ಹಳ್ಳಿಯ ಸೊಗಡನ್ನು ನವಪೀಳಿಗೆಗೆ ಪರಿಚಯಿಸಿದ ನ್ಯಾಷನಲ್ ಪ್ರೈಡ್ ಶಾಲೆ

ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.

ಹೌದು, ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಆಯೋಜಿಸಿದ್ದ ಫಾರ್ಮ್ ಪಾರ್ಟಿ ಮಕ್ಕಳಿಗೆ ವಿನೂತನ ಅನುಭೂತಿ‌ ನೀಡಿತು.

ಹಸು, ಮೇಕೆ, ಕುರಿ, ಕೋಳಿ, ಕತ್ತೆ, ಕುದುರೆ, ಮೊಲ, ಟರ್ಕಿ‌ ಕೋಳಿ, ಹಂದಿ ಹಾಗೂ ವಿವಿಧ ತಳಿಯ ಶ್ವಾನಗಳನ್ನು ಪ್ರದರ್ಶಿಸಿ, ಪರಿಚಯಿಸಲಾಯಿತು. ಪುಟಾಣಿ ಮಕ್ಕಳು ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ತುಂಟ ನಗೆಯೊಂದಿಗೆ ಅವುಗಳ ಜೊತೆ ಪೋಟೋಗೆ ಪೋಸ್ ನೀಡಿದರು. ಮಕ್ಕಳು ಕುದುರೆ ಸವಾರಿ ಮಾಡಿ ಮೋಜು ಅನುಭವಿಸಿದರು. ಇದಲ್ಲದೇ ರೇಷ್ಮೆ ಹುಳುವಿನ ಜೀವನ ಚಕ್ರದ ವಿವಿಧ ಮಜಲುಗಳನ್ನು ನೇರವಾಗಿ ತೋರಿಸಲಾಯಿತು.

ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ‌್ಯಾಂಪ್‌ವಾಕ್ ಮುದ‌ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.

ಶಾಲೆಯ ಕಾರ್ಯದರ್ಶಿ ಸತೀಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ವರ್ಷವೂ ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿನೂತನ, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಇದೇ ಮೊದಲಿಗೆ ಮಕ್ಕಳಿಗೆ ಮನರಂಜನೆ ಜೊತೆಗೆ ವಿವಿಧ ಸಾಕುಪ್ರಾಣಿಗಳನ್ನು ನೇರವಾಗಿ ನೋಡಿ ಆನಂದಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್  ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.

ಶಾಲೆಯನ್ನು ಸುಸಜ್ಜಿತವಾಗಿ ನವೀಕರಿಸಿದ್ದು, ಈಜುಕೊಳ, ಸ್ಕೇಟಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ತರಗತಿಯ ಕೋಣೆಗಳು ವಿಶಾಲವಾಗಿದ್ದು, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಫಾರ್ಮ್ ಪಾರ್ಟಿ ಮಾಡಿರುವುದಕ್ಕೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲರಾದ ರಶ್ಮಿ‌ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ‌ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು‌ ಸಂತಸ ವ್ಯಕ್ತಪಡಿಸಿದರು.

ಶಾಲೆಯಲ್ಲಿ ವಿಶೇಷವಾಗಿ ಮಕ್ಕಳೊಂದಿಗೆ ಮಾತನಾಡುವ ಮರ ( ಟಾಕಿಂಗ್ ಟ್ರೀ)  ಪ್ರಮುಖ ಆಕರ್ಷಣೆಯಾಗಿತ್ತು. ಮ್ಯಾಜಿಕ್ ಮ್ಯಾಟ್ ಮಕ್ಕಳಿಗೆ ಆಟದ ಮೂಲಕ ಅಕ್ಷರ ಮತ್ತು ಸಂಖ್ಯೆಗಳನ್ನು ಗುರುತಿಸಲು ನೆರವಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.

Ramesh Babu

Journalist

Recent Posts

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

1 hour ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

14 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

15 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

19 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

22 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

1 day ago