ಹಳೇ ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ: 30 ವರ್ಷಗಳ ಬಳಿಕ ಹಳೇ ವಿದ್ಯಾರ್ಥಿಗಳು ಒಂದೇ ಕಡೆ ಸೇರಿ ಕಾರ್ಯಕ್ರಮ ಆಯೋಜನೆ

ಹಳೇ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅರ್ಥಪೂರ್ಣವಾಗಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಸಲಾಯಿತು.

1994 -1995 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 30 ವರ್ಷಗಳ ಬಳಿಕ ತಾವು ಓದಿದ ಶಾಲೆಯಲ್ಲಿ ಸೇರಿ ತಮ್ಮ ಶಿಕ್ಷಕರಿಗೆ ಗೌರವವನ್ನ ಸಲ್ಲಿಸಿದ್ದಾರೆ.

ಗುರುಗಳನ್ನು ಬೆಳ್ಳಿ ರಥದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಕಾರ್ಯಕ್ರಮದಲ್ಲಿ ಗುರುಗಳಿಗೆ ಸಕಲ ಗೌರವಗಳನ್ನು ಸಲ್ಲಿಸುತ್ತ ಗುರುಗಳ ಪಾದಪೂಜೆ ಮಾಡಿ, ಶಿಕ್ಷಕರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆತರಲಾಯಿತು.

ಇನ್ನು ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹಳೇ ವಿದ್ಯಾರ್ಥಿಗಳು ಒಂದೇ ಕಡೆ  ಸೇರಿರುವದರಿಂದ ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ…

ಬಾಲ್ಯದಲ್ಲಿ ತುಂಟತನ, ಅಜ್ಞಾನ, ಅಶಿಸ್ತಿನಿಂದ ಇರುವ ಮಕ್ಕಳನ್ನು ಒಂದು ಹತೋಟಿಗೆ ತಂದು ವಿದ್ಯೆ ಕಲಿಸುವ ಎಲ್ಲ ಗುರುಗಳಿಗೂ ನಮನಗಳನ್ನು ಸಲ್ಲಿಸಿದರು.

ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ತೆರಳಿದ್ದಾರೆ. ಆದರೆ ಎಲ್ಲಾ ವಿದ್ಯಾರ್ಥಿಗಳು ಸುಸಂಸ್ಕೃತ ವಿದ್ಯಾರ್ಥಿಗಳಾಗಿರುವುದು ಶಿಕ್ಷಕರಾದ ನಮಗೆ ಹೆಮ್ಮೆ ವಿಷಯವಾಗಿದೆ. ಎಲ್ಲಿಯಾದರೂ ಸಿಕ್ಕಾಗ ನಮ್ಮ ಶಿಷ್ಯರ ಪಡೆ ಅಂತ ಹೆಮ್ಮೆಯಿಂದ ಹೇಳಬಹುದಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಇದೇ ಅವರು ಓದಿದ ಶಾಲೆಗೆ ನೀಡುವ ಗೌರವವಾಗಿದೆ ಎಂದು ಶಿಕ್ಷಕರು ಹೇಳಿದರು.

ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ವಿದ್ಯಾರ್ಥಿಗಳಲ್ಲಿ ಇದೆ. ಜೀವನದಲ್ಲಿ ಎಷ್ಟೇ ಮುಂದುವರಿದರೂ ಅದರ ಹಿಂದೆ ಗುರುವಿನ ಪಾತ್ರ ಇದ್ದೇ ಇರುತ್ತದೆ. ಗುರುಗಳಿಂದ ಬೆತ್ತದ ಏಟು ಬಿದ್ದಿದ್ದರಿಂದ ಇವತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪಗೊಂಡಿದ್ದೇವೆ. ಪಾಠ ಕಲಿಸಿ ಜೀವನದ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ನಂತರ ಹಳೇ ವಿದ್ಯಾರ್ಥಿ ನರಸಪ್ಪ ಮಾತನಾಡಿ, ನಾನು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವಾಗ ಕೂಲಿ ಕೆಲಸ ಮಾಡುತ್ತಿದ್ದೆ. ಗುರುಗಳ ಮಾರ್ಗದರ್ಶನದಿಂದ ಈಗ ಸಿಂಚನ ಎಕ್ಸ್ಪೋರ್ಟ್ ಎಂಬ 2 ಸ್ವಂತ ಕಂಪನಿ ಮಾಡಿ.. ಸುಮಾರು 500 ರಿಂದ 600 ಜನಕ್ಕೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿರುತ್ತೇನೆ. ಇದಕ್ಕೆಲ್ಲಾ ಈ ನಮ್ಮ ಶಿಕ್ಷಕರಿಂದಲೇ ಎಂದು ಹೇಳಿದರು.

ಈ ವೇಳೆ ಕೆ ವೆಂಕಟರಮಣಪ್ಪ , ಕೆ ಎಸ್ ಮಂಜುನಾಥಚಾರಿ, ಕೆ ಚಿತ್ತಯ್ಯಾ, ರಮೇಶ ಎಂ, ಪ್ರಸ್ತುತ ಮುಖ್ಯೋಪಾಧ್ಯಾಯ ರಾಧಾಮಣಿ ಮತ್ತು ಇತರ ಶಿಕ್ಷಕರು, ಹಳೇ ವಿದ್ಯಾರ್ಥಿಗಳಾದ ನರಸಪ್ಪ ( ಉದ್ಯಮಿಗಳು ಸಿಂಚನ ಎಕ್ಸ್ಪೋರ್ಟ್ಸ್), ಉಮೇಶ, ಗಾಯಿತ್ರಮ್ಮ, ಸಿದ್ದರಾಜು, ಕೃಷ್ಣಪ್ಪ, ಚಿನ್ನಪ್ಪಯ್ಯಾ, ಗೋವಿಂದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

14 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

16 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

16 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

16 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

18 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

21 hours ago