ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.
ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ್ಯಾಂಪ್ವಾಕ್ ಮುದ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.
ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.
ಶಾಲೆಯ ಪ್ರಾಂಶುಪಾಲರಾದ ರಶ್ಮಿ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…