ ಬಂದು ಗಲಾಟೆ ತೆಗೆದಿದ್ದಾರೆ ಎಂದು ಸತ್ಯನಾರಾಯಣ್ ರವರ ಸಂಬಂಧಿಕರಾದ ಗಂಗಾಧರಪ್ಪ ತಿಳಿಸಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…