Categories: ಕೋಲಾರ

ಹಳ್ಳಿಗಳಲ್ಲಿ ಅಕ್ರಮ ಮಧ್ಯ ಮಾರಾಟ ಕ್ರಮಕ್ಕೆ ಒತ್ತಾಯಿಸಿ ರೈತ ಸಂಘದಿಂದ ಅ.28 ಅಬಕಾರಿ ಕಚೇರಿಗೆ ಮುತ್ತಿಗೆ

ಕೋಲಾರ: ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆಯಿಂದ ಪರವಾನಿಗೆ ಪಡೆಯದೇ ಗ್ರಾಮೀಣ ಪ್ರದೇಶದ ಪೆಟ್ಟಿಗೆ ಅಂಗಡಿ, ಟಿ ಸ್ಟಾಲ್, ಚಿಲ್ಲರೆ ಅಂಗಡಿ ಮನೆಗಳಲ್ಲೂ ಹಾಗೂ ರಾಷ್ಟ್ರೀಯ ಹೆದ್ದಾರಿಯ ಡಾಬಾಗಳಲ್ಲಿ ರಾಜಾರೋಷವಾಗಿ ಮಧ್ಯೆ ಮಾರಾಟವನ್ನು ಯಾವ ಅಧಿಕಾರಿಗಳ ಭಯವಿಲ್ಲದೆ, ನಡೆಯುತ್ತಿದೆ ಇದನ್ನು ಹತೋಟಿಗೆ ತರಬೇಕಾದ ಅಬಕಾರಿ ಇಲಾಖೆ ಕಣ್ಣುಮುಚ್ಚಿ ಕುಳಿತಿರುವ ಅಧಿಕಾರಿಗಳ ಕ್ರಮ ಖಂಡಿಸಿ ರೈತ ಸಂಘದಿಂದ ಅ.28ರ ಸೋಮವಾರದಂದು ಅಬಕಾರಿ ಇಲಾಖೆಗೆ ಮುತ್ತಿಗೆ ಹಾಕಲು ರೋಜೋರಹಳ್ಳಿ ಗೇಟ್‌ನಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ಸಭೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತಿನ್ನುವ ಅನ್ನಕ್ಕೆ ಬರವಿದ್ದರೂ ಹಳ್ಳಿ ಹಳ್ಳಿಯ ಬೀದಿಗಳಲ್ಲಿ ಮಧ್ಯ ಮಾರಾಟವು ನಡೆಯುತ್ತಿದೆ ಗ್ರಾಮೀಣ ಪ್ರದೇಶದ ಜನ ಅಧಿಕಾರಿಗಳಿಗೆ ಇಡೀ ಶಾಪ ಹಾಕುತ್ತಿದ್ದಾರೆ ಇದನ್ನು ತಡೆಯಬೇಕಾದ ಅಧಿಕಾರಿಗಳೇ ತಿಂಗಳ ಮಾಮೂಲಿಗೆ ಇಳಿದಿದ್ದಾರೆ ಎಂದು ಆರೋಪಿಸಿದರು.

