Categories: ಕೋಲಾರ

ಹಳ್ಳಿಗಳಲ್ಲಿ ಅಕ್ರಮ ಮಧ್ಯ ಮಾರಾಟ ಕ್ರಮಕ್ಕೆ ಒತ್ತಾಯಿಸಿ ರೈತ ಸಂಘದಿಂದ ಅ.28 ಅಬಕಾರಿ ಕಚೇರಿಗೆ ಮುತ್ತಿಗೆ

ಕೋಲಾರ: ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆಯಿಂದ ಪರವಾನಿಗೆ ಪಡೆಯದೇ ಗ್ರಾಮೀಣ ಪ್ರದೇಶದ ಪೆಟ್ಟಿಗೆ ಅಂಗಡಿ, ಟಿ ಸ್ಟಾಲ್, ಚಿಲ್ಲರೆ ಅಂಗಡಿ ಮನೆಗಳಲ್ಲೂ ಹಾಗೂ ರಾಷ್ಟ್ರೀಯ ಹೆದ್ದಾರಿಯ ಡಾಬಾಗಳಲ್ಲಿ ರಾಜಾರೋಷವಾಗಿ ಮಧ್ಯೆ ಮಾರಾಟವನ್ನು ಯಾವ ಅಧಿಕಾರಿಗಳ ಭಯವಿಲ್ಲದೆ, ನಡೆಯುತ್ತಿದೆ ಇದನ್ನು ಹತೋಟಿಗೆ ತರಬೇಕಾದ ಅಬಕಾರಿ ಇಲಾಖೆ ಕಣ್ಣುಮುಚ್ಚಿ ಕುಳಿತಿರುವ ಅಧಿಕಾರಿಗಳ ಕ್ರಮ ಖಂಡಿಸಿ ರೈತ ಸಂಘದಿಂದ ಅ.28ರ ಸೋಮವಾರದಂದು ಅಬಕಾರಿ ಇಲಾಖೆಗೆ ಮುತ್ತಿಗೆ ಹಾಕಲು ರೋಜೋರಹಳ್ಳಿ ಗೇಟ್‌ನಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ಸಭೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತಿನ್ನುವ ಅನ್ನಕ್ಕೆ ಬರವಿದ್ದರೂ ಹಳ್ಳಿ ಹಳ್ಳಿಯ ಬೀದಿಗಳಲ್ಲಿ ಮಧ್ಯ ಮಾರಾಟವು ನಡೆಯುತ್ತಿದೆ ಗ್ರಾಮೀಣ ಪ್ರದೇಶದ ಜನ ಅಧಿಕಾರಿಗಳಿಗೆ ಇಡೀ ಶಾಪ ಹಾಕುತ್ತಿದ್ದಾರೆ ಇದನ್ನು ತಡೆಯಬೇಕಾದ ಅಧಿಕಾರಿಗಳೇ ತಿಂಗಳ ಮಾಮೂಲಿಗೆ ಇಳಿದಿದ್ದಾರೆ ಎಂದು ಆರೋಪಿಸಿದರು.

