Categories: ಕೋಲಾರ

ಹಳ್ಳಿಗಳಲ್ಲಿ ಅಕ್ರಮ ಮಧ್ಯ ಮಾರಾಟ ಕ್ರಮಕ್ಕೆ ಒತ್ತಾಯಿಸಿ ರೈತ ಸಂಘದಿಂದ ಅ.28 ಅಬಕಾರಿ ಕಚೇರಿಗೆ ಮುತ್ತಿಗೆ

ಕೋಲಾರ: ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆಯಿಂದ ಪರವಾನಿಗೆ ಪಡೆಯದೇ ಗ್ರಾಮೀಣ ಪ್ರದೇಶದ ಪೆಟ್ಟಿಗೆ ಅಂಗಡಿ, ಟಿ ಸ್ಟಾಲ್, ಚಿಲ್ಲರೆ ಅಂಗಡಿ ಮನೆಗಳಲ್ಲೂ ಹಾಗೂ ರಾಷ್ಟ್ರೀಯ ಹೆದ್ದಾರಿಯ ಡಾಬಾಗಳಲ್ಲಿ ರಾಜಾರೋಷವಾಗಿ ಮಧ್ಯೆ ಮಾರಾಟವನ್ನು ಯಾವ ಅಧಿಕಾರಿಗಳ ಭಯವಿಲ್ಲದೆ, ನಡೆಯುತ್ತಿದೆ ಇದನ್ನು ಹತೋಟಿಗೆ ತರಬೇಕಾದ ಅಬಕಾರಿ ಇಲಾಖೆ ಕಣ್ಣುಮುಚ್ಚಿ ಕುಳಿತಿರುವ ಅಧಿಕಾರಿಗಳ ಕ್ರಮ ಖಂಡಿಸಿ ರೈತ ಸಂಘದಿಂದ ಅ.28ರ ಸೋಮವಾರದಂದು ಅಬಕಾರಿ ಇಲಾಖೆಗೆ ಮುತ್ತಿಗೆ ಹಾಕಲು ರೋಜೋರಹಳ್ಳಿ ಗೇಟ್‌ನಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ಸಭೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತಿನ್ನುವ ಅನ್ನಕ್ಕೆ ಬರವಿದ್ದರೂ ಹಳ್ಳಿ ಹಳ್ಳಿಯ ಬೀದಿಗಳಲ್ಲಿ ಮಧ್ಯ ಮಾರಾಟವು ನಡೆಯುತ್ತಿದೆ ಗ್ರಾಮೀಣ ಪ್ರದೇಶದ ಜನ ಅಧಿಕಾರಿಗಳಿಗೆ ಇಡೀ ಶಾಪ ಹಾಕುತ್ತಿದ್ದಾರೆ ಇದನ್ನು ತಡೆಯಬೇಕಾದ ಅಧಿಕಾರಿಗಳೇ ತಿಂಗಳ ಮಾಮೂಲಿಗೆ ಇಳಿದಿದ್ದಾರೆ ಎಂದು ಆರೋಪಿಸಿದರು.

