ಹಳ್ಳಿಯ ಸೊಗಡನ್ನು ನವಪೀಳಿಗೆಗೆ ಪರಿಚಯಿಸಿದ ನ್ಯಾಷನಲ್ ಪ್ರೈಡ್ ಶಾಲೆ

ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.

ಹೌದು, ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಆಯೋಜಿಸಿದ್ದ ಫಾರ್ಮ್ ಪಾರ್ಟಿ ಮಕ್ಕಳಿಗೆ ವಿನೂತನ ಅನುಭೂತಿ‌ ನೀಡಿತು.

ಹಸು, ಮೇಕೆ, ಕುರಿ, ಕೋಳಿ, ಕತ್ತೆ, ಕುದುರೆ, ಮೊಲ, ಟರ್ಕಿ‌ ಕೋಳಿ, ಹಂದಿ ಹಾಗೂ ವಿವಿಧ ತಳಿಯ ಶ್ವಾನಗಳನ್ನು ಪ್ರದರ್ಶಿಸಿ, ಪರಿಚಯಿಸಲಾಯಿತು. ಪುಟಾಣಿ ಮಕ್ಕಳು ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ತುಂಟ ನಗೆಯೊಂದಿಗೆ ಅವುಗಳ ಜೊತೆ ಪೋಟೋಗೆ ಪೋಸ್ ನೀಡಿದರು. ಮಕ್ಕಳು ಕುದುರೆ ಸವಾರಿ ಮಾಡಿ ಮೋಜು ಅನುಭವಿಸಿದರು. ಇದಲ್ಲದೇ ರೇಷ್ಮೆ ಹುಳುವಿನ ಜೀವನ ಚಕ್ರದ ವಿವಿಧ ಮಜಲುಗಳನ್ನು ನೇರವಾಗಿ ತೋರಿಸಲಾಯಿತು.

ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ‌್ಯಾಂಪ್‌ವಾಕ್ ಮುದ‌ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.

ಶಾಲೆಯ ಕಾರ್ಯದರ್ಶಿ ಸತೀಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ವರ್ಷವೂ ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿನೂತನ, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಇದೇ ಮೊದಲಿಗೆ ಮಕ್ಕಳಿಗೆ ಮನರಂಜನೆ ಜೊತೆಗೆ ವಿವಿಧ ಸಾಕುಪ್ರಾಣಿಗಳನ್ನು ನೇರವಾಗಿ ನೋಡಿ ಆನಂದಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್  ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.

ಶಾಲೆಯನ್ನು ಸುಸಜ್ಜಿತವಾಗಿ ನವೀಕರಿಸಿದ್ದು, ಈಜುಕೊಳ, ಸ್ಕೇಟಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ತರಗತಿಯ ಕೋಣೆಗಳು ವಿಶಾಲವಾಗಿದ್ದು, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಫಾರ್ಮ್ ಪಾರ್ಟಿ ಮಾಡಿರುವುದಕ್ಕೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲರಾದ ರಶ್ಮಿ‌ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ‌ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು‌ ಸಂತಸ ವ್ಯಕ್ತಪಡಿಸಿದರು.

ಶಾಲೆಯಲ್ಲಿ ವಿಶೇಷವಾಗಿ ಮಕ್ಕಳೊಂದಿಗೆ ಮಾತನಾಡುವ ಮರ ( ಟಾಕಿಂಗ್ ಟ್ರೀ)  ಪ್ರಮುಖ ಆಕರ್ಷಣೆಯಾಗಿತ್ತು. ಮ್ಯಾಜಿಕ್ ಮ್ಯಾಟ್ ಮಕ್ಕಳಿಗೆ ಆಟದ ಮೂಲಕ ಅಕ್ಷರ ಮತ್ತು ಸಂಖ್ಯೆಗಳನ್ನು ಗುರುತಿಸಲು ನೆರವಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

2 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

2 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

3 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

5 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

8 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

11 hours ago