ಅಬಕಾರಿ ಅಧಿಕಾರಿಗಳಿಗೆ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಾಹಿತಿ ನೀಡಿದರೆ ಇಲಾಖೆಯಿಂದ ಮದ್ಯ ಮಾರಾಟಗಾರರಿಗೆ ನಿಯತ್ತಾಗಿ ಮಾಹಿತಿ ಕೊಟ್ಟು ಅವರು ಕೊಡುವ ಕಾಸಿಗೆ ಬಡವರ ಬದುಕಿನ ಜೊತೆ ಚೆಲ್ಲಾಟವಾಡಿದ್ದಾರೆ ರಾಜಾರೋಷವಾಗಿ ಆ ಆದೇಶಕ್ಕೆ ಅಧಿಕಾರಿಗಳು ಕವಡೆ ಕಾಸಿನ ಬೆಲೆ ನೀಡದೆ ಲಂಚಕ್ಕೆ ಅಬಕಾರಿ ಇಲಾಖೆಯನ್ನು ಅಡ ಇಟ್ಟಿರುವುದು ಸತ್ಯಕ್ಕೆ ದೂರವಾದ ವಿಷಯವಲ್ಲ ಬರಗಾಲಕ್ಕೆ ತುತ್ತಾಗಿದ್ದರೂ ಕುಡಿಯುವ ನೀರಿಗೆ ಬರವಿದ್ದರೂ ಆದರೆ ಸಾರಾಯಿ ಮಾತ್ರ ಪ್ರತಿ ಹಳ್ಳಿಯ ಗಲ್ಲಿಗಲ್ಲಿಯಲ್ಲೂ ೩-೪ ಕಡೆ ದೊರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ಅಕ್ರಮ ಮಧ್ಯೆ ಎಲ್ಲಿ ಬೇಕಾದರೂ ಮಾರಾಟ ಮಾಡುವ ಪರಿಸ್ಥಿತಿ ಉಂಟಾಗಿದೆ. ಹತೋಟಿಗೆ ತರಬೇಕಾದ ಅಧಿಕಾರಿ ವರ್ಗ ನಾಪತ್ತೆಯಾಗಿದ್ದಾರೆ ಎಂದರು.

ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ ನಗರಗಳಲ್ಲಿ ಬೆಳಿಗ್ಗೆ ೬ ಗಂಟೆಗೆ ಟೀ ಕಾಫಿ ಅಂಗಡಿಗಳು ತೆರದಂತೆ ಬಾರ್‌ಗಳನ್ನು ತೆಗೆದು ಕಾನೂನು ಎನ್ನುವುದನ್ನು ಬಾರ್ ಮಾಲೀಕರು ಕಾಲ ಕಸ ಮಾಡಿಕೊಂಡು ಮೆರೆಯುತ್ತಿದ್ದಾರೆ. ಈ ಅಕ್ರಮ ಮಧ್ಯೆದ ಅಂಗಡಿಗಳಿಂದ ಹಳ್ಳಿಗಳಲ್ಲಿ ಮತ್ತು ಡಾಬಾಗಳಲ್ಲಿ ಪ್ರತಿನಿತ್ಯ ಗಲಾಟಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಾಗಿ ಸಾವುಗಳು ಸಂಭವಿಸುವುದು ಆಧಿಕಾರಿಗಳಿಗೆ ಗೊತ್ತಿದ್ದರೂ ಸುಮ್ಮನೆ ಇದ್ದಾರೆ ಕೂಡಲೇ ಕಟ್ಟುನಿಟ್ಟಾಗಿ ಕ್ರಮ ಕೈಗೊಂಡು ಹಳ್ಳಿ ಜನರ ಹಿತಾಸಕ್ತಿ ಹಾಗೂ ಆರೋಗ್ಯ ಕಾಪಾಡಲು ಹಳ್ಳಿಗಳಲ್ಲಿ ಜನ ನೆಮ್ಮದಿಯಿಂದ ಇರಲು ಈ ದಿನಸಿ ಅಂಗಡಿಗಳ ಹಾಗೂ ಹೆದ್ದಾರಿ ಡಾಬಾಗಳ ಮಧ್ಯೆ ಮಾರಾಟಕ್ಕೆ ಕೂಡಲೇ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಈ ಸಭೆಯಲ್ಲಿ ರೈತ ಸಂಘದ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ‍್ನಹಳ್ಳಿ ಆಂಜಿನಪ್ಪ, ಬಂಗವಾದಿ ನಾಗರಾಜ್‌ಗೌಡ, ಅಲವಟಿ ಶಿವು, ರಾಜೇಂದ್ರ ರೆಡ್ಡಿ, ಶೈಲಜ, ರಾಧಮ್ಮ, ರೋಜ, ಶಾಂತಮ್ಮ, ರತ್ನಮ್ಮ, ಶೋಭ, ಮುಂತಾದವರಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

58 minutes ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

11 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

13 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

18 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

19 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

22 hours ago