ಅಬಕಾರಿ ಅಧಿಕಾರಿಗಳಿಗೆ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಾಹಿತಿ ನೀಡಿದರೆ ಇಲಾಖೆಯಿಂದ ಮದ್ಯ ಮಾರಾಟಗಾರರಿಗೆ ನಿಯತ್ತಾಗಿ ಮಾಹಿತಿ ಕೊಟ್ಟು ಅವರು ಕೊಡುವ ಕಾಸಿಗೆ ಬಡವರ ಬದುಕಿನ ಜೊತೆ ಚೆಲ್ಲಾಟವಾಡಿದ್ದಾರೆ ರಾಜಾರೋಷವಾಗಿ ಆ ಆದೇಶಕ್ಕೆ ಅಧಿಕಾರಿಗಳು ಕವಡೆ ಕಾಸಿನ ಬೆಲೆ ನೀಡದೆ ಲಂಚಕ್ಕೆ ಅಬಕಾರಿ ಇಲಾಖೆಯನ್ನು ಅಡ ಇಟ್ಟಿರುವುದು ಸತ್ಯಕ್ಕೆ ದೂರವಾದ ವಿಷಯವಲ್ಲ ಬರಗಾಲಕ್ಕೆ ತುತ್ತಾಗಿದ್ದರೂ ಕುಡಿಯುವ ನೀರಿಗೆ ಬರವಿದ್ದರೂ ಆದರೆ ಸಾರಾಯಿ ಮಾತ್ರ ಪ್ರತಿ ಹಳ್ಳಿಯ ಗಲ್ಲಿಗಲ್ಲಿಯಲ್ಲೂ ೩-೪ ಕಡೆ ದೊರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ಅಕ್ರಮ ಮಧ್ಯೆ ಎಲ್ಲಿ ಬೇಕಾದರೂ ಮಾರಾಟ ಮಾಡುವ ಪರಿಸ್ಥಿತಿ ಉಂಟಾಗಿದೆ. ಹತೋಟಿಗೆ ತರಬೇಕಾದ ಅಧಿಕಾರಿ ವರ್ಗ ನಾಪತ್ತೆಯಾಗಿದ್ದಾರೆ ಎಂದರು.

ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ ನಗರಗಳಲ್ಲಿ ಬೆಳಿಗ್ಗೆ ೬ ಗಂಟೆಗೆ ಟೀ ಕಾಫಿ ಅಂಗಡಿಗಳು ತೆರದಂತೆ ಬಾರ್‌ಗಳನ್ನು ತೆಗೆದು ಕಾನೂನು ಎನ್ನುವುದನ್ನು ಬಾರ್ ಮಾಲೀಕರು ಕಾಲ ಕಸ ಮಾಡಿಕೊಂಡು ಮೆರೆಯುತ್ತಿದ್ದಾರೆ. ಈ ಅಕ್ರಮ ಮಧ್ಯೆದ ಅಂಗಡಿಗಳಿಂದ ಹಳ್ಳಿಗಳಲ್ಲಿ ಮತ್ತು ಡಾಬಾಗಳಲ್ಲಿ ಪ್ರತಿನಿತ್ಯ ಗಲಾಟಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಾಗಿ ಸಾವುಗಳು ಸಂಭವಿಸುವುದು ಆಧಿಕಾರಿಗಳಿಗೆ ಗೊತ್ತಿದ್ದರೂ ಸುಮ್ಮನೆ ಇದ್ದಾರೆ ಕೂಡಲೇ ಕಟ್ಟುನಿಟ್ಟಾಗಿ ಕ್ರಮ ಕೈಗೊಂಡು ಹಳ್ಳಿ ಜನರ ಹಿತಾಸಕ್ತಿ ಹಾಗೂ ಆರೋಗ್ಯ ಕಾಪಾಡಲು ಹಳ್ಳಿಗಳಲ್ಲಿ ಜನ ನೆಮ್ಮದಿಯಿಂದ ಇರಲು ಈ ದಿನಸಿ ಅಂಗಡಿಗಳ ಹಾಗೂ ಹೆದ್ದಾರಿ ಡಾಬಾಗಳ ಮಧ್ಯೆ ಮಾರಾಟಕ್ಕೆ ಕೂಡಲೇ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಈ ಸಭೆಯಲ್ಲಿ ರೈತ ಸಂಘದ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ‍್ನಹಳ್ಳಿ ಆಂಜಿನಪ್ಪ, ಬಂಗವಾದಿ ನಾಗರಾಜ್‌ಗೌಡ, ಅಲವಟಿ ಶಿವು, ರಾಜೇಂದ್ರ ರೆಡ್ಡಿ, ಶೈಲಜ, ರಾಧಮ್ಮ, ರೋಜ, ಶಾಂತಮ್ಮ, ರತ್ನಮ್ಮ, ಶೋಭ, ಮುಂತಾದವರಿದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

10 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

12 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

12 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

12 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

14 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

18 hours ago