ಗೌರಿಬಿದನೂರು:- ಚಿಕ್ಕ ಕುರುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಸತ್ಯನಾರಾಯಣ (45) ಲೇಟ್ ವೆಂಕಟರಮಣಪ್ಪ ಇವರು ನಗರದ ಕಲ್ಲುಡಿ ಗ್ರಾಮದಲ್ಲಿರುವ ಸಿ.ಬಿ ಮೋಟಾರ್ ಸರ್ವಿಸ್ ಸ್ಟೇಷನ್ ನಲ್ಲಿ ತಮ್ಮ ಬೈಕ್ ಅನ್ನು ರಿಪೇರಿಗೆ ಬಿಟ್ಟಿದ್ದು ಬೈಕ್ ರಿಪೇರಿ ಆದ ಬಳಿಕ ಮೆಕಾನಿಕ್ ಚೇತನ್ ಎಲ್ (21) ಬಿನ್ ಲಕ್ಷ್ಮೀನಾರಾಯಣಪ್ಪ ಎಂಬ ಹುಡುಗ ರಿಪೇರಿಯ ಹಣವನ್ನು ಕೇಳುವ ಸಮಯದಲ್ಲಿ ಚೇತನ್ ಮತ್ತು ಸತ್ಯನಾರಾಯಣ್ ನಡುವೆ ಮಾತಿನ ಚಕಮಕಿ ಮತ್ತು ಗಲಾಟೆ ನಡೆದಿದೆ.
ಕಳೆದ ಅ.25ರ ಬುಧವಾರದಂದು ಚೇತನ್ ಆತನ ಸ್ನೇಹಿತರಾದ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಜ್ವಾಲೆಂದ್ರ ಬಿನ್ ಅಶ್ವತಪ್ಪ (22) ಮತ್ತು ಚೇತನ್ ಕೆ.ಹೆಚ್ ಬಿನ್ ಹನುಮಂತರಾಯಪ್ಪ (23) ಎಂಬ ಇಬ್ಬರು ಸ್ನೇಹಿತರಿಗೆ ಹಣದ ವಿಷಯ ತಿಳಿಸಿರುತ್ತಾನೆ.
ರಕ್ತಸ್ರಾವದಿಂದ ನರಳಾಡುತ್ತಿದ್ದ ಸತ್ಯನಾರಾಯಣನನ್ನ ಕಂಡ ಸ್ಥಳೀಯರು ಪ್ರಥಮ ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿರುತ್ತಾರೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಬೆಂಗಳೂರಿನ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಸತ್ಯನಾರಾಯಣ ಸಾವನಪ್ಪಿದ್ದಾರೆ.
ಅದೇ ಗ್ರಾಮದ ನಿವಾಸಿ ಬೈಕ್ ಮೆಕಾನಿಕ್ ಚೇತನ್ ಸ್ನೇಹಿತನಾದ ಜ್ವಾಲೆಂದ್ರ, ಮತ್ತು ಮೃತ ಸತ್ಯನಾರಾಯಣ ಎಂಬುವರಿಗೆ ಖಾಲಿ ನಿವೇಶನದ ವಿಚಾರವಾಗಿ ಈ ಹಿಂದೆ ಗಲಾಟೆಯು ಸಹ ನಡೆದಿತ್ತು. ಹಳೆ ದ್ವೇಷ ಮತ್ತು ಹಣದ ವಿಚಾರಕ್ಕೆ ಮನೆಯ ಬಳಿ ಬಂದು ಗಲಾಟೆ ತೆಗೆದಿದ್ದಾರೆ ಎಂದು ಸತ್ಯನಾರಾಯಣ್ ರವರ ಸಂಬಂಧಿಕರಾದ ಗಂಗಾಧರಪ್ಪ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ..…