ಹಳೇ ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ: 30 ವರ್ಷಗಳ ಬಳಿಕ ಹಳೇ ವಿದ್ಯಾರ್ಥಿಗಳು ಒಂದೇ ಕಡೆ ಸೇರಿ ಕಾರ್ಯಕ್ರಮ ಆಯೋಜನೆ

ಹಳೇ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅರ್ಥಪೂರ್ಣವಾಗಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಸಲಾಯಿತು.

1994 -1995 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 30 ವರ್ಷಗಳ ಬಳಿಕ ತಾವು ಓದಿದ ಶಾಲೆಯಲ್ಲಿ ಸೇರಿ ತಮ್ಮ ಶಿಕ್ಷಕರಿಗೆ ಗೌರವವನ್ನ ಸಲ್ಲಿಸಿದ್ದಾರೆ.

ಗುರುಗಳನ್ನು ಬೆಳ್ಳಿ ರಥದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಕಾರ್ಯಕ್ರಮದಲ್ಲಿ ಗುರುಗಳಿಗೆ ಸಕಲ ಗೌರವಗಳನ್ನು ಸಲ್ಲಿಸುತ್ತ ಗುರುಗಳ ಪಾದಪೂಜೆ ಮಾಡಿ, ಶಿಕ್ಷಕರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆತರಲಾಯಿತು.

ಇನ್ನು ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹಳೇ ವಿದ್ಯಾರ್ಥಿಗಳು ಒಂದೇ ಕಡೆ  ಸೇರಿರುವದರಿಂದ ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ…

ಬಾಲ್ಯದಲ್ಲಿ ತುಂಟತನ, ಅಜ್ಞಾನ, ಅಶಿಸ್ತಿನಿಂದ ಇರುವ ಮಕ್ಕಳನ್ನು ಒಂದು ಹತೋಟಿಗೆ ತಂದು ವಿದ್ಯೆ ಕಲಿಸುವ ಎಲ್ಲ ಗುರುಗಳಿಗೂ ನಮನಗಳನ್ನು ಸಲ್ಲಿಸಿದರು.

ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ತೆರಳಿದ್ದಾರೆ. ಆದರೆ ಎಲ್ಲಾ ವಿದ್ಯಾರ್ಥಿಗಳು ಸುಸಂಸ್ಕೃತ ವಿದ್ಯಾರ್ಥಿಗಳಾಗಿರುವುದು ಶಿಕ್ಷಕರಾದ ನಮಗೆ ಹೆಮ್ಮೆ ವಿಷಯವಾಗಿದೆ. ಎಲ್ಲಿಯಾದರೂ ಸಿಕ್ಕಾಗ ನಮ್ಮ ಶಿಷ್ಯರ ಪಡೆ ಅಂತ ಹೆಮ್ಮೆಯಿಂದ ಹೇಳಬಹುದಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಇದೇ ಅವರು ಓದಿದ ಶಾಲೆಗೆ ನೀಡುವ ಗೌರವವಾಗಿದೆ ಎಂದು ಶಿಕ್ಷಕರು ಹೇಳಿದರು.

ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ವಿದ್ಯಾರ್ಥಿಗಳಲ್ಲಿ ಇದೆ. ಜೀವನದಲ್ಲಿ ಎಷ್ಟೇ ಮುಂದುವರಿದರೂ ಅದರ ಹಿಂದೆ ಗುರುವಿನ ಪಾತ್ರ ಇದ್ದೇ ಇರುತ್ತದೆ. ಗುರುಗಳಿಂದ ಬೆತ್ತದ ಏಟು ಬಿದ್ದಿದ್ದರಿಂದ ಇವತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪಗೊಂಡಿದ್ದೇವೆ. ಪಾಠ ಕಲಿಸಿ ಜೀವನದ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ನಂತರ ಹಳೇ ವಿದ್ಯಾರ್ಥಿ ನರಸಪ್ಪ ಮಾತನಾಡಿ, ನಾನು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವಾಗ ಕೂಲಿ ಕೆಲಸ ಮಾಡುತ್ತಿದ್ದೆ. ಗುರುಗಳ ಮಾರ್ಗದರ್ಶನದಿಂದ ಈಗ ಸಿಂಚನ ಎಕ್ಸ್ಪೋರ್ಟ್ ಎಂಬ 2 ಸ್ವಂತ ಕಂಪನಿ ಮಾಡಿ.. ಸುಮಾರು 500 ರಿಂದ 600 ಜನಕ್ಕೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿರುತ್ತೇನೆ. ಇದಕ್ಕೆಲ್ಲಾ ಈ ನಮ್ಮ ಶಿಕ್ಷಕರಿಂದಲೇ ಎಂದು ಹೇಳಿದರು.

ಈ ವೇಳೆ ಕೆ ವೆಂಕಟರಮಣಪ್ಪ , ಕೆ ಎಸ್ ಮಂಜುನಾಥಚಾರಿ, ಕೆ ಚಿತ್ತಯ್ಯಾ, ರಮೇಶ ಎಂ, ಪ್ರಸ್ತುತ ಮುಖ್ಯೋಪಾಧ್ಯಾಯ ರಾಧಾಮಣಿ ಮತ್ತು ಇತರ ಶಿಕ್ಷಕರು, ಹಳೇ ವಿದ್ಯಾರ್ಥಿಗಳಾದ ನರಸಪ್ಪ ( ಉದ್ಯಮಿಗಳು ಸಿಂಚನ ಎಕ್ಸ್ಪೋರ್ಟ್ಸ್), ಉಮೇಶ, ಗಾಯಿತ್ರಮ್ಮ, ಸಿದ್ದರಾಜು, ಕೃಷ್ಣಪ್ಪ, ಚಿನ್ನಪ್ಪಯ್ಯಾ, ಗೋವಿಂದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago