ಹಳೇ ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ: 30 ವರ್ಷಗಳ ಬಳಿಕ ಹಳೇ ವಿದ್ಯಾರ್ಥಿಗಳು ಒಂದೇ ಕಡೆ ಸೇರಿ ಕಾರ್ಯಕ್ರಮ ಆಯೋಜನೆ

ಹಳೇ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅರ್ಥಪೂರ್ಣವಾಗಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಸಲಾಯಿತು.

1994 -1995 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 30 ವರ್ಷಗಳ ಬಳಿಕ ತಾವು ಓದಿದ ಶಾಲೆಯಲ್ಲಿ ಸೇರಿ ತಮ್ಮ ಶಿಕ್ಷಕರಿಗೆ ಗೌರವವನ್ನ ಸಲ್ಲಿಸಿದ್ದಾರೆ.

ಗುರುಗಳನ್ನು ಬೆಳ್ಳಿ ರಥದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಕಾರ್ಯಕ್ರಮದಲ್ಲಿ ಗುರುಗಳಿಗೆ ಸಕಲ ಗೌರವಗಳನ್ನು ಸಲ್ಲಿಸುತ್ತ ಗುರುಗಳ ಪಾದಪೂಜೆ ಮಾಡಿ, ಶಿಕ್ಷಕರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆತರಲಾಯಿತು.

ಇನ್ನು ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹಳೇ ವಿದ್ಯಾರ್ಥಿಗಳು ಒಂದೇ ಕಡೆ  ಸೇರಿರುವದರಿಂದ ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ…

ಬಾಲ್ಯದಲ್ಲಿ ತುಂಟತನ, ಅಜ್ಞಾನ, ಅಶಿಸ್ತಿನಿಂದ ಇರುವ ಮಕ್ಕಳನ್ನು ಒಂದು ಹತೋಟಿಗೆ ತಂದು ವಿದ್ಯೆ ಕಲಿಸುವ ಎಲ್ಲ ಗುರುಗಳಿಗೂ ನಮನಗಳನ್ನು ಸಲ್ಲಿಸಿದರು.

ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ತೆರಳಿದ್ದಾರೆ. ಆದರೆ ಎಲ್ಲಾ ವಿದ್ಯಾರ್ಥಿಗಳು ಸುಸಂಸ್ಕೃತ ವಿದ್ಯಾರ್ಥಿಗಳಾಗಿರುವುದು ಶಿಕ್ಷಕರಾದ ನಮಗೆ ಹೆಮ್ಮೆ ವಿಷಯವಾಗಿದೆ. ಎಲ್ಲಿಯಾದರೂ ಸಿಕ್ಕಾಗ ನಮ್ಮ ಶಿಷ್ಯರ ಪಡೆ ಅಂತ ಹೆಮ್ಮೆಯಿಂದ ಹೇಳಬಹುದಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಇದೇ ಅವರು ಓದಿದ ಶಾಲೆಗೆ ನೀಡುವ ಗೌರವವಾಗಿದೆ ಎಂದು ಶಿಕ್ಷಕರು ಹೇಳಿದರು.

ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ವಿದ್ಯಾರ್ಥಿಗಳಲ್ಲಿ ಇದೆ. ಜೀವನದಲ್ಲಿ ಎಷ್ಟೇ ಮುಂದುವರಿದರೂ ಅದರ ಹಿಂದೆ ಗುರುವಿನ ಪಾತ್ರ ಇದ್ದೇ ಇರುತ್ತದೆ. ಗುರುಗಳಿಂದ ಬೆತ್ತದ ಏಟು ಬಿದ್ದಿದ್ದರಿಂದ ಇವತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪಗೊಂಡಿದ್ದೇವೆ. ಪಾಠ ಕಲಿಸಿ ಜೀವನದ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ನಂತರ ಹಳೇ ವಿದ್ಯಾರ್ಥಿ ನರಸಪ್ಪ ಮಾತನಾಡಿ, ನಾನು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವಾಗ ಕೂಲಿ ಕೆಲಸ ಮಾಡುತ್ತಿದ್ದೆ. ಗುರುಗಳ ಮಾರ್ಗದರ್ಶನದಿಂದ ಈಗ ಸಿಂಚನ ಎಕ್ಸ್ಪೋರ್ಟ್ ಎಂಬ 2 ಸ್ವಂತ ಕಂಪನಿ ಮಾಡಿ.. ಸುಮಾರು 500 ರಿಂದ 600 ಜನಕ್ಕೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿರುತ್ತೇನೆ. ಇದಕ್ಕೆಲ್ಲಾ ಈ ನಮ್ಮ ಶಿಕ್ಷಕರಿಂದಲೇ ಎಂದು ಹೇಳಿದರು.

ಈ ವೇಳೆ ಕೆ ವೆಂಕಟರಮಣಪ್ಪ , ಕೆ ಎಸ್ ಮಂಜುನಾಥಚಾರಿ, ಕೆ ಚಿತ್ತಯ್ಯಾ, ರಮೇಶ ಎಂ, ಪ್ರಸ್ತುತ ಮುಖ್ಯೋಪಾಧ್ಯಾಯ ರಾಧಾಮಣಿ ಮತ್ತು ಇತರ ಶಿಕ್ಷಕರು, ಹಳೇ ವಿದ್ಯಾರ್ಥಿಗಳಾದ ನರಸಪ್ಪ ( ಉದ್ಯಮಿಗಳು ಸಿಂಚನ ಎಕ್ಸ್ಪೋರ್ಟ್ಸ್), ಉಮೇಶ, ಗಾಯಿತ್ರಮ್ಮ, ಸಿದ್ದರಾಜು, ಕೃಷ್ಣಪ್ಪ, ಚಿನ್ನಪ್ಪಯ್ಯಾ, ಗೋವಿಂದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

9 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

9 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

9 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

9 hours ago

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ – ಸಚಿವ ಚಲುವರಾಯಸ್ವಾಮಿ

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…

15 hours ago

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

17 hours ago