ಹಳೇ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅರ್ಥಪೂರ್ಣವಾಗಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಸಲಾಯಿತು.
1994 -1995 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 30 ವರ್ಷಗಳ ಬಳಿಕ ತಾವು ಓದಿದ ಶಾಲೆಯಲ್ಲಿ ಸೇರಿ ತಮ್ಮ ಶಿಕ್ಷಕರಿಗೆ ಗೌರವವನ್ನ ಸಲ್ಲಿಸಿದ್ದಾರೆ.
ಗುರುಗಳನ್ನು ಬೆಳ್ಳಿ ರಥದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಕಾರ್ಯಕ್ರಮದಲ್ಲಿ ಗುರುಗಳಿಗೆ ಸಕಲ ಗೌರವಗಳನ್ನು ಸಲ್ಲಿಸುತ್ತ ಗುರುಗಳ ಪಾದಪೂಜೆ ಮಾಡಿ, ಶಿಕ್ಷಕರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆತರಲಾಯಿತು.
ಬಾಲ್ಯದಲ್ಲಿ ತುಂಟತನ, ಅಜ್ಞಾನ, ಅಶಿಸ್ತಿನಿಂದ ಇರುವ ಮಕ್ಕಳನ್ನು ಒಂದು ಹತೋಟಿಗೆ ತಂದು ವಿದ್ಯೆ ಕಲಿಸುವ ಎಲ್ಲ ಗುರುಗಳಿಗೂ ನಮನಗಳನ್ನು ಸಲ್ಲಿಸಿದರು.
ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ತೆರಳಿದ್ದಾರೆ. ಆದರೆ ಎಲ್ಲಾ ವಿದ್ಯಾರ್ಥಿಗಳು ಸುಸಂಸ್ಕೃತ ವಿದ್ಯಾರ್ಥಿಗಳಾಗಿರುವುದು ಶಿಕ್ಷಕರಾದ ನಮಗೆ ಹೆಮ್ಮೆ ವಿಷಯವಾಗಿದೆ. ಎಲ್ಲಿಯಾದರೂ ಸಿಕ್ಕಾಗ ನಮ್ಮ ಶಿಷ್ಯರ ಪಡೆ ಅಂತ ಹೆಮ್ಮೆಯಿಂದ ಹೇಳಬಹುದಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಇದೇ ಅವರು ಓದಿದ ಶಾಲೆಗೆ ನೀಡುವ ಗೌರವವಾಗಿದೆ ಎಂದು ಶಿಕ್ಷಕರು ಹೇಳಿದರು.
ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ವಿದ್ಯಾರ್ಥಿಗಳಲ್ಲಿ ಇದೆ. ಜೀವನದಲ್ಲಿ ಎಷ್ಟೇ ಮುಂದುವರಿದರೂ ಅದರ ಹಿಂದೆ ಗುರುವಿನ ಪಾತ್ರ ಇದ್ದೇ ಇರುತ್ತದೆ. ಗುರುಗಳಿಂದ ಬೆತ್ತದ ಏಟು ಬಿದ್ದಿದ್ದರಿಂದ ಇವತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪಗೊಂಡಿದ್ದೇವೆ. ಪಾಠ ಕಲಿಸಿ ಜೀವನದ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.
ನಂತರ ಹಳೇ ವಿದ್ಯಾರ್ಥಿ ನರಸಪ್ಪ ಮಾತನಾಡಿ, ನಾನು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವಾಗ ಕೂಲಿ ಕೆಲಸ ಮಾಡುತ್ತಿದ್ದೆ. ಗುರುಗಳ ಮಾರ್ಗದರ್ಶನದಿಂದ ಈಗ ಸಿಂಚನ ಎಕ್ಸ್ಪೋರ್ಟ್ ಎಂಬ 2 ಸ್ವಂತ ಕಂಪನಿ ಮಾಡಿ.. ಸುಮಾರು 500 ರಿಂದ 600 ಜನಕ್ಕೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿರುತ್ತೇನೆ. ಇದಕ್ಕೆಲ್ಲಾ ಈ ನಮ್ಮ ಶಿಕ್ಷಕರಿಂದಲೇ ಎಂದು ಹೇಳಿದರು.
ಈ ವೇಳೆ ಕೆ ವೆಂಕಟರಮಣಪ್ಪ , ಕೆ ಎಸ್ ಮಂಜುನಾಥಚಾರಿ, ಕೆ ಚಿತ್ತಯ್ಯಾ, ರಮೇಶ ಎಂ, ಪ್ರಸ್ತುತ ಮುಖ್ಯೋಪಾಧ್ಯಾಯ ರಾಧಾಮಣಿ ಮತ್ತು ಇತರ ಶಿಕ್ಷಕರು, ಹಳೇ ವಿದ್ಯಾರ್ಥಿಗಳಾದ ನರಸಪ್ಪ ( ಉದ್ಯಮಿಗಳು ಸಿಂಚನ ಎಕ್ಸ್ಪೋರ್ಟ್ಸ್), ಉಮೇಶ, ಗಾಯಿತ್ರಮ್ಮ, ಸಿದ್ದರಾಜು, ಕೃಷ್ಣಪ್ಪ, ಚಿನ್ನಪ್ಪಯ್ಯಾ, ಗೋವಿಂದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…