ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ. ಗ್ರಾ. ಜಿಲ್ಲೆಗೆ 4ನೇ ಸ್ಥಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಜಿಲ್ಲೆಯು ಮಾನವ ದಿನಗಳ ಸೃಜನೆಯಲ್ಲಿ ಗುರಿ ಮೀರಿ ಸಾಧನೆಮಾಡಿದ್ದು, ನರೇಗಾ ಯೋಜನೆಯಡಿ 4ನೇ ಸ್ಥಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪಡೆದುಕೊಂಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಡಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಕಳೆದ 2023-24ನೇ ಸಾಲಿನಲ್ಲಿ 14ನೇ ಸ್ಥಾನದಲ್ಲಿತ್ತು. ಆರ್ಥಿಕ ವರ್ಷ 2024-25ನೇ ಸಾಲಿನಲ್ಲಿ 14 ಲಕ್ಷ ಗುರಿಗೆ 16,310 ಲಕ್ಷ ಮಾನವ ದಿನಗಳ ಸೃಜನೆ ಮಾಡಿ ಶೇ 116.50% ಪ್ರಗತಿಯನ್ನು ಸಾಧಿಸಿದೆ. ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಆಸ್ತಿಗಳ ಸೃಜನೆ ಮಾಡುವ ಮೂಲಕ ಗ್ರಾಮೀಣ ಜನರ ಸಬಲೀಕರಣಕ್ಕೆ ಹೆಚ್ಚಿನ ಅದ್ಯತೆಯನ್ನು ನೀಡಿ, ಗುರಿಯನ್ನು ಮಿರಿ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4ನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್‌ಅನುರಾಧ ಹೇಳಿದ್ದಾರೆ.

ಈ ಯೋಜನೆಯಲ್ಲಿ ಜಿಲ್ಲೆಯಲ್ಲಿ ಮಾನವ ದಿನಗಳ ಸೃಜನೆಯಲ್ಲಿ ತಾಲ್ಲೂಕುವಾರು ಪ್ರಗತಿಯನ್ನು ಸಾಧಿಸಿದೆ, ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ ತಾಲ್ಲೂಕು ಶೇ 104.19%, ಹೊಸಕೋಟೆ ತಾಲ್ಲೂಕು 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% ಪ್ರಗತಿಯನ್ನು ಸಾಧಿಸಿದೆ. ಸದರಿ ಯೋಜನೆಯಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ಒಟ್ಟು 1,19,669 ಉದ್ಯೋಗ ಚೀಟಿಯನ್ನು ಹೊಂದಿರುವ ನೋಂದಾಯಿತ ಕುಟುಂಬಗಳಿದ್ದು, ಅದರಲ್ಲಿ 2,61,128 ಜನರು ಕೂಲಿಕಾರರಿದ್ದು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಯೋಜನೆಯಲ್ಲಿ ಉದ್ಯೋಗ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ವಾರ್ಷಿಕವಾಗಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಅರ್ಥಿಕವಾಗಿ ಸಬಲರಾಗಲು ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ರೇಷ್ಮೆ, ಸಾಮಾಜಿಕ ಅರಣ್ಯ ಇಲಾಖೆ, ಪಂಚಾಯತ್‌ ರಾಜ್‌ ಇಂಜನಿಯರಿಂಗ್‌ (ಪಿಆರ್‌ಇಡಿ) ಇಲಾಖೆಗಳು ಮಹತ್ವದ ಪಾತ್ರವನ್ನು ವಹಿಸಿವೆ, ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ಸಮುದಾಯ ಚಟುವಟಿಕೆಗಳು ಸಮಗ್ರವಾಗಿ ಶಾಲಾಭಿವೃದ್ಧಿ, ಸ್ಮಶಾನ, ಚರಂಡಿ, ಬೂದು ನೀರು ನಿರ್ವಹಣೆ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ, ಸಂಜೀವಿನಿ ಭವನ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM)ಗಳ ಅಭಿವೃದ್ದಿ ಸಹಕಾರಿಯಾಗಿದೆ. ಹಾಗೇ ವೈಯಕ್ತಿಕ ಕಾಮಗಾರಿಗಳಾದ ಹಸುಶೆಡ್‌, ಕುರಿಶೆಡ್‌, ಹಂದಿಶೆಡ್‌, ಕೋಳಿಶೆಡ್‌, ವಸತಿ ಯೋಜನೆಯ ಫಲಾನುಭವಿಗಳು, ವಿಶೇಷ ಚೇತನರು, ಹಿರಿಯ ನಾಗರಿಕರು ಮತ್ತು ಗರ್ಭಿಣಿ ಸ್ತ್ರೀಯರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಸ್ವಚ್ಚ ಭಾರತ್‌ ಮಿಷನ್‌ ಮತ್ತು ಬೂದು ನೀರು ನಿರ್ವಹಣೆ ಗ್ರಾಮೀಣ ಯೋಜನೆ ಅಧೀನದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂಲಕ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ. ಇದರ ಹೊರತಾಗಿ ನರೇಗಾ ಮೂಲಕವೂ ವಿಶೇಷ ಯೋಜನೆ ರೂಪಿಸಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ.

ಮಹಿಳಾ ಸಬೀಕರಣಕ್ಕೆ ಸಹಕಾರಿಯಾದ ನರೇಗಾ ಯೋಜನೆಯಡಿ ಮಹಿಳೆಯರು ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ, ಅರ್ಥಿಕ ವರ್ಷ 2024-25ನೇ ಸಾಲಿನಲ್ಲಿ ಶೇ 51.97% ಪ್ರಗತಿಯನ್ನು ಸಾಧಿಸಲಾಗಿರುತ್ತದೆ. ಮುಖ್ಯವಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ.

*ಸ್ತ್ರೀ ಚೇತನ, ದುಡಿಯೋಣ ಬಾ ಅಭಿಯಾನ*

ಮಹಿಳೆಯರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವುದಕ್ಕೆ ಏಪ್ರಿಲ್‌ 1ರಿಂದ ಜೂನ್‌ 30 ರವರೆಗೆ ಮೂರು ತಿಂಗಳ ಕಾಲ ಅಭಿಯಾನವನ್ನು ಹಮ್ಮಿಕೊಂದಿದೆ. ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸ್ತ್ರೀಚೇತನ ಮತ್ತು ದುಡಿಯೋಣ ಬಾ ಅಭಿಯಾನ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಶೇ60% ಗುರಿ ಸಾಧಿಸಲು, ಕರಪತ್ರ ವಿತರಣೆ, ಮನೆ ಮನೆಗೆ ಭೇಟಿ, ಆಟೋ ಮೂಲಕ ಪ್ರಚಾರ ಮಾಡುವುದು, ವಾರ್ಡ್‌ಗಳಲ್ಲಿ ಸಭೆ ಮಾಡುವುದು, ಗ್ರಾಮಗಳಲ್ಲಿನ ಸಭೆ ಮೂಲಕ ಇನ್ನೂ ಹೆಚ್ಚಿನ ಪ್ರಚಾರ ಮಾಡಲು ಯೋಜನೆ ರೂಪಿಸಿ 101 ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಆರ್ಥಿಕ ವರ್ಷ 2025-26 ನೇ ಸಾಲಿನಲ್ಲಿ 15ಲಕ್ಷ ಮಾನವ ದಿನಗಳ ಸೃಜನೆಯ ಗುರಿಯನ್ನು ಹೊಂದಲಾಗಿದ್ದು. ಗ್ರಾಮ ಪಂಚಾಯಿತಿಗಳಿಂದ ಬಂದಂತಹ ಯೋಜನೆಗಳಿಗೆ ರಾಜ್ಯದಿಂದ ಅನುಮೊದನೆಯನ್ನು ಪಡೆದುಕೊಂಡು ಕಾಮಗಾರಿಗಳಿಗೆ ನಿಯಮಾನುಸಾರ ಚಾಲನೆ ನೀಡಲಾಗಿರುತ್ತದೆ. ನೈಸರ್ಗಿಕ ಸಂಪನ್ಮೂಲಗಳಾದ ಜಲ ಸಂರಕ್ಷಣೆ, ಅರಣ್ಯೀಕರಣ, ಗ್ರಾಮಗಳ ಸ್ವಚ್ಚತೆ ಮತ್ತು ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು  ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್‌ ಹೇಳಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago