ಹಳೇ ದ್ವೇಷ: ಬೈಕ್ ರಿಪೇರಿ ಹಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

ಗೌರಿಬಿದನೂರು:- ಚಿಕ್ಕ ಕುರುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಸತ್ಯನಾರಾಯಣ (45) ಲೇಟ್ ವೆಂಕಟರಮಣಪ್ಪ ಇವರು ನಗರದ ಕಲ್ಲುಡಿ ಗ್ರಾಮದಲ್ಲಿರುವ ಸಿ.ಬಿ ಮೋಟಾರ್ ಸರ್ವಿಸ್ ಸ್ಟೇಷನ್ ನಲ್ಲಿ ತಮ್ಮ ಬೈಕ್ ಅನ್ನು ರಿಪೇರಿಗೆ ಬಿಟ್ಟಿದ್ದು ಬೈಕ್ ರಿಪೇರಿ ಆದ ಬಳಿಕ ಮೆಕಾನಿಕ್ ಚೇತನ್ ಎಲ್ (21) ಬಿನ್ ಲಕ್ಷ್ಮೀನಾರಾಯಣಪ್ಪ ಎಂಬ ಹುಡುಗ ರಿಪೇರಿಯ ಹಣವನ್ನು ಕೇಳುವ ಸಮಯದಲ್ಲಿ ಚೇತನ್ ಮತ್ತು ಸತ್ಯನಾರಾಯಣ್ ನಡುವೆ ಮಾತಿನ ಚಕಮಕಿ ಮತ್ತು ಗಲಾಟೆ ನಡೆದಿದೆ.

ಕಳೆದ ಅ.25ರ ಬುಧವಾರದಂದು ಚೇತನ್ ಆತನ ಸ್ನೇಹಿತರಾದ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಜ್ವಾಲೆಂದ್ರ ಬಿನ್ ಅಶ್ವತಪ್ಪ (22) ಮತ್ತು ಚೇತನ್ ಕೆ.ಹೆಚ್ ಬಿನ್ ಹನುಮಂತರಾಯಪ್ಪ (23) ಎಂಬ ಇಬ್ಬರು ಸ್ನೇಹಿತರಿಗೆ ಹಣದ ವಿಷಯ ತಿಳಿಸಿರುತ್ತಾನೆ.

ಬುಧವಾರ ಸಂಜೆ 5 ಗಂಟೆ ಸಮಯದಲ್ಲಿ ಹೊಲದ ಕೆಲಸ ಮುಗಿಸಿಕೊಂಡು ಮನೆ ಬಳಿ ಕುಳಿತಿದ್ದ ಸತ್ಯನಾರಾಯಣ ರವರನ್ನು ಜ್ವಾಲೆಂದ್ರ, ಬೈಕ್ ಮೆಕಾನಿಕ್ ಚೇತನ್ ಮತ್ತು ಆತನ ಸ್ನೇಹಿತನಾದ ಕೆ.ಹೆಚ್ ಚೇತನ್ ಗ್ರಾಮಕ್ಕೆ ಹೋಗಿ ಹಣವನ್ನು ಕೇಳುವ ಸಮಯದಲ್ಲಿ ಗಲಾಟೆ ನಡೆದು ರಾಡ್ ಮತ್ತು ದೊಣ್ಣೆಯಿಂದ ಸತ್ಯನಾರಾಯಣ್ ಎಂಬ ವ್ಯಕ್ತಿಯ ತಲೆಗೆ ತೀವ್ರವಾಗಿ ಹೊಡೆದು ಅಲ್ಲಿಂದ ಎಸ್ಕೇಪ್ ಆಗಿದ್ದರು.

ರಕ್ತಸ್ರಾವದಿಂದ ನರಳಾಡುತ್ತಿದ್ದ ಸತ್ಯನಾರಾಯಣನನ್ನ ಕಂಡ ಸ್ಥಳೀಯರು ಪ್ರಥಮ ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿರುತ್ತಾರೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಬೆಂಗಳೂರಿನ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಸತ್ಯನಾರಾಯಣ  ಸಾವನಪ್ಪಿದ್ದಾರೆ.

ಅದೇ ಗ್ರಾಮದ ನಿವಾಸಿ ಬೈಕ್ ಮೆಕಾನಿಕ್ ಚೇತನ್ ಸ್ನೇಹಿತನಾದ ಜ್ವಾಲೆಂದ್ರ, ಮತ್ತು ಮೃತ ಸತ್ಯನಾರಾಯಣ ಎಂಬುವರಿಗೆ ಖಾಲಿ ನಿವೇಶನದ ವಿಚಾರವಾಗಿ ಈ ಹಿಂದೆ ಗಲಾಟೆಯು ಸಹ ನಡೆದಿತ್ತು. ಹಳೆ ದ್ವೇಷ ಮತ್ತು ಹಣದ ವಿಚಾರಕ್ಕೆ ಮನೆಯ ಬಳಿ ಬಂದು ಗಲಾಟೆ ತೆಗೆದಿದ್ದಾರೆ ಎಂದು ಸತ್ಯನಾರಾಯಣ್ ರವರ ಸಂಬಂಧಿಕರಾದ ಗಂಗಾಧರಪ್ಪ ತಿಳಿಸಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಡಿ.ವೈ.ಎಸ್ಪಿ ಶಿವಕುಮಾರ್, ಗೌರಿಬಿದನೂರು ವೃತ್ತ ನಿರೀಕ್ಷಕರಾದ ಕೆ.ಪಿ.ಸತ್ಯನಾರಾಯಣ್, ಗೌರಿಬಿದನೂರು ಗ್ರಾಮಾಂತರ ಠಾಣೆಯ ಪಿಎಸ್ಐ ರಮೇಶ್ ಗುಗ್ರಿ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

13 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

13 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

13 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

13 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

16 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

20 hours ago