ಹಳ್ಳಿಗರೇ ನಿಮ್ಮ ಮನೆಯಲ್ಲಿ ನಾಟಿ ಕೋಳಿ ಸಾಕಿದ್ದೀರಾ ಹಾಗಾದರೆ ..ಎಚ್ಚರ..! ರಾತ್ರೋರಾತ್ರಿ ನಿಮ್ಮ ನಾಟಿ ಕೋಳಿಗೆ ಮಸಾಲೆ ಹಾಕ್ತಾರೆ ಖದೀಮರು….. ಹಣ, ಚಿನ್ನ, ಬೆಳ್ಳಿ ಅಯ್ತು ಈಗ ನಾಟಿ ಕೋಳಿಗಳೇ ಕಳ್ಳರ ಟಾರ್ಗೆಟ್ ಆಗಿದೆ.
ನಾಟಿ ಕೋಳಿ ಕಳ್ಳರು ಚಿಕ್ಕಬಳ್ಳಾಪುರದಲ್ಲಿ ಬೀಡು ಬಿಟ್ಟಿದ್ದಾರೆ. ಸುಮಾರು ಮೂರು ತಿಂಗಳಿಂದ ಕೋಳಿ ಕಳ್ಳರ ಕಾಟ ಹೆಚ್ಚಾಗಿದೆ. ರಾತ್ರಿ ವೇಳೆ ನಾಟಿ ಕೋಳಿ ಕಳ್ಳರ ಕಾಟಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ.
ಕೋಳಿ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೋಳಿ ಕಳ್ಳರ ಕಾಟ ತಾಳಲಾರದೆ ಸಾರ್ವಜನಿಕರು ಪೊಲೀಸರ ಮೊರೆ ಹೋಗಿದ್ದಾರೆ.
ಚಿಂತಾಮಣಿ ತಾಲ್ಲೂಕಿನಲ್ಲಿ ಸುಮಾರು ಹತ್ತು ಹಳ್ಳಿಗಳಲ್ಲಿ ಕೋಳಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ನಾಟಿ ಕೋಳಿಗಳು ಮಂಗಮಾಯವಾಗುತ್ತಿವೆ. ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ರಾಸ್, ಮಸ್ತೇನಹಳ್ಳಿ , ಕೊಂಗನಳ್ಳಿ, ಉಲಪನಹಳ್ಳಿ ಕತ್ತರಿಗುಪ್ಪಿಯಲ್ಲಿ ಕೋಳಿ ಕಳ್ಳತನವಾಗುತ್ತಿವೆ.
ಶಿಡ್ಲಘಟ್ಟ ತಾಲ್ಲೂಕಿನ ಚಿಂತೊಡಪಿ, ಕುಂದ್ಲಗುರ್ಕಿ ಸೇರಿದಂತೆ ಹತ್ತು ಗ್ರಾಮಗಳಲ್ಲಿ ಕೋಳಿ ಕಳ್ಳತನ ಮಾಡಲಾಗಿದೆ.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…