ಅಬಕಾರಿ ಅಧಿಕಾರಿಗಳಿಗೆ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಾಹಿತಿ ನೀಡಿದರೆ ಇಲಾಖೆಯಿಂದ ಮದ್ಯ ಮಾರಾಟಗಾರರಿಗೆ ನಿಯತ್ತಾಗಿ ಮಾಹಿತಿ ಕೊಟ್ಟು ಅವರು ಕೊಡುವ ಕಾಸಿಗೆ ಬಡವರ ಬದುಕಿನ ಜೊತೆ ಚೆಲ್ಲಾಟವಾಡಿದ್ದಾರೆ ರಾಜಾರೋಷವಾಗಿ ಆ ಆದೇಶಕ್ಕೆ ಅಧಿಕಾರಿಗಳು ಕವಡೆ ಕಾಸಿನ ಬೆಲೆ ನೀಡದೆ ಲಂಚಕ್ಕೆ ಅಬಕಾರಿ ಇಲಾಖೆಯನ್ನು ಅಡ ಇಟ್ಟಿರುವುದು ಸತ್ಯಕ್ಕೆ ದೂರವಾದ ವಿಷಯವಲ್ಲ ಬರಗಾಲಕ್ಕೆ ತುತ್ತಾಗಿದ್ದರೂ ಕುಡಿಯುವ ನೀರಿಗೆ ಬರವಿದ್ದರೂ ಆದರೆ ಸಾರಾಯಿ ಮಾತ್ರ ಪ್ರತಿ ಹಳ್ಳಿಯ ಗಲ್ಲಿಗಲ್ಲಿಯಲ್ಲೂ ೩-೪ ಕಡೆ ದೊರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ಅಕ್ರಮ ಮಧ್ಯೆ ಎಲ್ಲಿ ಬೇಕಾದರೂ ಮಾರಾಟ ಮಾಡುವ ಪರಿಸ್ಥಿತಿ ಉಂಟಾಗಿದೆ. ಹತೋಟಿಗೆ ತರಬೇಕಾದ ಅಧಿಕಾರಿ ವರ್ಗ ನಾಪತ್ತೆಯಾಗಿದ್ದಾರೆ ಎಂದರು.

ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ ನಗರಗಳಲ್ಲಿ ಬೆಳಿಗ್ಗೆ ೬ ಗಂಟೆಗೆ ಟೀ ಕಾಫಿ ಅಂಗಡಿಗಳು ತೆರದಂತೆ ಬಾರ್‌ಗಳನ್ನು ತೆಗೆದು ಕಾನೂನು ಎನ್ನುವುದನ್ನು ಬಾರ್ ಮಾಲೀಕರು ಕಾಲ ಕಸ ಮಾಡಿಕೊಂಡು ಮೆರೆಯುತ್ತಿದ್ದಾರೆ. ಈ ಅಕ್ರಮ ಮಧ್ಯೆದ ಅಂಗಡಿಗಳಿಂದ ಹಳ್ಳಿಗಳಲ್ಲಿ ಮತ್ತು ಡಾಬಾಗಳಲ್ಲಿ ಪ್ರತಿನಿತ್ಯ ಗಲಾಟಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಾಗಿ ಸಾವುಗಳು ಸಂಭವಿಸುವುದು ಆಧಿಕಾರಿಗಳಿಗೆ ಗೊತ್ತಿದ್ದರೂ ಸುಮ್ಮನೆ ಇದ್ದಾರೆ ಕೂಡಲೇ ಕಟ್ಟುನಿಟ್ಟಾಗಿ ಕ್ರಮ ಕೈಗೊಂಡು ಹಳ್ಳಿ ಜನರ ಹಿತಾಸಕ್ತಿ ಹಾಗೂ ಆರೋಗ್ಯ ಕಾಪಾಡಲು ಹಳ್ಳಿಗಳಲ್ಲಿ ಜನ ನೆಮ್ಮದಿಯಿಂದ ಇರಲು ಈ ದಿನಸಿ ಅಂಗಡಿಗಳ ಹಾಗೂ ಹೆದ್ದಾರಿ ಡಾಬಾಗಳ ಮಧ್ಯೆ ಮಾರಾಟಕ್ಕೆ ಕೂಡಲೇ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಈ ಸಭೆಯಲ್ಲಿ ರೈತ ಸಂಘದ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ‍್ನಹಳ್ಳಿ ಆಂಜಿನಪ್ಪ, ಬಂಗವಾದಿ ನಾಗರಾಜ್‌ಗೌಡ, ಅಲವಟಿ ಶಿವು, ರಾಜೇಂದ್ರ ರೆಡ್ಡಿ, ಶೈಲಜ, ರಾಧಮ್ಮ, ರೋಜ, ಶಾಂತಮ್ಮ, ರತ್ನಮ್ಮ, ಶೋಭ, ಮುಂತಾದವರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

7 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

15 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago