ಹಳೇ ದ್ವೇಷ: ಬೈಕ್ ರಿಪೇರಿ ಹಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

ಗೌರಿಬಿದನೂರು:- ಚಿಕ್ಕ ಕುರುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಸತ್ಯನಾರಾಯಣ (45) ಲೇಟ್ ವೆಂಕಟರಮಣಪ್ಪ ಇವರು ನಗರದ ಕಲ್ಲುಡಿ ಗ್ರಾಮದಲ್ಲಿರುವ ಸಿ.ಬಿ ಮೋಟಾರ್ ಸರ್ವಿಸ್ ಸ್ಟೇಷನ್ ನಲ್ಲಿ ತಮ್ಮ ಬೈಕ್ ಅನ್ನು ರಿಪೇರಿಗೆ ಬಿಟ್ಟಿದ್ದು ಬೈಕ್ ರಿಪೇರಿ ಆದ ಬಳಿಕ ಮೆಕಾನಿಕ್ ಚೇತನ್ ಎಲ್ (21) ಬಿನ್ ಲಕ್ಷ್ಮೀನಾರಾಯಣಪ್ಪ ಎಂಬ ಹುಡುಗ ರಿಪೇರಿಯ ಹಣವನ್ನು ಕೇಳುವ ಸಮಯದಲ್ಲಿ ಚೇತನ್ ಮತ್ತು ಸತ್ಯನಾರಾಯಣ್ ನಡುವೆ ಮಾತಿನ ಚಕಮಕಿ ಮತ್ತು ಗಲಾಟೆ ನಡೆದಿದೆ.

ಕಳೆದ ಅ.25ರ ಬುಧವಾರದಂದು ಚೇತನ್ ಆತನ ಸ್ನೇಹಿತರಾದ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಜ್ವಾಲೆಂದ್ರ ಬಿನ್ ಅಶ್ವತಪ್ಪ (22) ಮತ್ತು ಚೇತನ್ ಕೆ.ಹೆಚ್ ಬಿನ್ ಹನುಮಂತರಾಯಪ್ಪ (23) ಎಂಬ ಇಬ್ಬರು ಸ್ನೇಹಿತರಿಗೆ ಹಣದ ವಿಷಯ ತಿಳಿಸಿರುತ್ತಾನೆ.

ಬುಧವಾರ ಸಂಜೆ 5 ಗಂಟೆ ಸಮಯದಲ್ಲಿ ಹೊಲದ ಕೆಲಸ ಮುಗಿಸಿಕೊಂಡು ಮನೆ ಬಳಿ ಕುಳಿತಿದ್ದ ಸತ್ಯನಾರಾಯಣ ರವರನ್ನು ಜ್ವಾಲೆಂದ್ರ, ಬೈಕ್ ಮೆಕಾನಿಕ್ ಚೇತನ್ ಮತ್ತು ಆತನ ಸ್ನೇಹಿತನಾದ ಕೆ.ಹೆಚ್ ಚೇತನ್ ಗ್ರಾಮಕ್ಕೆ ಹೋಗಿ ಹಣವನ್ನು ಕೇಳುವ ಸಮಯದಲ್ಲಿ ಗಲಾಟೆ ನಡೆದು ರಾಡ್ ಮತ್ತು ದೊಣ್ಣೆಯಿಂದ ಸತ್ಯನಾರಾಯಣ್ ಎಂಬ ವ್ಯಕ್ತಿಯ ತಲೆಗೆ ತೀವ್ರವಾಗಿ ಹೊಡೆದು ಅಲ್ಲಿಂದ ಎಸ್ಕೇಪ್ ಆಗಿದ್ದರು.

ರಕ್ತಸ್ರಾವದಿಂದ ನರಳಾಡುತ್ತಿದ್ದ ಸತ್ಯನಾರಾಯಣನನ್ನ ಕಂಡ ಸ್ಥಳೀಯರು ಪ್ರಥಮ ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿರುತ್ತಾರೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಬೆಂಗಳೂರಿನ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಸತ್ಯನಾರಾಯಣ  ಸಾವನಪ್ಪಿದ್ದಾರೆ.

ಅದೇ ಗ್ರಾಮದ ನಿವಾಸಿ ಬೈಕ್ ಮೆಕಾನಿಕ್ ಚೇತನ್ ಸ್ನೇಹಿತನಾದ ಜ್ವಾಲೆಂದ್ರ, ಮತ್ತು ಮೃತ ಸತ್ಯನಾರಾಯಣ ಎಂಬುವರಿಗೆ ಖಾಲಿ ನಿವೇಶನದ ವಿಚಾರವಾಗಿ ಈ ಹಿಂದೆ ಗಲಾಟೆಯು ಸಹ ನಡೆದಿತ್ತು. ಹಳೆ ದ್ವೇಷ ಮತ್ತು ಹಣದ ವಿಚಾರಕ್ಕೆ ಮನೆಯ ಬಳಿ ಬಂದು ಗಲಾಟೆ ತೆಗೆದಿದ್ದಾರೆ ಎಂದು ಸತ್ಯನಾರಾಯಣ್ ರವರ ಸಂಬಂಧಿಕರಾದ ಗಂಗಾಧರಪ್ಪ ತಿಳಿಸಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಡಿ.ವೈ.ಎಸ್ಪಿ ಶಿವಕುಮಾರ್, ಗೌರಿಬಿದನೂರು ವೃತ್ತ ನಿರೀಕ್ಷಕರಾದ ಕೆ.ಪಿ.ಸತ್ಯನಾರಾಯಣ್, ಗೌರಿಬಿದನೂರು ಗ್ರಾಮಾಂತರ ಠಾಣೆಯ ಪಿಎಸ್ಐ ರಮೇಶ್ ಗುಗ್ರಿ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

3 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

14 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

15 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago