ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.
ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ್ಯಾಂಪ್ವಾಕ್ ಮುದ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.
ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.
ಶಾಲೆಯ ಪ್ರಾಂಶುಪಾಲರಾದ ರಶ್ಮಿ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…