ಗೌರಿಬಿದನೂರು:- ಚಿಕ್ಕ ಕುರುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಸತ್ಯನಾರಾಯಣ (45) ಲೇಟ್ ವೆಂಕಟರಮಣಪ್ಪ ಇವರು ನಗರದ ಕಲ್ಲುಡಿ ಗ್ರಾಮದಲ್ಲಿರುವ ಸಿ.ಬಿ ಮೋಟಾರ್ ಸರ್ವಿಸ್ ಸ್ಟೇಷನ್ ನಲ್ಲಿ ತಮ್ಮ ಬೈಕ್ ಅನ್ನು ರಿಪೇರಿಗೆ ಬಿಟ್ಟಿದ್ದು ಬೈಕ್ ರಿಪೇರಿ ಆದ ಬಳಿಕ ಮೆಕಾನಿಕ್ ಚೇತನ್ ಎಲ್ (21) ಬಿನ್ ಲಕ್ಷ್ಮೀನಾರಾಯಣಪ್ಪ ಎಂಬ ಹುಡುಗ ರಿಪೇರಿಯ ಹಣವನ್ನು ಕೇಳುವ ಸಮಯದಲ್ಲಿ ಚೇತನ್ ಮತ್ತು ಸತ್ಯನಾರಾಯಣ್ ನಡುವೆ ಮಾತಿನ ಚಕಮಕಿ ಮತ್ತು ಗಲಾಟೆ ನಡೆದಿದೆ.
ಕಳೆದ ಅ.25ರ ಬುಧವಾರದಂದು ಚೇತನ್ ಆತನ ಸ್ನೇಹಿತರಾದ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಜ್ವಾಲೆಂದ್ರ ಬಿನ್ ಅಶ್ವತಪ್ಪ (22) ಮತ್ತು ಚೇತನ್ ಕೆ.ಹೆಚ್ ಬಿನ್ ಹನುಮಂತರಾಯಪ್ಪ (23) ಎಂಬ ಇಬ್ಬರು ಸ್ನೇಹಿತರಿಗೆ ಹಣದ ವಿಷಯ ತಿಳಿಸಿರುತ್ತಾನೆ.
ರಕ್ತಸ್ರಾವದಿಂದ ನರಳಾಡುತ್ತಿದ್ದ ಸತ್ಯನಾರಾಯಣನನ್ನ ಕಂಡ ಸ್ಥಳೀಯರು ಪ್ರಥಮ ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿರುತ್ತಾರೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಬೆಂಗಳೂರಿನ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಸತ್ಯನಾರಾಯಣ ಸಾವನಪ್ಪಿದ್ದಾರೆ.
ಅದೇ ಗ್ರಾಮದ ನಿವಾಸಿ ಬೈಕ್ ಮೆಕಾನಿಕ್ ಚೇತನ್ ಸ್ನೇಹಿತನಾದ ಜ್ವಾಲೆಂದ್ರ, ಮತ್ತು ಮೃತ ಸತ್ಯನಾರಾಯಣ ಎಂಬುವರಿಗೆ ಖಾಲಿ ನಿವೇಶನದ ವಿಚಾರವಾಗಿ ಈ ಹಿಂದೆ ಗಲಾಟೆಯು ಸಹ ನಡೆದಿತ್ತು. ಹಳೆ ದ್ವೇಷ ಮತ್ತು ಹಣದ ವಿಚಾರಕ್ಕೆ ಮನೆಯ ಬಳಿ ಬಂದು ಗಲಾಟೆ ತೆಗೆದಿದ್ದಾರೆ ಎಂದು ಸತ್ಯನಾರಾಯಣ್ ರವರ ಸಂಬಂಧಿಕರಾದ ಗಂಗಾಧರಪ್ಪ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…